ಕ್ರೀಡೆ

ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌

ಪ್ಯಾರಿಸ್:‌ ಭಾರತದ ಲಕ್ಷ್ಯ ಸೇನ್‌ ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಸ್ಪರ್ಧೆಯಲ್ಲಿ ಸ್ವದೇಶದ ಪ್ರಣಯ್‌ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

22 ವರ್ಷ ವಯಸ್ಸಿನ ಲಕ್ಷ್ಯ ಸೇನ್‌ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಎಂಟರ ಘಟ್ಟ ಪ್ರವೇಶಿಸಿದ ಭಾರತದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾದರು.

ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ನಲ್ಲಿ ಸೇನ್‌ ಅವರು, 21-12, 21-6ರಿಂದ ವಿಶ್ವದ 13ನೇ ಕ್ರಮಾಂಕದ ಪ್ರಣಯ್‌ ಅವರನ್ನು ಸೋಲಿಸಿದರು. ನಿಖರ ಸರ್ವ್‌, ಅದ್ಭುತ ಫೋರ್‌ ಹ್ಯಾಂಡ್‌ ಆಟದ ಮೂಲಕ ಅವರು ಕೇವಲ 30 ನಿಮಿಷದಲ್ಲಿ ನಿರಾಯಾಸವಾಗಿ ಗೆಲುವನ್ನು ದಕ್ಕಿಸಿಕೊಂಡರು.

ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಸೇನ್‌ ಅವರು, ಫೈನಲ್‌ನಲ್ಲಿ 12ನೇ ಶ್ರೇಯಾಂಕದ ಚೌ ಟಿಯೆನ್‌ ಚೆಮ್‌ ಅವರನ್ನು ಎದುರಿಸುವರು.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

30 mins ago

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…

36 mins ago

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

1 hour ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

2 hours ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

2 hours ago