ಕ್ರೀಡೆ

ಲೆಜೆಂಡ್ಸ್‌ ಲೀಗ್‌: ಇಂಡಿಯಾ ಕ್ಯಾಪಿಟಲ್ಸ್‌ಗೆ ಭರ್ಜರಿ ಗೆಲುವು

ಡೆಹ್ರಡೂನ್‌  : ಭರ್ಜರಿ ಬ್ಯಾಟಿಂಗ್‌ ತೋರಿದ ಇಂಡಿಯಾ ಕ್ಯಾಪಿಟಲ್ಸ್‌ ತಂಡವು ಸದರ್ನ್‌ ಸೂಪರ್‌ಸ್ಟಾರ್‌ ತಂಡದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಲ್ಲಿನ ರಾಜೀವ್‌ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್‌ಎನ್‌ಎಸ್‌ಎಸ್‌ ನೀಡಿದ್ದ 163 ರನ್‌ ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್‌ ತಂಡವು 16.4 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 167 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಎಸ್‌ಎನ್‌ಎಸ್‌ಎಸ್‌ ತಂಡವು ಆರಂಭದಲ್ಲಿಯೇ ಮುನವೀರ (4) ವಿಕೆಟ್‌ ಕಳೆದುಕೊಂಡಿತು. ಡಿ ಸಿಲ್ವಾ (56) ಆಕರ್ಷಕ ಅರ್ಧ ಶತಕ ಸಿಡಿಸಿ ತಂಡಕ್ಕೆ ಚೇತರಿಕೆ ನೀಡಿದರು. ನಾಯಕ ರಾಸ್‌ ಟೈಲರ್‌ (24), ಗೋಸ್ವಾಮಿ (24), ಪವನ್‌ ನೇಗಿ (12), ಉಪುಲ್‌ ತರಂಗಾ (19) ತಂಡ 163 ರನ್‌ ಗುರಿ ಮುಟ್ಟಲು ಸಹಕರಿಸಿದರು.

ಇಂಡಿಯಾ ಕ್ಯಾಪಿಟಲ್ಸ್‌ ಪರ ರಸ್ಟಿ ತೀರನ್‌ 2, ನರ್ಸ್‌ 2, ಕೆ.ಪಿ ಅಪ್ಪಣ್ಣ ಮತ್ತು ಉದಾನಾ ತಲಾ 1 ವಿಕೆಟ್‌ ಪಡೆದರು.

163 ರನ್‌ಗಳ ಗುರಿ ಬೆನ್ನಟ್ಟಿದ ಇಂಡಿಯಾ ಕ್ಯಾಪಿಟಲ್ಸ್‌ ನಾಯಕ ಗೌತಮ್‌ ಗಂಭೀರ್‌ ಅವರ ವಿಕೆಟ್‌ನ್ನು ಬೇಗನೆ ಕಳೆದುಕೊಂಡಿತು. ನಾಯಕ ಗಂಭೀರ್‌ ಕೇವಲ ಮೂರು ರನ್‌ಗಳಿಸಿ ಔಟಾದರು. ನಂತರ ಬಂದ ಜ್ಞಾನೇಶ್ವರ್‌ ಶೂನ್ಯಕ್ಕೆ ಔಟಾಗಿ ಬಂದ ದಾರಿಯಲ್ಲೇ ಹಿಂದಿರುಗಿದರು.

ಆರಂಭಿಕ ಆಟಗಾರ ರಿಕಾರ್ಡೋ ಪೋವೆಲ್‌ ಹಾಗೂ ಎಡ್ವರ್ಡ್ಸ್‌ ಅವರ ಜೊತೆಯಾಟ ಇಂಡಿಯಾ ಕ್ಯಾಪಿಟಲ್ಸ್‌ ತಂಡ ದಿಕ್ಕನ್ನೇ ಬದಲಾಯಿಸಿದರು. ಪೋವೆಲ್‌ 57 ಎಸೆತಗಳಲ್ಲಿ 6 ಬೌಂಡರಿ ಹಾಗೂ 10 ಸಿಕ್ಸರ್‌ ಮೂಲಕ 100 ರನ್‌ ಸಿಡಿsiದರೇ, ಎಡ್ವರ್ಡ್ಸ್‌ 45 ರನ್‌ ಗಳಿಸಿ ತಂಡವನ್ನು ಗೆಲುವಿನ ಸನಿಹ ಕೊಂಡ್ಯೋಯ್ದರು. ಕೇವಿನ್‌ ಪೀಟರ್‌ಸನ್‌ 4 ರನ್‌ ಗಳಿಸಿದರು. ಅಂತಿಮವಾಗಿ 16.4 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್‌ ಕಳೆದುಕೊಂಡು ಗೆಲುವಿನ ದಡ ಸೇರಿದರು.

ಎಸ್‌ಎನ್‌ಎಸ್‌ಎಸ್‌ ಪರ ಸುರಂಗ ಲಕ್ಮಾಲ್‌ 1 ಪಡೆದರು.

ಪಂದ್ಯ ಶ್ರೇಷ್ಠ : ರಿಕಾರ್ಡೋ ಪೋವೆಲ್‌

andolanait

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

7 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

11 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago