ಕ್ರೀಡೆ

ಡೇವಿಸ್ ಕಪ್‍ನಲ್ಲಿ ಕೊಡಗಿನ ಕುವರ: ವರ್ಲ್ಡ್‌‌ ಕಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡ ಭಾರತ

ಕೊಡಗು: ಅಂತರಾಷ್ಟ್ರೀಯ ಟೆನ್ನಿಸ್ ಜಗತ್ತಿನ ವರ್ಲ್ಡ್‌‌ ಕಪ್ ಎಂದೇ ಹೆಸರು ಪಡೆದಿರುವ ಟೆನ್ನಿಸ್ ಟೀಮ್ ಇವೆಂಟ್ ಪ್ರತಿಷ್ಠಿತ ಡೇವಿಸ್ ಕಪ್‍ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 4-0 ರಿಂದ ಸೋಲಿಸಿ ವರ್ಲ್ಡ್‌‌ ಕಪ್ ಗ್ರೂಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.

28ರ ಹರೆಯದ ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ತಂಡದ ವಿಜಯದಲ್ಲಿ ಭಾಗಿಯಾಗಿದ್ದಾರೆ.

60 ವರ್ಷಗಳ ಬಳಿಕ ಭಾರತ ಡೇವಿಸ್ ಕಪ್ ತಂಡವು ಪಾಕಿಸ್ತಾನಕ್ಕೆ ತೆರಳಿದ್ದು, ಆತಿಥೇಯ ತಂಡವನ್ನು ಭಾನುವಾರ 4 ಪಂದ್ಯಗಳಲ್ಲೂ ಸೋಲಿಸಿ ಡೇವಿಸ್ ಕಪ್‍ನ ವಲ್ರ್ಡ್ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿದೆ.

ಇದರಲ್ಲಿ 4ನೇ ಪಂದ್ಯದ ಸಿಂಗಲ್ಸ್‌ ವಿಭಾಗದಲ್ಲಿ, ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಎದುರಾಳಿ ಮಹಮ್ಮದ್ ಶೋಯಬ್ ಅವರನ್ನು 6-3, 6-4ರ ನೇರ ಸೆಟ್‍ಗಳಲ್ಲಿ ಮಣಿಸಿ ತಂಡದ ಗೆಲುವಿಗೆ ಕೈ ಜೋಡಿಸಿದರು.

ಡಬಲ್ಸ್ ವಿಭಾಗದಲ್ಲಿ ಭಾರತದ ಯುಕಿ ಬಾಂಬ್ರಿ – ಸಾಕೆತ್ ಮೈನೆನಿ ಜೋಡಿ ಗೆಲುವು ಸಾಧಿಸಿದರು. ಸಿಂಗಲ್ಸ್‍ನಲ್ಲಿ ರಾಮ್ ಕುಮಾರ್ ರಾಮನಾಥಾನ್, ಎನ್.ಶ್ರೀರಾಮ್ ಬಾಲಾಜಿ ಹಾಗೂ ಮೊದಲ ಬಾರಿ ಡೇವಿಸ್ ಕಪ್ ಆಡುತ್ತಿರುವ ನಿಕ್ಕಿ ಪೂಣಚ್ಚ ಅವರು ಗೆಲುವಿನ ನಗೆ ಬೀರಿದರು.

ಮೂಲತ ಮಡಿಕೇರಿ ತಾಲೂಕಿನ ಕಕ್ಕಬ್ಬೆಯವರಾದ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಆಂಧ್ರದ ಅನಂತಪುರದಲ್ಲಿ ನೆಲೆಸಿರುವ ಕಲಿಯಂಡ ಪೂಣಚ್ಚ ಹಾಗೂ ವೀಣಾ ದಂಪತಿಯ ಪುತ್ರ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago