ಕ್ರೀಡೆ

ಲೆಜೆಂಡ್ಸ್‌ ಲೀಗ್‌: ಇಂಡಿಯಾ ಕ್ಯಾಪಿಟಲ್ಸ್‌ಗೆ ಭರ್ಜರಿ ಗೆಲುವು

ಡೆಹ್ರಡೂನ್‌  : ಭರ್ಜರಿ ಬ್ಯಾಟಿಂಗ್‌ ತೋರಿದ ಇಂಡಿಯಾ ಕ್ಯಾಪಿಟಲ್ಸ್‌ ತಂಡವು ಸದರ್ನ್‌ ಸೂಪರ್‌ಸ್ಟಾರ್‌ ತಂಡದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಲ್ಲಿನ ರಾಜೀವ್‌ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್‌ಎನ್‌ಎಸ್‌ಎಸ್‌ ನೀಡಿದ್ದ 163 ರನ್‌ ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್‌ ತಂಡವು 16.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 167 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಎಸ್‌ಎನ್‌ಎಸ್‌ಎಸ್‌ ತಂಡವು ಆರಂಭದಲ್ಲಿಯೇ ಮುನವೀರ (4) ವಿಕೆಟ್‌ ಕಳೆದುಕೊಂಡಿತು. ಡಿ ಸಿಲ್ವಾ (56) ಆಕರ್ಷಕ ಅರ್ಧ ಶತಕ ಸಿಡಿಸಿ ತಂಡಕ್ಕೆ ಚೇತರಿಕೆ ನೀಡಿದರು. ನಾಯಕ ರಾಸ್‌ ಟೈಲರ್‌ (24), ಗೋಸ್ವಾಮಿ (24), ಪವನ್‌ ನೇಗಿ (12), ಉಪುಲ್‌ ತರಂಗಾ (19) ತಂಡ 163 ರನ್‌ ಗುರಿ ಮುಟ್ಟಲು ಸಹಕರಿಸಿದರು.

ಇಂಡಿಯಾ ಕ್ಯಾಪಿಟಲ್ಸ್‌ ಪರ ರಸ್ಟಿ ತೀರನ್‌ 2, ನರ್ಸ್‌ 2, ಕೆ.ಪಿ ಅಪ್ಪಣ್ಣ ಮತ್ತು ಉದಾನಾ ತಲಾ 1 ವಿಕೆಟ್‌ ಪಡೆದರು.

163 ರನ್‌ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್‌ ನಾಯಕ ಗೌತಮ್‌ ಗಂಭೀರ್‌ ಅವರ ವಿಕೆಟ್‌ನ್ನು ಬೇಗನೆ ಕಳೆದುಕೊಂಡಿತು. ನಾಯಕ ಗಂಭೀರ್‌ ಕೇವಲ ಮೂರು ರನ್‌ಗಳಿಸಿ ಔಟಾದರು. ನಂತರ ಬಂದ ಜ್ಞಾನೇಶ್ವರ್‌ ಶೂನ್ಯಕ್ಕೆ ಔಟಾಗಿ ಬಂದ ದಾರಿಯಲ್ಲೇ ಹಿಂದಿರುಗಿದರು.

ಆರಂಭಿಕ ಆಟಗಾರ ರಿಕಾರ್ಡೋ ಪೋವೆಲ್‌ ಹಾಗೂ ಎಡ್ವರ್ಡ್ಸ್‌ ಅವರ ಜೊತೆಯಾಟ ಇಂಡಿಯಾ ಕ್ಯಾಪಿಟಲ್ಸ್‌ ತಂಡ ದಿಕ್ಕನ್ನೇ ಬದಲಾಯಿಸಿದರು. ಪೋವೆಲ್‌ 57 ಎಸೆತಗಳಲ್ಲಿ 6 ಬೌಂಡರಿ ಹಾಗೂ 10 ಸಿಕ್ಸರ್‌ ಮೂಲಕ 100 ರನ್‌ ಸಿಡಿsiದರೇ, ಎಡ್ವರ್ಡ್ಸ್‌ 45 ರನ್‌ ಗಳಿಸಿ ತಂಡವನ್ನು ಗೆಲುವಿನ ಸನಿಹ ಕೊಂಡ್ಯೋಯ್ದರು. ಕೇವಿನ್‌ ಪೀಟರ್‌ಸನ್‌ 4 ರನ್‌ ಗಳಿಸಿದರು. ಅಂತಿಮವಾಗಿ 16.4 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿದರು.

ಎಸ್‌ಎನ್‌ಎಸ್‌ಎಸ್‌ ಪರ ಸುರಂಗ ಲಕ್ಮಾಲ್‌ 1 ಪಡೆದರು.

ಪಂದ್ಯ ಶ್ರೇಷ್ಠ : ರಿಕಾರ್ಡೋ ಪೋವೆಲ್‌

andolanait

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

54 seconds ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

6 mins ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

11 mins ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

41 mins ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

13 hours ago