ಕೊಡಗು: ಅಂತರಾಷ್ಟ್ರೀಯ ಟೆನ್ನಿಸ್ ಜಗತ್ತಿನ ವರ್ಲ್ಡ್ ಕಪ್ ಎಂದೇ ಹೆಸರು ಪಡೆದಿರುವ ಟೆನ್ನಿಸ್ ಟೀಮ್ ಇವೆಂಟ್ ಪ್ರತಿಷ್ಠಿತ ಡೇವಿಸ್ ಕಪ್ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 4-0 ರಿಂದ ಸೋಲಿಸಿ ವರ್ಲ್ಡ್ ಕಪ್ ಗ್ರೂಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.
28ರ ಹರೆಯದ ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ತಂಡದ ವಿಜಯದಲ್ಲಿ ಭಾಗಿಯಾಗಿದ್ದಾರೆ.
60 ವರ್ಷಗಳ ಬಳಿಕ ಭಾರತ ಡೇವಿಸ್ ಕಪ್ ತಂಡವು ಪಾಕಿಸ್ತಾನಕ್ಕೆ ತೆರಳಿದ್ದು, ಆತಿಥೇಯ ತಂಡವನ್ನು ಭಾನುವಾರ 4 ಪಂದ್ಯಗಳಲ್ಲೂ ಸೋಲಿಸಿ ಡೇವಿಸ್ ಕಪ್ನ ವಲ್ರ್ಡ್ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿದೆ.
ಇದರಲ್ಲಿ 4ನೇ ಪಂದ್ಯದ ಸಿಂಗಲ್ಸ್ ವಿಭಾಗದಲ್ಲಿ, ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಎದುರಾಳಿ ಮಹಮ್ಮದ್ ಶೋಯಬ್ ಅವರನ್ನು 6-3, 6-4ರ ನೇರ ಸೆಟ್ಗಳಲ್ಲಿ ಮಣಿಸಿ ತಂಡದ ಗೆಲುವಿಗೆ ಕೈ ಜೋಡಿಸಿದರು.
ಡಬಲ್ಸ್ ವಿಭಾಗದಲ್ಲಿ ಭಾರತದ ಯುಕಿ ಬಾಂಬ್ರಿ – ಸಾಕೆತ್ ಮೈನೆನಿ ಜೋಡಿ ಗೆಲುವು ಸಾಧಿಸಿದರು. ಸಿಂಗಲ್ಸ್ನಲ್ಲಿ ರಾಮ್ ಕುಮಾರ್ ರಾಮನಾಥಾನ್, ಎನ್.ಶ್ರೀರಾಮ್ ಬಾಲಾಜಿ ಹಾಗೂ ಮೊದಲ ಬಾರಿ ಡೇವಿಸ್ ಕಪ್ ಆಡುತ್ತಿರುವ ನಿಕ್ಕಿ ಪೂಣಚ್ಚ ಅವರು ಗೆಲುವಿನ ನಗೆ ಬೀರಿದರು.
ಮೂಲತ ಮಡಿಕೇರಿ ತಾಲೂಕಿನ ಕಕ್ಕಬ್ಬೆಯವರಾದ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಆಂಧ್ರದ ಅನಂತಪುರದಲ್ಲಿ ನೆಲೆಸಿರುವ ಕಲಿಯಂಡ ಪೂಣಚ್ಚ ಹಾಗೂ ವೀಣಾ ದಂಪತಿಯ ಪುತ್ರ.
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ…
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…