ಕ್ರೀಡೆ

ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್: ಪಠಾಣ್ ತಂಡದ ವಿರುದ್ಧ ಹರ್ಭಜನ್‌ ಟೀಮ್‌ಗೆ 89 ರನ್‌ಗಳ ಜಯ

ಪ್ರಸ್ತುತ ನಡೆಯುತ್ತಿರುವ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ನ ಆರನೇ ಲೀಗ್‌ ಪಂದ್ಯ ನಿನ್ನೆ ( ನವೆಂಬರ್‌ 24 ) ಡೆಹ್ರಾಡೂನ್‌ನ ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಹರ್ಭಜನ್‌ ಸಿಂಗ್‌ ನಾಯಕತ್ವದ ಟೈಗರ್ಸ್‌ ತಂಡ ಇರ್ಫಾನ್‌ ಪಠಾಣ್ ನಾಯಕತ್ವದ ಭಿಲ್ವಾರಾ ಕಿಂಗ್ಸ್‌ ತಂಡದ ವಿರುದ್ಧ 89 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿತು. ಮಣಿಪಾಲ್‌ ಟೈಗರ್ಸ್‌ ತಂಡ 3 ವಿಕೆಟ್‌ ನಷ್ಟಕ್ಕೆ 211 ರನ್‌ ಕಲೆಹಾಕಿದರೆ, ಭಿಲ್ವಾರಾ ಕಿಂಗ್ಸ್‌ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 122 ರನ್‌ ಕಲೆಹಾಕಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಣಿಪಾಲ್‌ ಟೈಗರ್ಸ್‌ ತಂಡದ ಪರ ಆರಂಭಿಕರಾಗಿ ರಾಬಿನ್‌ ಉತ್ತಪ್ಪ ಹಾಗೂ ಚಡ್‌ವಿಕ್‌ ವಾಲ್ಟನ್‌ ಕಣಕ್ಕಿಳಿದರು. ಉತ್ತಪ್ಪ 30 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 2 ಬೌಂಡರಿ ಸಹಿತ 51 ನ್‌ ಬಾರಿಸಿದರೆ, ವಾಲ್ಟನ್‌ 55 ಎಸೆತಗಳಲ್ಲಿ 6 ಸಿಕ್ಸರ್‌ ಹಾಗೂ 9 ಬೌಂಡರಿ ಸಹಿತ ಭರ್ಜರಿ 104 ರನ್‌ ಬಾರಿಸಿದರು. ಇನ್ನುಳಿದಂತೆ ಹ್ಯಾಮಿಲ್ಟನ್ ಮಸಕಾಡ್ಜಾ 37, ತಿಸಾರಾ ಪೆರೆರಾ 6, ಕೊಲಿನ್‌ ಡಿ ಗ್ರಾಂಡ್‌ಹೋಮ್‌ ಅಜೇಯ 1 ಹಾಗೂ ಏಂಜೆಲೋ ಪೆರೆರಾ ಅಜೇಯ 3 ರನ್‌ ಬಾರಿಸಿದರು. ಭಿಲ್ವಾರಾ ಕಿಂಗ್ಸ್‌ ಪರ ಕ್ರಿಸ್ಟೋಫರ್‌ ಬಾರ್ನ್‌ವೆಲ್‌ 2 ಹಾಗೂ ರಾಹುಲ್‌ ಶರ್ಮಾ ಒಂದು ವಿಕೆಟ್‌ ಪಡೆದರು.

ಮಣಿಪಾಲ್‌ ಟೈಗರ್ಸ್‌ ನೀಡಿದ ಬೃಹತ್‌ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಭಿಲ್ವಾರಾ ಕಿಂಗ್ಸ್‌ ಪರ ತಿಲಕರತ್ನೆ ದಿಲ್‌ಶಾನ್‌ 26, ಸೊಲೊಮನ್‌ ಮೈರ್‌ 3, ಲೆಂಡ್ಲ್‌ ಸಿಮನ್ಸ್‌ ಡಕ್‌ಔಟ್‌, ರಾಬಿನ್‌ ಬಿಸ್ಟ್‌ 9, ಯೂಸುಫ್‌ ಪಠಾಣ್‌ ‌16, ಕ್ರಿಸ್ಟೋಫರ್‌ ಬಾರ್ನ್‌ವೆಲ್‌ 16, ಇರ್ಫಾನ್‌ ಪಠಾಣ್‌ 5, ಜೆಸಾಲ್‌ ಕಾರಿಯ 2, ಇಕ್ಬಾಲ್‌ ಅಬ್ದುಲ್ಲಾ ಅಜೇಯ 10 ಹಾಗೂ ಅನುರೀತ್‌ ಸಿಂಗ್‌ ಅಜೇಯ 18 ರನ್‌ ಗಳಿಸಿದರು. ಮಣಿಪಾಲ್‌ ಟೈಗರ್ಸ್‌ ತಂಡದ ಪರ ನಾಯಕ ಇಮ್ರಾನ್‌ ಖಾನ್‌ 3 ವಿಕೆಟ್‌, ಪರ್ವಿಂದರ್‌ ಅವಾನಾ 2 ವಿಕೆಟ್‌, ಮಿಚೆಲ್‌ ಮೆಕ್‌ಕ್ಲೆಗಾನ್‌, ಪ್ರವೀಣ್‌ ಗುಪ್ತಾ ಹಾಗೂ ಹರ್ಭಜನ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಈ ಗೆಲುವಿನೊಂದಿಗೆ ಟೂರ್ನಿಯಲ್ಲಿ ತನ್ನ ಎರಡನೇ ಜಯವನ್ನು ಸಾಧಿಸಿದ ಮಣಿಪಾಲ್‌ ಟೈಗರ್ಸ್‌ ತಂಡ ಹೆಚ್ಚು ನೆಟ್‌ ರನ್‌ ರೇಟ್‌ ಪಡೆಯುವ ಮೂಲಕ ತನ್ನಷ್ಟೇ ಅಂಕ ಪಡೆದಿದ್ದ ಅರ್ಬನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

andolana

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

12 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

13 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

15 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

15 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

17 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

17 hours ago