ಕ್ರೀಡೆ

ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್: ಪಠಾಣ್ ತಂಡದ ವಿರುದ್ಧ ಹರ್ಭಜನ್‌ ಟೀಮ್‌ಗೆ 89 ರನ್‌ಗಳ ಜಯ

ಪ್ರಸ್ತುತ ನಡೆಯುತ್ತಿರುವ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ನ ಆರನೇ ಲೀಗ್‌ ಪಂದ್ಯ ನಿನ್ನೆ ( ನವೆಂಬರ್‌ 24 ) ಡೆಹ್ರಾಡೂನ್‌ನ ರಾಜೀವ್‌ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಹರ್ಭಜನ್‌ ಸಿಂಗ್‌ ನಾಯಕತ್ವದ ಟೈಗರ್ಸ್‌ ತಂಡ ಇರ್ಫಾನ್‌ ಪಠಾಣ್ ನಾಯಕತ್ವದ ಭಿಲ್ವಾರಾ ಕಿಂಗ್ಸ್‌ ತಂಡದ ವಿರುದ್ಧ 89 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿತು. ಮಣಿಪಾಲ್‌ ಟೈಗರ್ಸ್‌ ತಂಡ 3 ವಿಕೆಟ್‌ ನಷ್ಟಕ್ಕೆ 211 ರನ್‌ ಕಲೆಹಾಕಿದರೆ, ಭಿಲ್ವಾರಾ ಕಿಂಗ್ಸ್‌ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 122 ರನ್‌ ಕಲೆಹಾಕಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಣಿಪಾಲ್‌ ಟೈಗರ್ಸ್‌ ತಂಡದ ಪರ ಆರಂಭಿಕರಾಗಿ ರಾಬಿನ್‌ ಉತ್ತಪ್ಪ ಹಾಗೂ ಚಡ್‌ವಿಕ್‌ ವಾಲ್ಟನ್‌ ಕಣಕ್ಕಿಳಿದರು. ಉತ್ತಪ್ಪ 30 ಎಸೆತಗಳಲ್ಲಿ 5 ಸಿಕ್ಸರ್‌ ಹಾಗೂ 2 ಬೌಂಡರಿ ಸಹಿತ 51 ನ್‌ ಬಾರಿಸಿದರೆ, ವಾಲ್ಟನ್‌ 55 ಎಸೆತಗಳಲ್ಲಿ 6 ಸಿಕ್ಸರ್‌ ಹಾಗೂ 9 ಬೌಂಡರಿ ಸಹಿತ ಭರ್ಜರಿ 104 ರನ್‌ ಬಾರಿಸಿದರು. ಇನ್ನುಳಿದಂತೆ ಹ್ಯಾಮಿಲ್ಟನ್ ಮಸಕಾಡ್ಜಾ 37, ತಿಸಾರಾ ಪೆರೆರಾ 6, ಕೊಲಿನ್‌ ಡಿ ಗ್ರಾಂಡ್‌ಹೋಮ್‌ ಅಜೇಯ 1 ಹಾಗೂ ಏಂಜೆಲೋ ಪೆರೆರಾ ಅಜೇಯ 3 ರನ್‌ ಬಾರಿಸಿದರು. ಭಿಲ್ವಾರಾ ಕಿಂಗ್ಸ್‌ ಪರ ಕ್ರಿಸ್ಟೋಫರ್‌ ಬಾರ್ನ್‌ವೆಲ್‌ 2 ಹಾಗೂ ರಾಹುಲ್‌ ಶರ್ಮಾ ಒಂದು ವಿಕೆಟ್‌ ಪಡೆದರು.

ಮಣಿಪಾಲ್‌ ಟೈಗರ್ಸ್‌ ನೀಡಿದ ಬೃಹತ್‌ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಭಿಲ್ವಾರಾ ಕಿಂಗ್ಸ್‌ ಪರ ತಿಲಕರತ್ನೆ ದಿಲ್‌ಶಾನ್‌ 26, ಸೊಲೊಮನ್‌ ಮೈರ್‌ 3, ಲೆಂಡ್ಲ್‌ ಸಿಮನ್ಸ್‌ ಡಕ್‌ಔಟ್‌, ರಾಬಿನ್‌ ಬಿಸ್ಟ್‌ 9, ಯೂಸುಫ್‌ ಪಠಾಣ್‌ ‌16, ಕ್ರಿಸ್ಟೋಫರ್‌ ಬಾರ್ನ್‌ವೆಲ್‌ 16, ಇರ್ಫಾನ್‌ ಪಠಾಣ್‌ 5, ಜೆಸಾಲ್‌ ಕಾರಿಯ 2, ಇಕ್ಬಾಲ್‌ ಅಬ್ದುಲ್ಲಾ ಅಜೇಯ 10 ಹಾಗೂ ಅನುರೀತ್‌ ಸಿಂಗ್‌ ಅಜೇಯ 18 ರನ್‌ ಗಳಿಸಿದರು. ಮಣಿಪಾಲ್‌ ಟೈಗರ್ಸ್‌ ತಂಡದ ಪರ ನಾಯಕ ಇಮ್ರಾನ್‌ ಖಾನ್‌ 3 ವಿಕೆಟ್‌, ಪರ್ವಿಂದರ್‌ ಅವಾನಾ 2 ವಿಕೆಟ್‌, ಮಿಚೆಲ್‌ ಮೆಕ್‌ಕ್ಲೆಗಾನ್‌, ಪ್ರವೀಣ್‌ ಗುಪ್ತಾ ಹಾಗೂ ಹರ್ಭಜನ್‌ ಸಿಂಗ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಈ ಗೆಲುವಿನೊಂದಿಗೆ ಟೂರ್ನಿಯಲ್ಲಿ ತನ್ನ ಎರಡನೇ ಜಯವನ್ನು ಸಾಧಿಸಿದ ಮಣಿಪಾಲ್‌ ಟೈಗರ್ಸ್‌ ತಂಡ ಹೆಚ್ಚು ನೆಟ್‌ ರನ್‌ ರೇಟ್‌ ಪಡೆಯುವ ಮೂಲಕ ತನ್ನಷ್ಟೇ ಅಂಕ ಪಡೆದಿದ್ದ ಅರ್ಬನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

andolana

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

11 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

51 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

53 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

57 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

60 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago