ಕ್ರೀಡೆ

ಲೆಜೆಂಡ್ಸ್‌ ಲೀಗ್‌: ಇಂಡಿಯಾ ಕ್ಯಾಪಿಟಲ್ಸ್‌ಗೆ ಭರ್ಜರಿ ಗೆಲುವು

ಡೆಹ್ರಡೂನ್‌  : ಭರ್ಜರಿ ಬ್ಯಾಟಿಂಗ್‌ ತೋರಿದ ಇಂಡಿಯಾ ಕ್ಯಾಪಿಟಲ್ಸ್‌ ತಂಡವು ಸದರ್ನ್‌ ಸೂಪರ್‌ಸ್ಟಾರ್‌ ತಂಡದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಲ್ಲಿನ ರಾಜೀವ್‌ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್‌ಎನ್‌ಎಸ್‌ಎಸ್‌ ನೀಡಿದ್ದ 163 ರನ್‌ ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್‌ ತಂಡವು 16.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 167 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಎಸ್‌ಎನ್‌ಎಸ್‌ಎಸ್‌ ತಂಡವು ಆರಂಭದಲ್ಲಿಯೇ ಮುನವೀರ (4) ವಿಕೆಟ್‌ ಕಳೆದುಕೊಂಡಿತು. ಡಿ ಸಿಲ್ವಾ (56) ಆಕರ್ಷಕ ಅರ್ಧ ಶತಕ ಸಿಡಿಸಿ ತಂಡಕ್ಕೆ ಚೇತರಿಕೆ ನೀಡಿದರು. ನಾಯಕ ರಾಸ್‌ ಟೈಲರ್‌ (24), ಗೋಸ್ವಾಮಿ (24), ಪವನ್‌ ನೇಗಿ (12), ಉಪುಲ್‌ ತರಂಗಾ (19) ತಂಡ 163 ರನ್‌ ಗುರಿ ಮುಟ್ಟಲು ಸಹಕರಿಸಿದರು.

ಇಂಡಿಯಾ ಕ್ಯಾಪಿಟಲ್ಸ್‌ ಪರ ರಸ್ಟಿ ತೀರನ್‌ 2, ನರ್ಸ್‌ 2, ಕೆ.ಪಿ ಅಪ್ಪಣ್ಣ ಮತ್ತು ಉದಾನಾ ತಲಾ 1 ವಿಕೆಟ್‌ ಪಡೆದರು.

163 ರನ್‌ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್‌ ನಾಯಕ ಗೌತಮ್‌ ಗಂಭೀರ್‌ ಅವರ ವಿಕೆಟ್‌ನ್ನು ಬೇಗನೆ ಕಳೆದುಕೊಂಡಿತು. ನಾಯಕ ಗಂಭೀರ್‌ ಕೇವಲ ಮೂರು ರನ್‌ಗಳಿಸಿ ಔಟಾದರು. ನಂತರ ಬಂದ ಜ್ಞಾನೇಶ್ವರ್‌ ಶೂನ್ಯಕ್ಕೆ ಔಟಾಗಿ ಬಂದ ದಾರಿಯಲ್ಲೇ ಹಿಂದಿರುಗಿದರು.

ಆರಂಭಿಕ ಆಟಗಾರ ರಿಕಾರ್ಡೋ ಪೋವೆಲ್‌ ಹಾಗೂ ಎಡ್ವರ್ಡ್ಸ್‌ ಅವರ ಜೊತೆಯಾಟ ಇಂಡಿಯಾ ಕ್ಯಾಪಿಟಲ್ಸ್‌ ತಂಡ ದಿಕ್ಕನ್ನೇ ಬದಲಾಯಿಸಿದರು. ಪೋವೆಲ್‌ 57 ಎಸೆತಗಳಲ್ಲಿ 6 ಬೌಂಡರಿ ಹಾಗೂ 10 ಸಿಕ್ಸರ್‌ ಮೂಲಕ 100 ರನ್‌ ಸಿಡಿsiದರೇ, ಎಡ್ವರ್ಡ್ಸ್‌ 45 ರನ್‌ ಗಳಿಸಿ ತಂಡವನ್ನು ಗೆಲುವಿನ ಸನಿಹ ಕೊಂಡ್ಯೋಯ್ದರು. ಕೇವಿನ್‌ ಪೀಟರ್‌ಸನ್‌ 4 ರನ್‌ ಗಳಿಸಿದರು. ಅಂತಿಮವಾಗಿ 16.4 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿದರು.

ಎಸ್‌ಎನ್‌ಎಸ್‌ಎಸ್‌ ಪರ ಸುರಂಗ ಲಕ್ಮಾಲ್‌ 1 ಪಡೆದರು.

ಪಂದ್ಯ ಶ್ರೇಷ್ಠ : ರಿಕಾರ್ಡೋ ಪೋವೆಲ್‌

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

30 mins ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

55 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

1 hour ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

1 hour ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

2 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

2 hours ago