ಕ್ರೀಡೆ

ಡೇವಿಸ್ ಕಪ್‍ನಲ್ಲಿ ಕೊಡಗಿನ ಕುವರ: ವರ್ಲ್ಡ್‌‌ ಕಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡ ಭಾರತ

ಕೊಡಗು: ಅಂತರಾಷ್ಟ್ರೀಯ ಟೆನ್ನಿಸ್ ಜಗತ್ತಿನ ವರ್ಲ್ಡ್‌‌ ಕಪ್ ಎಂದೇ ಹೆಸರು ಪಡೆದಿರುವ ಟೆನ್ನಿಸ್ ಟೀಮ್ ಇವೆಂಟ್ ಪ್ರತಿಷ್ಠಿತ ಡೇವಿಸ್ ಕಪ್‍ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 4-0 ರಿಂದ ಸೋಲಿಸಿ ವರ್ಲ್ಡ್‌‌ ಕಪ್ ಗ್ರೂಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.

28ರ ಹರೆಯದ ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ತಂಡದ ವಿಜಯದಲ್ಲಿ ಭಾಗಿಯಾಗಿದ್ದಾರೆ.

60 ವರ್ಷಗಳ ಬಳಿಕ ಭಾರತ ಡೇವಿಸ್ ಕಪ್ ತಂಡವು ಪಾಕಿಸ್ತಾನಕ್ಕೆ ತೆರಳಿದ್ದು, ಆತಿಥೇಯ ತಂಡವನ್ನು ಭಾನುವಾರ 4 ಪಂದ್ಯಗಳಲ್ಲೂ ಸೋಲಿಸಿ ಡೇವಿಸ್ ಕಪ್‍ನ ವಲ್ರ್ಡ್ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿದೆ.

ಇದರಲ್ಲಿ 4ನೇ ಪಂದ್ಯದ ಸಿಂಗಲ್ಸ್‌ ವಿಭಾಗದಲ್ಲಿ, ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಎದುರಾಳಿ ಮಹಮ್ಮದ್ ಶೋಯಬ್ ಅವರನ್ನು 6-3, 6-4ರ ನೇರ ಸೆಟ್‍ಗಳಲ್ಲಿ ಮಣಿಸಿ ತಂಡದ ಗೆಲುವಿಗೆ ಕೈ ಜೋಡಿಸಿದರು.

ಡಬಲ್ಸ್ ವಿಭಾಗದಲ್ಲಿ ಭಾರತದ ಯುಕಿ ಬಾಂಬ್ರಿ – ಸಾಕೆತ್ ಮೈನೆನಿ ಜೋಡಿ ಗೆಲುವು ಸಾಧಿಸಿದರು. ಸಿಂಗಲ್ಸ್‍ನಲ್ಲಿ ರಾಮ್ ಕುಮಾರ್ ರಾಮನಾಥಾನ್, ಎನ್.ಶ್ರೀರಾಮ್ ಬಾಲಾಜಿ ಹಾಗೂ ಮೊದಲ ಬಾರಿ ಡೇವಿಸ್ ಕಪ್ ಆಡುತ್ತಿರುವ ನಿಕ್ಕಿ ಪೂಣಚ್ಚ ಅವರು ಗೆಲುವಿನ ನಗೆ ಬೀರಿದರು.

ಮೂಲತ ಮಡಿಕೇರಿ ತಾಲೂಕಿನ ಕಕ್ಕಬ್ಬೆಯವರಾದ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಆಂಧ್ರದ ಅನಂತಪುರದಲ್ಲಿ ನೆಲೆಸಿರುವ ಕಲಿಯಂಡ ಪೂಣಚ್ಚ ಹಾಗೂ ವೀಣಾ ದಂಪತಿಯ ಪುತ್ರ.

andolanait

Recent Posts

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

13 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

24 mins ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

38 mins ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

42 mins ago

ಮಹದೇಶ್ವರ ಬೆಟ್ಟ: ಪೌರಕಾರ್ಮಿಕರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ಎ.ಈ.ರಘು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…

2 hours ago

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

5 hours ago