ಕ್ರೀಡೆ

ಕುಲ್‌ದೀಪ್‌ ಯಾದವ್‌ಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು: ಅನಿಲ್ ಕುಂಬ್ಳೆ!

ಹೊಸದಿಲ್ಲಿ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿರುವ ಕುಲ್‌ದೀಪ್‌ ಯಾದವ್ ಭವಿಷ್ಯದಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆಂದು ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಭವಿಷ್ಯ ನುಡಿದಿದ್ದಾರೆ.

ಚೈನಾಮನ್‌ ಖ್ಯಾತಿಯ ಕುಲ್‌ದೀಪ್‌ ಯಾದವ್ ಭಾರತ ತಂಡದ ಪರ 8 ಟೆಸ್ಟ್ ಪಂದ್ಯಗಳಿಂದ 34 ವಿಕೆಟ್ ಪಡೆದಿದ್ದು, ಇದರಲ್ಲಿ ಮೂರು ಬಾರಿ 5 ವಿಕೆಟ್ ಸಾಧನೆ ಮಾಡಿದ್ದಾರೆ. ಆದರೆ, ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಆದರೆ, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಟೆಸ್ಟ್ ತಂಡಕ್ಕೆ ಕುಲ್‌ದೀಪ್‌ ಯಾದವ್ ಮಹತ್ವದ ಬಗ್ಗೆ ಕನ್ನಡಿಗ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಜಿಯೋ ಸಿನಿಮಾ ಜೊತೆ ಮಾತನಾಡಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಕುಲ್‌ದೀಪ್‌ ಯಾದವ್ ಟೆಸ್ಟ್‌ಗೆ ಮರಳುತ್ತಾರೆ: ಕುಂಬ್ಳೆ : “ಕುಲ್‌ದೀಪ್‌ ಯಾದವ್ ವಿಶ್ವ ದರ್ಜೆಯ ಸ್ಪಿನ್ನರ್‌ ಆಗಿದ್ದು, ಟೆಸ್ಟ್ ಕ್ರಿಕೆಟ್‌ಗೆ ಖಂಡಿತಾ ಮರಳಲಿದ್ದಾರೆ. ಲೆಗ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಸಂಘಟಿಸಿ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಲಿದ್ದಾರೆ. ಹಾಗಾಗಿ ತಂಡದಲ್ಲಿ ಲೆಗ್ ಸ್ಪಿನ್ನರ್‌ಗಳನ್ನು ಬೆಳೆಸಬೇಕು, ಅವಕಾಶ ಸಿಕ್ಕಿದಾಗಲೆಲ್ಲ ಅವರನ್ನು ತಂಡದೊಳಗೆ ಕರೆ ತರಬೇಕು,” ಎಂದು ಸ್ಪಿನ್ ದಿಗ್ಗಜ ಹೇಳಿದ್ದಾರೆ.

“ಕುಲ್‌ದೀಪ್ ಯಾದವ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ತುಂಬಾ ಒಳ್ಳೆಯ ಸ್ಪಿನ್ನರ್ ಆಗಿದ್ದಾರೆ. ಅವರಿಗೆ ಅವಕಾಶ ನೀಡಿದಾಗಲೆಲ್ಲ ಉತ್ತಮ ಪ್ರದರ್ಶನ ತೋರಿದ್ದಾರೆ. ವೈಟ್ ಬಾಲ್ ಸ್ವರೂಪದಲ್ಲಿಯೂ ಹಲವರು ಚೈನಾಮನ್‌ ಶೈಲಿಯನ್ನು ಹೊಂದಿದ್ದಾರೆ. ಆದರೆ, ಟೆಸ್ಟ್ ಸ್ವರೂಪದಲ್ಲಿ ಲೆಗ್‌ ಸ್ಪಿನ್ನರ್‌ಗಳ ಕೊರತೆ ಕಾಣಿಸುತ್ತಿದೆ,” ಎಂದು ಭಾರತ ತಂಡದ ಮಾಜಿ ನಾಯಕ ತಿಳಿಸಿದ್ದಾರೆ.

ಕುಲ್‌ದೀಪ್‌ ಯಾದವ್‌ ಅವರನ್ನು 4ನೇ ಸ್ಪಿನ್ನರ್‌ ಆಗಿ ಪರಿಗಣಿಸಬೇಕು: ರವಿಚಂದ್ರನ್ ಅಶ್ವಿನ್ ಅವರು ವೆಸ್ಟ್ ಇಂಡೀಸ್ ವಿರುದ್ಧ ವಿಂಡ್ಸರ್ ಪಾರ್ಕ್‌ನಲ್ಲಿ 12 ವಿಕೆಟ್ ಪಡೆದು ಭಾರತಕ್ಕೆ ಇನಿಂಗ್ಸ್ ಹಾಗೂ 141 ರನ್ ಗೆಲುವು ತಂದುಕೊಟ್ಟಿದ್ದಾರೆ. ಟೀಮ್ ಇಂಡಿಯಾದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ ಅವರೊಂದಿಗೆ ಕುಲ್‌ದೀಪ್‌ ಯಾದವ್ ಅವರನ್ನು ನಾಲ್ಕನೇ ಸ್ಪಿನ್ನರ್ ಆಗಿ ಟೆಸ್ಟ್ ತಂಡದಲ್ಲಿ ಪರಿಗಣಿಸಬೇಕು ಎಂದು ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ.

“ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರು ಟೀಮ್ ಇಂಡಿಯಾದಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇಬ್ಬರೂ ವಿಶ್ವದ ಶ್ರೇಷ್ಠ ಬೌಲರ್‌ಗಳಾಗಿದ್ದು, ಅಕ್ಷರ್ ಪಟೇಲ್ ಮೂರನೇ ಸ್ಪಿನ್ನರ್ ಆಯ್ಕೆಯಾಗಿದ್ದಾರೆ. ಈ ಮೂವರು ಸ್ಪಿನ್ನರ್‌ಗಳೊಂದಿಗೆ ಕುಲ್ದೀಪ್‌ ಯಾದವ್ ಅವರನ್ನು ಅವಕಾಶ ಸಿಕ್ಕಾಗ ತಂಡದಲ್ಲಿ ಸ್ಥಾನ ಕಲ್ಪಿಸಬೇಕು,” ಎಂದು ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ಹೇಳಿದ್ದಾರೆ.

ಮೊದಲನೇ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ ಪಡೆದಿದ್ದು, ಜುಲೈ 20 ರಿಂದ ಫೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗುವ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡದ ಸವಾಲನ್ನು ಎದುರಿಸಲಿದೆ.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

4 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

4 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

4 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

6 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

8 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

9 hours ago