ಲಖನೌ: ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ಗೆ ಎಂದಿಗೂ ನಾಯಕತ್ವದ ಕೊರತೆ ಕಾಡವುದಿಲ್ಲ ಎಂದು ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಅಭಿಪ್ರಾಯಪಟ್ಟರು. ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ರಾಹುಲ್ ಅವರು ಅರ್ಧಶತಕ ಬಾರಿಸಿದ ಹಿನ್ನೆಲೆಯಲ್ಲಿ ಈ ಮಾತನ್ನು ಹೇಳಿದ್ದಾರೆ.
ಪಂದ್ಯದಲ್ಲಿ ರಾಹುಲ್ ಅವರು 56 ಎಸೆತಗಳಲ್ಲಿ 74 ರನ್ ಗಳಿಸಿದರು.
ಹಿಂದಿನ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ನ ನಾಯಕತ್ವವನ್ನು ರಾಹುಲ್ ಅವರು ವಹಿಸಿದ್ದರು. ಆ ಸಂದರ್ಭ ರೋಡ್ಸ್ ಕೂಡ ಆ ತಂಡದ ಕ್ಷೇತ್ರರಕ್ಷಣೆಯ ಕೋಚ್ ಆಗಿದ್ದರು.
‘ನಾಯಕನಾಗಿ ಅವರು ಮುಂದೆ ನಿಂತು ತಂಡವನ್ನು ಮುನ್ನಡೆಸುತ್ತಾರೆ. ಇಲ್ಲಿ ವರೆಗಿನ ಐಪಿಎಲ್ನ ಎಲ್ಲಾ ಆವೃತ್ತಿಗಳಲ್ಲಿ ರಾಹುಲ್ ಅವರು ಯಶಸ್ವಿಯಾಗಿದ್ದಾರೆ, ಅವರು ಆಟದ ಮೇಲೆ ಪ್ರಾಬಲ್ಯ ಹೊಂದಿರುವ ಬ್ಯಾಟರ್ ಆಗಿದ್ದಾರೆ. ನಾಯಕತ್ವದ ಕೊರತೆ ಅವರನ್ನು ಎಂದಿಗೂ ಕಾಡುವ ವಿಷಯವಲ್ಲ‘ ಎಂದರು.
‘ನಾಯಕತ್ವವನ್ನು ನೀಡಿದಾಗ ಅನೇಕ ಶ್ರೇಷ್ಠ ಬ್ಯಾಟರ್ಗಳು ಅದನ್ನು ಸರಿಯಾಗಿ ನಿಭಾಯಿಸುವುದರಲ್ಲಿ ಸೋಲುತ್ತಾರೆ. ಆದರೆ ರಾಹುಲ್ ಆರಂಭಿಕ ಬ್ಯಾಟರ್ ಆಗಿ ಮುನ್ನಡೆಸಿದ್ದಾರೆ. ಅವರ ಆಟ ನೋಡುವುದೇ ಸೊಗಸು ಎಂದು ನಾನು ಭಾವಿಸುತ್ತೇನೆ‘ ಎಂದು ರೋಡ್ಸ್ ಪಂದ್ಯದ ನಂತರದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಪಂಜಾಬ್ ವಿರುದ್ಧ ರಾಹುಲ್ ಅವರನ್ನು ಹೊರತು ಪಡಿಸಿ ಇತರ ಲಖನೌ ಜೋಡಿಯ ಸಾಥ್ ಸಿಕ್ಕಿ ಬ್ಯಾಟರ್ಗಳು ಪ್ರಭಾವ ಬೀರಲು ವಿಫಲವಾವಾದರು. ಆದರೂ ರಾಹುಲ್ 19ನೇ ಓವರ್ ವರೆಗೆ ಬ್ಯಾಟಿಂಗ್ ಮಾಡಿದರು. ನಾಯಕನಿಗೆ ಕೊನೆಯ ತನಕಗೆ ಉತ್ತಮ ಜೋಡಿಯ ಸಾಥ್ ಸಿಕ್ಕಿ ಸ್ಕೋರ್ ಹಿಗ್ಗಿಸಬಹುದೆಂದು ಭಾವಿಸಿದೆ‘ ಎಂದು ರೋಡ್ಸ್ ವಿಶ್ಲೇಷಿಸಿದರು.
ರಾಹುಲ್ ಅವರ ಅರ್ಧ ಶತಕದ ಹೊರತಾಗಿಯೂ ಪಂಜಾಬ್ ಕಿಂಗ್ಸ್ ತಂಡ 2 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…