ಕ್ರೀಡೆ

ಕುಲ್‌ದೀಪ್‌ ಯಾದವ್‌ಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು: ಅನಿಲ್ ಕುಂಬ್ಳೆ!

ಹೊಸದಿಲ್ಲಿ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿರುವ ಕುಲ್‌ದೀಪ್‌ ಯಾದವ್ ಭವಿಷ್ಯದಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆಂದು ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಭವಿಷ್ಯ ನುಡಿದಿದ್ದಾರೆ.

ಚೈನಾಮನ್‌ ಖ್ಯಾತಿಯ ಕುಲ್‌ದೀಪ್‌ ಯಾದವ್ ಭಾರತ ತಂಡದ ಪರ 8 ಟೆಸ್ಟ್ ಪಂದ್ಯಗಳಿಂದ 34 ವಿಕೆಟ್ ಪಡೆದಿದ್ದು, ಇದರಲ್ಲಿ ಮೂರು ಬಾರಿ 5 ವಿಕೆಟ್ ಸಾಧನೆ ಮಾಡಿದ್ದಾರೆ. ಆದರೆ, ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಆದರೆ, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಟೆಸ್ಟ್ ತಂಡಕ್ಕೆ ಕುಲ್‌ದೀಪ್‌ ಯಾದವ್ ಮಹತ್ವದ ಬಗ್ಗೆ ಕನ್ನಡಿಗ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಜಿಯೋ ಸಿನಿಮಾ ಜೊತೆ ಮಾತನಾಡಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಕುಲ್‌ದೀಪ್‌ ಯಾದವ್ ಟೆಸ್ಟ್‌ಗೆ ಮರಳುತ್ತಾರೆ: ಕುಂಬ್ಳೆ : “ಕುಲ್‌ದೀಪ್‌ ಯಾದವ್ ವಿಶ್ವ ದರ್ಜೆಯ ಸ್ಪಿನ್ನರ್‌ ಆಗಿದ್ದು, ಟೆಸ್ಟ್ ಕ್ರಿಕೆಟ್‌ಗೆ ಖಂಡಿತಾ ಮರಳಲಿದ್ದಾರೆ. ಲೆಗ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಸಂಘಟಿಸಿ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಲಿದ್ದಾರೆ. ಹಾಗಾಗಿ ತಂಡದಲ್ಲಿ ಲೆಗ್ ಸ್ಪಿನ್ನರ್‌ಗಳನ್ನು ಬೆಳೆಸಬೇಕು, ಅವಕಾಶ ಸಿಕ್ಕಿದಾಗಲೆಲ್ಲ ಅವರನ್ನು ತಂಡದೊಳಗೆ ಕರೆ ತರಬೇಕು,” ಎಂದು ಸ್ಪಿನ್ ದಿಗ್ಗಜ ಹೇಳಿದ್ದಾರೆ.

“ಕುಲ್‌ದೀಪ್ ಯಾದವ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ತುಂಬಾ ಒಳ್ಳೆಯ ಸ್ಪಿನ್ನರ್ ಆಗಿದ್ದಾರೆ. ಅವರಿಗೆ ಅವಕಾಶ ನೀಡಿದಾಗಲೆಲ್ಲ ಉತ್ತಮ ಪ್ರದರ್ಶನ ತೋರಿದ್ದಾರೆ. ವೈಟ್ ಬಾಲ್ ಸ್ವರೂಪದಲ್ಲಿಯೂ ಹಲವರು ಚೈನಾಮನ್‌ ಶೈಲಿಯನ್ನು ಹೊಂದಿದ್ದಾರೆ. ಆದರೆ, ಟೆಸ್ಟ್ ಸ್ವರೂಪದಲ್ಲಿ ಲೆಗ್‌ ಸ್ಪಿನ್ನರ್‌ಗಳ ಕೊರತೆ ಕಾಣಿಸುತ್ತಿದೆ,” ಎಂದು ಭಾರತ ತಂಡದ ಮಾಜಿ ನಾಯಕ ತಿಳಿಸಿದ್ದಾರೆ.

ಕುಲ್‌ದೀಪ್‌ ಯಾದವ್‌ ಅವರನ್ನು 4ನೇ ಸ್ಪಿನ್ನರ್‌ ಆಗಿ ಪರಿಗಣಿಸಬೇಕು: ರವಿಚಂದ್ರನ್ ಅಶ್ವಿನ್ ಅವರು ವೆಸ್ಟ್ ಇಂಡೀಸ್ ವಿರುದ್ಧ ವಿಂಡ್ಸರ್ ಪಾರ್ಕ್‌ನಲ್ಲಿ 12 ವಿಕೆಟ್ ಪಡೆದು ಭಾರತಕ್ಕೆ ಇನಿಂಗ್ಸ್ ಹಾಗೂ 141 ರನ್ ಗೆಲುವು ತಂದುಕೊಟ್ಟಿದ್ದಾರೆ. ಟೀಮ್ ಇಂಡಿಯಾದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ ಅವರೊಂದಿಗೆ ಕುಲ್‌ದೀಪ್‌ ಯಾದವ್ ಅವರನ್ನು ನಾಲ್ಕನೇ ಸ್ಪಿನ್ನರ್ ಆಗಿ ಟೆಸ್ಟ್ ತಂಡದಲ್ಲಿ ಪರಿಗಣಿಸಬೇಕು ಎಂದು ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ.

“ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರು ಟೀಮ್ ಇಂಡಿಯಾದಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇಬ್ಬರೂ ವಿಶ್ವದ ಶ್ರೇಷ್ಠ ಬೌಲರ್‌ಗಳಾಗಿದ್ದು, ಅಕ್ಷರ್ ಪಟೇಲ್ ಮೂರನೇ ಸ್ಪಿನ್ನರ್ ಆಯ್ಕೆಯಾಗಿದ್ದಾರೆ. ಈ ಮೂವರು ಸ್ಪಿನ್ನರ್‌ಗಳೊಂದಿಗೆ ಕುಲ್ದೀಪ್‌ ಯಾದವ್ ಅವರನ್ನು ಅವಕಾಶ ಸಿಕ್ಕಾಗ ತಂಡದಲ್ಲಿ ಸ್ಥಾನ ಕಲ್ಪಿಸಬೇಕು,” ಎಂದು ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ಹೇಳಿದ್ದಾರೆ.

ಮೊದಲನೇ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ ಪಡೆದಿದ್ದು, ಜುಲೈ 20 ರಿಂದ ಫೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗುವ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡದ ಸವಾಲನ್ನು ಎದುರಿಸಲಿದೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago