ಕ್ರೀಡೆ

19 ಎಸೆತಗಳಲ್ಲಿ 9 ಸಿಕ್ಸರ್;‌ 342 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿ ತಂಡ ಗೆಲ್ಲಿಸಿದ ಇರ್ಫಾನ್‌ ಪಠಾಣ್‌

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಫೈನಲ್‌ ತಲುಪಿದ್ದ ಕಾರಣ ಭಾರತದ ಕ್ರಿಕೆಟ್‌ ಪ್ರೇಮಿಗಳ ಚಿತ್ತವೆಲ್ಲಾ ಫೈನಲ್‌ ಪಂದ್ಯದತ್ತ ನೆಟ್ಟಿತ್ತು. ಅತ್ತ ಈ ಪಂದ್ಯ ನಡೆಯುವುದಕ್ಕೂ ಮುನ್ನಾ ದಿನ ನಡೆದ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಇರ್ಫಾನ್‌ ಪಠಾಣ್‌ ಸಂಚಲನ ಸೃಷ್ಟಿಸಿದ್ದಾರೆ. ವಿಶ್ವಕಪ್‌ ಗುಂಗಿನಲ್ಲಿ ಬ್ಯುಸಿ ಇದ್ದ ಕ್ರೀಡಾ ಪ್ರಿಯರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಇರ್ಫಾನ್‌ ಪಠಾಣ್‌ ಆಟದ ಕುರಿತು ಬರೆದುಕೊಳ್ಳಲಾರಂಭಿಸಿದ್ದಾರೆ.

ಹೌದು, ನವೆಂಬರ್‌ 8ರಂದು ರಾಂಚಿಯಲ್ಲಿ ನಡೆದ ಇಂಡಿಯಾ ಕ್ಯಾಪಿಟಲ್ಸ್‌ ಹಾಗೂ ಭಿಲ್ವಾರಾ ಕಿಂಗ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ಭಿಲ್ವಾರಾ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ನಾಯಕ ಇರ್ಫಾನ್‌ ಪಠಾಣ್‌ 19 ಎಸೆತಗಳಲ್ಲಿ ಸಿಡಿಲಬ್ಬರದ 9 ಸಿಕ್ಸರ್‌ ಹಾಗೂ 1 ಬೌಂಡರಿ ಸಹಿತ ಅಜೇಯ 65 ರನ್‌ ಸಿಡಿಸಿ 342 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿ ಎದುರಾಳಿ ಇಂಡಿಯಾ ಕ್ಯಾಪಿಟಲ್ಸ್‌ ನೀಡಿದ್ದ 229 ರನ್‌ಗಳ ಬೃಹತ್‌ ಗುರಿಯನ್ನು ಬೆನ್ನತ್ತುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಗೌತಮ್‌ ಗಂಭೀರ್‌ ನಾಯಕತ್ವದ ಇಂಡಿಯಾ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 228 ರನ್‌ ಬಾರಿಸಿ ಭಿಲ್ವಾರಾ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 229 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಿಲ್ವಾರಾ ಕಿಂಗ್ಸ್‌ ಸೋಲೊಮನ್‌ ಮೈರ್‌ ಹಾಗೂ ಇರ್ಫಾನ್‌ ಪಠಾಣ್‌ ಅಬ್ಬರದ ಬ್ಯಾಟಿಂಗ್‌ ಸಹಾಯದಿಂದ 19.2 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 229 ರನ್‌ ಕಲೆಹಾಕಿ 3 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

andolana

Recent Posts

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

8 mins ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

19 mins ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

30 mins ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

1 hour ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

1 hour ago

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…

2 hours ago