ಡೆಹ್ರಡೂನ್ : ಭರ್ಜರಿ ಬ್ಯಾಟಿಂಗ್ ತೋರಿದ ಇಂಡಿಯಾ ಕ್ಯಾಪಿಟಲ್ಸ್ ತಂಡವು ಸದರ್ನ್ ಸೂಪರ್ಸ್ಟಾರ್ ತಂಡದ ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಲ್ಲಿನ ರಾಜೀವ್ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್ಎನ್ಎಸ್ಎಸ್ ನೀಡಿದ್ದ 163 ರನ್ ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್ ತಂಡವು 16.4 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 167 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಎಸ್ಎನ್ಎಸ್ಎಸ್ ತಂಡವು ಆರಂಭದಲ್ಲಿಯೇ ಮುನವೀರ (4) ವಿಕೆಟ್ ಕಳೆದುಕೊಂಡಿತು. ಡಿ ಸಿಲ್ವಾ (56) ಆಕರ್ಷಕ ಅರ್ಧ ಶತಕ ಸಿಡಿಸಿ ತಂಡಕ್ಕೆ ಚೇತರಿಕೆ ನೀಡಿದರು. ನಾಯಕ ರಾಸ್ ಟೈಲರ್ (24), ಗೋಸ್ವಾಮಿ (24), ಪವನ್ ನೇಗಿ (12), ಉಪುಲ್ ತರಂಗಾ (19) ತಂಡ 163 ರನ್ ಗುರಿ ಮುಟ್ಟಲು ಸಹಕರಿಸಿದರು.
ಇಂಡಿಯಾ ಕ್ಯಾಪಿಟಲ್ಸ್ ಪರ ರಸ್ಟಿ ತೀರನ್ 2, ನರ್ಸ್ 2, ಕೆ.ಪಿ ಅಪ್ಪಣ್ಣ ಮತ್ತು ಉದಾನಾ ತಲಾ 1 ವಿಕೆಟ್ ಪಡೆದರು.
163 ರನ್ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್ ನಾಯಕ ಗೌತಮ್ ಗಂಭೀರ್ ಅವರ ವಿಕೆಟ್ನ್ನು ಬೇಗನೆ ಕಳೆದುಕೊಂಡಿತು. ನಾಯಕ ಗಂಭೀರ್ ಕೇವಲ ಮೂರು ರನ್ಗಳಿಸಿ ಔಟಾದರು. ನಂತರ ಬಂದ ಜ್ಞಾನೇಶ್ವರ್ ಶೂನ್ಯಕ್ಕೆ ಔಟಾಗಿ ಬಂದ ದಾರಿಯಲ್ಲೇ ಹಿಂದಿರುಗಿದರು.
ಆರಂಭಿಕ ಆಟಗಾರ ರಿಕಾರ್ಡೋ ಪೋವೆಲ್ ಹಾಗೂ ಎಡ್ವರ್ಡ್ಸ್ ಅವರ ಜೊತೆಯಾಟ ಇಂಡಿಯಾ ಕ್ಯಾಪಿಟಲ್ಸ್ ತಂಡ ದಿಕ್ಕನ್ನೇ ಬದಲಾಯಿಸಿದರು. ಪೋವೆಲ್ 57 ಎಸೆತಗಳಲ್ಲಿ 6 ಬೌಂಡರಿ ಹಾಗೂ 10 ಸಿಕ್ಸರ್ ಮೂಲಕ 100 ರನ್ ಸಿಡಿsiದರೇ, ಎಡ್ವರ್ಡ್ಸ್ 45 ರನ್ ಗಳಿಸಿ ತಂಡವನ್ನು ಗೆಲುವಿನ ಸನಿಹ ಕೊಂಡ್ಯೋಯ್ದರು. ಕೇವಿನ್ ಪೀಟರ್ಸನ್ 4 ರನ್ ಗಳಿಸಿದರು. ಅಂತಿಮವಾಗಿ 16.4 ಓವರ್ಗಳಲ್ಲಿ ಕೇವಲ ಮೂರು ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿದರು.
ಎಸ್ಎನ್ಎಸ್ಎಸ್ ಪರ ಸುರಂಗ ಲಕ್ಮಾಲ್ 1 ಪಡೆದರು.
ಪಂದ್ಯ ಶ್ರೇಷ್ಠ : ರಿಕಾರ್ಡೋ ಪೋವೆಲ್
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…