ಡೆಹ್ರಡೂನ್ : ಭರ್ಜರಿ ಬ್ಯಾಟಿಂಗ್ ತೋರಿದ ಇಂಡಿಯಾ ಕ್ಯಾಪಿಟಲ್ಸ್ ತಂಡವು ಸದರ್ನ್ ಸೂಪರ್ಸ್ಟಾರ್ ತಂಡದ ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಲ್ಲಿನ ರಾಜೀವ್ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್ಎನ್ಎಸ್ಎಸ್ ನೀಡಿದ್ದ 163 ರನ್ ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್ ತಂಡವು 16.4 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 167 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಎಸ್ಎನ್ಎಸ್ಎಸ್ ತಂಡವು ಆರಂಭದಲ್ಲಿಯೇ ಮುನವೀರ (4) ವಿಕೆಟ್ ಕಳೆದುಕೊಂಡಿತು. ಡಿ ಸಿಲ್ವಾ (56) ಆಕರ್ಷಕ ಅರ್ಧ ಶತಕ ಸಿಡಿಸಿ ತಂಡಕ್ಕೆ ಚೇತರಿಕೆ ನೀಡಿದರು. ನಾಯಕ ರಾಸ್ ಟೈಲರ್ (24), ಗೋಸ್ವಾಮಿ (24), ಪವನ್ ನೇಗಿ (12), ಉಪುಲ್ ತರಂಗಾ (19) ತಂಡ 163 ರನ್ ಗುರಿ ಮುಟ್ಟಲು ಸಹಕರಿಸಿದರು.
ಇಂಡಿಯಾ ಕ್ಯಾಪಿಟಲ್ಸ್ ಪರ ರಸ್ಟಿ ತೀರನ್ 2, ನರ್ಸ್ 2, ಕೆ.ಪಿ ಅಪ್ಪಣ್ಣ ಮತ್ತು ಉದಾನಾ ತಲಾ 1 ವಿಕೆಟ್ ಪಡೆದರು.
163 ರನ್ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್ ನಾಯಕ ಗೌತಮ್ ಗಂಭೀರ್ ಅವರ ವಿಕೆಟ್ನ್ನು ಬೇಗನೆ ಕಳೆದುಕೊಂಡಿತು. ನಾಯಕ ಗಂಭೀರ್ ಕೇವಲ ಮೂರು ರನ್ಗಳಿಸಿ ಔಟಾದರು. ನಂತರ ಬಂದ ಜ್ಞಾನೇಶ್ವರ್ ಶೂನ್ಯಕ್ಕೆ ಔಟಾಗಿ ಬಂದ ದಾರಿಯಲ್ಲೇ ಹಿಂದಿರುಗಿದರು.
ಆರಂಭಿಕ ಆಟಗಾರ ರಿಕಾರ್ಡೋ ಪೋವೆಲ್ ಹಾಗೂ ಎಡ್ವರ್ಡ್ಸ್ ಅವರ ಜೊತೆಯಾಟ ಇಂಡಿಯಾ ಕ್ಯಾಪಿಟಲ್ಸ್ ತಂಡ ದಿಕ್ಕನ್ನೇ ಬದಲಾಯಿಸಿದರು. ಪೋವೆಲ್ 57 ಎಸೆತಗಳಲ್ಲಿ 6 ಬೌಂಡರಿ ಹಾಗೂ 10 ಸಿಕ್ಸರ್ ಮೂಲಕ 100 ರನ್ ಸಿಡಿsiದರೇ, ಎಡ್ವರ್ಡ್ಸ್ 45 ರನ್ ಗಳಿಸಿ ತಂಡವನ್ನು ಗೆಲುವಿನ ಸನಿಹ ಕೊಂಡ್ಯೋಯ್ದರು. ಕೇವಿನ್ ಪೀಟರ್ಸನ್ 4 ರನ್ ಗಳಿಸಿದರು. ಅಂತಿಮವಾಗಿ 16.4 ಓವರ್ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿದರು.
ಎಸ್ಎನ್ಎಸ್ಎಸ್ ಪರ ಸುರಂಗ ಲಕ್ಮಾಲ್ 1 ಪಡೆದರು.
ಪಂದ್ಯ ಶ್ರೇಷ್ಠ : ರಿಕಾರ್ಡೋ ಪೋವೆಲ್
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…