ಕ್ರೀಡೆ

19 ಎಸೆತಗಳಲ್ಲಿ 9 ಸಿಕ್ಸರ್;‌ 342 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿ ತಂಡ ಗೆಲ್ಲಿಸಿದ ಇರ್ಫಾನ್‌ ಪಠಾಣ್‌

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಫೈನಲ್‌ ತಲುಪಿದ್ದ ಕಾರಣ ಭಾರತದ ಕ್ರಿಕೆಟ್‌ ಪ್ರೇಮಿಗಳ ಚಿತ್ತವೆಲ್ಲಾ ಫೈನಲ್‌ ಪಂದ್ಯದತ್ತ ನೆಟ್ಟಿತ್ತು. ಅತ್ತ ಈ ಪಂದ್ಯ ನಡೆಯುವುದಕ್ಕೂ ಮುನ್ನಾ ದಿನ ನಡೆದ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಇರ್ಫಾನ್‌ ಪಠಾಣ್‌ ಸಂಚಲನ ಸೃಷ್ಟಿಸಿದ್ದಾರೆ. ವಿಶ್ವಕಪ್‌ ಗುಂಗಿನಲ್ಲಿ ಬ್ಯುಸಿ ಇದ್ದ ಕ್ರೀಡಾ ಪ್ರಿಯರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಇರ್ಫಾನ್‌ ಪಠಾಣ್‌ ಆಟದ ಕುರಿತು ಬರೆದುಕೊಳ್ಳಲಾರಂಭಿಸಿದ್ದಾರೆ.

ಹೌದು, ನವೆಂಬರ್‌ 8ರಂದು ರಾಂಚಿಯಲ್ಲಿ ನಡೆದ ಇಂಡಿಯಾ ಕ್ಯಾಪಿಟಲ್ಸ್‌ ಹಾಗೂ ಭಿಲ್ವಾರಾ ಕಿಂಗ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ಭಿಲ್ವಾರಾ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ನಾಯಕ ಇರ್ಫಾನ್‌ ಪಠಾಣ್‌ 19 ಎಸೆತಗಳಲ್ಲಿ ಸಿಡಿಲಬ್ಬರದ 9 ಸಿಕ್ಸರ್‌ ಹಾಗೂ 1 ಬೌಂಡರಿ ಸಹಿತ ಅಜೇಯ 65 ರನ್‌ ಸಿಡಿಸಿ 342 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿ ಎದುರಾಳಿ ಇಂಡಿಯಾ ಕ್ಯಾಪಿಟಲ್ಸ್‌ ನೀಡಿದ್ದ 229 ರನ್‌ಗಳ ಬೃಹತ್‌ ಗುರಿಯನ್ನು ಬೆನ್ನತ್ತುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಗೌತಮ್‌ ಗಂಭೀರ್‌ ನಾಯಕತ್ವದ ಇಂಡಿಯಾ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 228 ರನ್‌ ಬಾರಿಸಿ ಭಿಲ್ವಾರಾ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 229 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಿಲ್ವಾರಾ ಕಿಂಗ್ಸ್‌ ಸೋಲೊಮನ್‌ ಮೈರ್‌ ಹಾಗೂ ಇರ್ಫಾನ್‌ ಪಠಾಣ್‌ ಅಬ್ಬರದ ಬ್ಯಾಟಿಂಗ್‌ ಸಹಾಯದಿಂದ 19.2 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 229 ರನ್‌ ಕಲೆಹಾಕಿ 3 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

andolana

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

55 mins ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

2 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

2 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

2 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

2 hours ago