ಕೊಡಗು: ಅಂತರಾಷ್ಟ್ರೀಯ ಟೆನ್ನಿಸ್ ಜಗತ್ತಿನ ವರ್ಲ್ಡ್ ಕಪ್ ಎಂದೇ ಹೆಸರು ಪಡೆದಿರುವ ಟೆನ್ನಿಸ್ ಟೀಮ್ ಇವೆಂಟ್ ಪ್ರತಿಷ್ಠಿತ ಡೇವಿಸ್ ಕಪ್ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 4-0 ರಿಂದ ಸೋಲಿಸಿ ವರ್ಲ್ಡ್ ಕಪ್ ಗ್ರೂಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.
28ರ ಹರೆಯದ ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ತಂಡದ ವಿಜಯದಲ್ಲಿ ಭಾಗಿಯಾಗಿದ್ದಾರೆ.
60 ವರ್ಷಗಳ ಬಳಿಕ ಭಾರತ ಡೇವಿಸ್ ಕಪ್ ತಂಡವು ಪಾಕಿಸ್ತಾನಕ್ಕೆ ತೆರಳಿದ್ದು, ಆತಿಥೇಯ ತಂಡವನ್ನು ಭಾನುವಾರ 4 ಪಂದ್ಯಗಳಲ್ಲೂ ಸೋಲಿಸಿ ಡೇವಿಸ್ ಕಪ್ನ ವಲ್ರ್ಡ್ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿದೆ.
ಇದರಲ್ಲಿ 4ನೇ ಪಂದ್ಯದ ಸಿಂಗಲ್ಸ್ ವಿಭಾಗದಲ್ಲಿ, ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಎದುರಾಳಿ ಮಹಮ್ಮದ್ ಶೋಯಬ್ ಅವರನ್ನು 6-3, 6-4ರ ನೇರ ಸೆಟ್ಗಳಲ್ಲಿ ಮಣಿಸಿ ತಂಡದ ಗೆಲುವಿಗೆ ಕೈ ಜೋಡಿಸಿದರು.
ಡಬಲ್ಸ್ ವಿಭಾಗದಲ್ಲಿ ಭಾರತದ ಯುಕಿ ಬಾಂಬ್ರಿ – ಸಾಕೆತ್ ಮೈನೆನಿ ಜೋಡಿ ಗೆಲುವು ಸಾಧಿಸಿದರು. ಸಿಂಗಲ್ಸ್ನಲ್ಲಿ ರಾಮ್ ಕುಮಾರ್ ರಾಮನಾಥಾನ್, ಎನ್.ಶ್ರೀರಾಮ್ ಬಾಲಾಜಿ ಹಾಗೂ ಮೊದಲ ಬಾರಿ ಡೇವಿಸ್ ಕಪ್ ಆಡುತ್ತಿರುವ ನಿಕ್ಕಿ ಪೂಣಚ್ಚ ಅವರು ಗೆಲುವಿನ ನಗೆ ಬೀರಿದರು.
ಮೂಲತ ಮಡಿಕೇರಿ ತಾಲೂಕಿನ ಕಕ್ಕಬ್ಬೆಯವರಾದ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಆಂಧ್ರದ ಅನಂತಪುರದಲ್ಲಿ ನೆಲೆಸಿರುವ ಕಲಿಯಂಡ ಪೂಣಚ್ಚ ಹಾಗೂ ವೀಣಾ ದಂಪತಿಯ ಪುತ್ರ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…