ಕ್ರೀಡೆ

ನಾಯಕತ್ವದ ಕೊರತೆ ಕೆ.ಎಲ್‌.ರಾಹುಲ್‌ಗೆ ಎಂದಿಗೂ ಕಾಡದು: ಜಾಂಟಿ ರೋಡ್ಸ್

ಲಖನೌ: ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್‌ಗೆ ಎಂದಿಗೂ ನಾಯಕತ್ವದ ಕೊರತೆ ಕಾಡವುದಿಲ್ಲ ಎಂದು ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಅಭಿಪ್ರಾಯಪಟ್ಟರು. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ರಾಹುಲ್ ಅವರು ಅರ್ಧಶತಕ ಬಾರಿಸಿದ ಹಿನ್ನೆಲೆಯಲ್ಲಿ ಈ ಮಾತನ್ನು ಹೇಳಿದ್ದಾರೆ.

ಪಂದ್ಯದಲ್ಲಿ ರಾಹುಲ್ ಅವರು 56 ಎಸೆತಗಳಲ್ಲಿ 74 ರನ್ ಗಳಿಸಿದರು.

ಹಿಂದಿನ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್‌ನ ನಾಯಕತ್ವವನ್ನು ರಾಹುಲ್ ಅವರು ವಹಿಸಿದ್ದರು. ಆ ಸಂದರ್ಭ ರೋಡ್ಸ್ ಕೂಡ ಆ ತಂಡದ ಕ್ಷೇತ್ರರಕ್ಷಣೆಯ ಕೋಚ್ ಆಗಿದ್ದರು.

‘ನಾಯಕನಾಗಿ ಅವರು ಮುಂದೆ ನಿಂತು ತಂಡವನ್ನು ಮುನ್ನಡೆಸುತ್ತಾರೆ. ಇಲ್ಲಿ ವರೆಗಿನ ಐಪಿಎಲ್‌ನ ಎಲ್ಲಾ ಆವೃತ್ತಿಗಳಲ್ಲಿ ರಾಹುಲ್ ಅವರು ಯಶಸ್ವಿಯಾಗಿದ್ದಾರೆ, ಅವರು ಆಟದ ಮೇಲೆ ಪ್ರಾಬಲ್ಯ ಹೊಂದಿರುವ ಬ್ಯಾಟರ್ ಆಗಿದ್ದಾರೆ. ನಾಯಕತ್ವದ ಕೊರತೆ ಅವರನ್ನು ಎಂದಿಗೂ ಕಾಡುವ ವಿಷಯವಲ್ಲ‘ ಎಂದರು.

‘ನಾಯಕತ್ವವನ್ನು ನೀಡಿದಾಗ ಅನೇಕ ಶ್ರೇಷ್ಠ ಬ್ಯಾಟರ್‌ಗಳು ಅದನ್ನು ಸರಿಯಾಗಿ ನಿಭಾಯಿಸುವುದರಲ್ಲಿ ಸೋಲುತ್ತಾರೆ. ಆದರೆ ರಾಹುಲ್ ಆರಂಭಿಕ ಬ್ಯಾಟರ್ ಆಗಿ ಮುನ್ನಡೆಸಿದ್ದಾರೆ. ಅವರ ಆಟ ನೋಡುವುದೇ ಸೊಗಸು ಎಂದು ನಾನು ಭಾವಿಸುತ್ತೇನೆ‘ ಎಂದು ರೋಡ್ಸ್ ಪಂದ್ಯದ ನಂತರದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಪಂಜಾಬ್ ವಿರುದ್ಧ ರಾಹುಲ್ ಅವರನ್ನು ಹೊರತು ಪಡಿಸಿ ಇತರ ಲಖನೌ ಜೋಡಿಯ ಸಾಥ್ ಸಿಕ್ಕಿ ಬ್ಯಾಟರ್‌ಗಳು ಪ್ರಭಾವ ಬೀರಲು ವಿಫಲವಾವಾದರು. ಆದರೂ ರಾಹುಲ್ 19ನೇ ಓವರ್‌ ವರೆಗೆ ಬ್ಯಾಟಿಂಗ್ ಮಾಡಿದರು. ನಾಯಕನಿಗೆ ಕೊನೆಯ ತನಕಗೆ ಉತ್ತಮ ಜೋಡಿಯ ಸಾಥ್ ಸಿಕ್ಕಿ ಸ್ಕೋರ್ ಹಿಗ್ಗಿಸಬಹುದೆಂದು ಭಾವಿಸಿದೆ‘ ಎಂದು ರೋಡ್ಸ್ ವಿಶ್ಲೇಷಿಸಿದರು.

ರಾಹುಲ್ ಅವರ ಅರ್ಧ ಶತಕದ ಹೊರತಾಗಿಯೂ ಪಂಜಾಬ್ ಕಿಂಗ್ಸ್ ತಂಡ 2 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.

andolanait

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago