ಕ್ರೀಡೆ

ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್: ಪಠಾಣ್ ತಂಡದ ವಿರುದ್ಧ ಹರ್ಭಜನ್‌ ಟೀಮ್‌ಗೆ 89 ರನ್‌ಗಳ ಜಯ

ಪ್ರಸ್ತುತ ನಡೆಯುತ್ತಿರುವ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ನ ಆರನೇ ಲೀಗ್‌ ಪಂದ್ಯ ನಿನ್ನೆ ( ನವೆಂಬರ್‌ 24 ) ಡೆಹ್ರಾಡೂನ್‌ನ ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಹರ್ಭಜನ್‌ ಸಿಂಗ್‌ ನಾಯಕತ್ವದ ಟೈಗರ್ಸ್‌ ತಂಡ ಇರ್ಫಾನ್‌ ಪಠಾಣ್ ನಾಯಕತ್ವದ ಭಿಲ್ವಾರಾ ಕಿಂಗ್ಸ್‌ ತಂಡದ ವಿರುದ್ಧ 89 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿತು. ಮಣಿಪಾಲ್‌ ಟೈಗರ್ಸ್‌ ತಂಡ 3 ವಿಕೆಟ್‌ ನಷ್ಟಕ್ಕೆ 211 ರನ್‌ ಕಲೆಹಾಕಿದರೆ, ಭಿಲ್ವಾರಾ ಕಿಂಗ್ಸ್‌ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 122 ರನ್‌ ಕಲೆಹಾಕಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಣಿಪಾಲ್‌ ಟೈಗರ್ಸ್‌ ತಂಡದ ಪರ ಆರಂಭಿಕರಾಗಿ ರಾಬಿನ್‌ ಉತ್ತಪ್ಪ ಹಾಗೂ ಚಡ್‌ವಿಕ್‌ ವಾಲ್ಟನ್‌ ಕಣಕ್ಕಿಳಿದರು. ಉತ್ತಪ್ಪ 30 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 2 ಬೌಂಡರಿ ಸಹಿತ 51 ನ್‌ ಬಾರಿಸಿದರೆ, ವಾಲ್ಟನ್‌ 55 ಎಸೆತಗಳಲ್ಲಿ 6 ಸಿಕ್ಸರ್‌ ಹಾಗೂ 9 ಬೌಂಡರಿ ಸಹಿತ ಭರ್ಜರಿ 104 ರನ್‌ ಬಾರಿಸಿದರು. ಇನ್ನುಳಿದಂತೆ ಹ್ಯಾಮಿಲ್ಟನ್ ಮಸಕಾಡ್ಜಾ 37, ತಿಸಾರಾ ಪೆರೆರಾ 6, ಕೊಲಿನ್‌ ಡಿ ಗ್ರಾಂಡ್‌ಹೋಮ್‌ ಅಜೇಯ 1 ಹಾಗೂ ಏಂಜೆಲೋ ಪೆರೆರಾ ಅಜೇಯ 3 ರನ್‌ ಬಾರಿಸಿದರು. ಭಿಲ್ವಾರಾ ಕಿಂಗ್ಸ್‌ ಪರ ಕ್ರಿಸ್ಟೋಫರ್‌ ಬಾರ್ನ್‌ವೆಲ್‌ 2 ಹಾಗೂ ರಾಹುಲ್‌ ಶರ್ಮಾ ಒಂದು ವಿಕೆಟ್‌ ಪಡೆದರು.

ಮಣಿಪಾಲ್‌ ಟೈಗರ್ಸ್‌ ನೀಡಿದ ಬೃಹತ್‌ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಭಿಲ್ವಾರಾ ಕಿಂಗ್ಸ್‌ ಪರ ತಿಲಕರತ್ನೆ ದಿಲ್‌ಶಾನ್‌ 26, ಸೊಲೊಮನ್‌ ಮೈರ್‌ 3, ಲೆಂಡ್ಲ್‌ ಸಿಮನ್ಸ್‌ ಡಕ್‌ಔಟ್‌, ರಾಬಿನ್‌ ಬಿಸ್ಟ್‌ 9, ಯೂಸುಫ್‌ ಪಠಾಣ್‌ ‌16, ಕ್ರಿಸ್ಟೋಫರ್‌ ಬಾರ್ನ್‌ವೆಲ್‌ 16, ಇರ್ಫಾನ್‌ ಪಠಾಣ್‌ 5, ಜೆಸಾಲ್‌ ಕಾರಿಯ 2, ಇಕ್ಬಾಲ್‌ ಅಬ್ದುಲ್ಲಾ ಅಜೇಯ 10 ಹಾಗೂ ಅನುರೀತ್‌ ಸಿಂಗ್‌ ಅಜೇಯ 18 ರನ್‌ ಗಳಿಸಿದರು. ಮಣಿಪಾಲ್‌ ಟೈಗರ್ಸ್‌ ತಂಡದ ಪರ ನಾಯಕ ಇಮ್ರಾನ್‌ ಖಾನ್‌ 3 ವಿಕೆಟ್‌, ಪರ್ವಿಂದರ್‌ ಅವಾನಾ 2 ವಿಕೆಟ್‌, ಮಿಚೆಲ್‌ ಮೆಕ್‌ಕ್ಲೆಗಾನ್‌, ಪ್ರವೀಣ್‌ ಗುಪ್ತಾ ಹಾಗೂ ಹರ್ಭಜನ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಈ ಗೆಲುವಿನೊಂದಿಗೆ ಟೂರ್ನಿಯಲ್ಲಿ ತನ್ನ ಎರಡನೇ ಜಯವನ್ನು ಸಾಧಿಸಿದ ಮಣಿಪಾಲ್‌ ಟೈಗರ್ಸ್‌ ತಂಡ ಹೆಚ್ಚು ನೆಟ್‌ ರನ್‌ ರೇಟ್‌ ಪಡೆಯುವ ಮೂಲಕ ತನ್ನಷ್ಟೇ ಅಂಕ ಪಡೆದಿದ್ದ ಅರ್ಬನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

andolana

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

3 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

3 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago