ಲಖನೌ: ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ಗೆ ಎಂದಿಗೂ ನಾಯಕತ್ವದ ಕೊರತೆ ಕಾಡವುದಿಲ್ಲ ಎಂದು ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಅಭಿಪ್ರಾಯಪಟ್ಟರು. ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ರಾಹುಲ್ ಅವರು ಅರ್ಧಶತಕ ಬಾರಿಸಿದ ಹಿನ್ನೆಲೆಯಲ್ಲಿ ಈ ಮಾತನ್ನು ಹೇಳಿದ್ದಾರೆ.
ಪಂದ್ಯದಲ್ಲಿ ರಾಹುಲ್ ಅವರು 56 ಎಸೆತಗಳಲ್ಲಿ 74 ರನ್ ಗಳಿಸಿದರು.
ಹಿಂದಿನ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ನ ನಾಯಕತ್ವವನ್ನು ರಾಹುಲ್ ಅವರು ವಹಿಸಿದ್ದರು. ಆ ಸಂದರ್ಭ ರೋಡ್ಸ್ ಕೂಡ ಆ ತಂಡದ ಕ್ಷೇತ್ರರಕ್ಷಣೆಯ ಕೋಚ್ ಆಗಿದ್ದರು.
‘ನಾಯಕನಾಗಿ ಅವರು ಮುಂದೆ ನಿಂತು ತಂಡವನ್ನು ಮುನ್ನಡೆಸುತ್ತಾರೆ. ಇಲ್ಲಿ ವರೆಗಿನ ಐಪಿಎಲ್ನ ಎಲ್ಲಾ ಆವೃತ್ತಿಗಳಲ್ಲಿ ರಾಹುಲ್ ಅವರು ಯಶಸ್ವಿಯಾಗಿದ್ದಾರೆ, ಅವರು ಆಟದ ಮೇಲೆ ಪ್ರಾಬಲ್ಯ ಹೊಂದಿರುವ ಬ್ಯಾಟರ್ ಆಗಿದ್ದಾರೆ. ನಾಯಕತ್ವದ ಕೊರತೆ ಅವರನ್ನು ಎಂದಿಗೂ ಕಾಡುವ ವಿಷಯವಲ್ಲ‘ ಎಂದರು.
‘ನಾಯಕತ್ವವನ್ನು ನೀಡಿದಾಗ ಅನೇಕ ಶ್ರೇಷ್ಠ ಬ್ಯಾಟರ್ಗಳು ಅದನ್ನು ಸರಿಯಾಗಿ ನಿಭಾಯಿಸುವುದರಲ್ಲಿ ಸೋಲುತ್ತಾರೆ. ಆದರೆ ರಾಹುಲ್ ಆರಂಭಿಕ ಬ್ಯಾಟರ್ ಆಗಿ ಮುನ್ನಡೆಸಿದ್ದಾರೆ. ಅವರ ಆಟ ನೋಡುವುದೇ ಸೊಗಸು ಎಂದು ನಾನು ಭಾವಿಸುತ್ತೇನೆ‘ ಎಂದು ರೋಡ್ಸ್ ಪಂದ್ಯದ ನಂತರದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಪಂಜಾಬ್ ವಿರುದ್ಧ ರಾಹುಲ್ ಅವರನ್ನು ಹೊರತು ಪಡಿಸಿ ಇತರ ಲಖನೌ ಜೋಡಿಯ ಸಾಥ್ ಸಿಕ್ಕಿ ಬ್ಯಾಟರ್ಗಳು ಪ್ರಭಾವ ಬೀರಲು ವಿಫಲವಾವಾದರು. ಆದರೂ ರಾಹುಲ್ 19ನೇ ಓವರ್ ವರೆಗೆ ಬ್ಯಾಟಿಂಗ್ ಮಾಡಿದರು. ನಾಯಕನಿಗೆ ಕೊನೆಯ ತನಕಗೆ ಉತ್ತಮ ಜೋಡಿಯ ಸಾಥ್ ಸಿಕ್ಕಿ ಸ್ಕೋರ್ ಹಿಗ್ಗಿಸಬಹುದೆಂದು ಭಾವಿಸಿದೆ‘ ಎಂದು ರೋಡ್ಸ್ ವಿಶ್ಲೇಷಿಸಿದರು.
ರಾಹುಲ್ ಅವರ ಅರ್ಧ ಶತಕದ ಹೊರತಾಗಿಯೂ ಪಂಜಾಬ್ ಕಿಂಗ್ಸ್ ತಂಡ 2 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…