ಕ್ರೀಡೆ

19 ಎಸೆತಗಳಲ್ಲಿ 9 ಸಿಕ್ಸರ್;‌ 342 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿ ತಂಡ ಗೆಲ್ಲಿಸಿದ ಇರ್ಫಾನ್‌ ಪಠಾಣ್‌

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಫೈನಲ್‌ ತಲುಪಿದ್ದ ಕಾರಣ ಭಾರತದ ಕ್ರಿಕೆಟ್‌ ಪ್ರೇಮಿಗಳ ಚಿತ್ತವೆಲ್ಲಾ ಫೈನಲ್‌ ಪಂದ್ಯದತ್ತ ನೆಟ್ಟಿತ್ತು. ಅತ್ತ ಈ ಪಂದ್ಯ ನಡೆಯುವುದಕ್ಕೂ ಮುನ್ನಾ ದಿನ ನಡೆದ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಇರ್ಫಾನ್‌ ಪಠಾಣ್‌ ಸಂಚಲನ ಸೃಷ್ಟಿಸಿದ್ದಾರೆ. ವಿಶ್ವಕಪ್‌ ಗುಂಗಿನಲ್ಲಿ ಬ್ಯುಸಿ ಇದ್ದ ಕ್ರೀಡಾ ಪ್ರಿಯರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಇರ್ಫಾನ್‌ ಪಠಾಣ್‌ ಆಟದ ಕುರಿತು ಬರೆದುಕೊಳ್ಳಲಾರಂಭಿಸಿದ್ದಾರೆ.

ಹೌದು, ನವೆಂಬರ್‌ 8ರಂದು ರಾಂಚಿಯಲ್ಲಿ ನಡೆದ ಇಂಡಿಯಾ ಕ್ಯಾಪಿಟಲ್ಸ್‌ ಹಾಗೂ ಭಿಲ್ವಾರಾ ಕಿಂಗ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ಭಿಲ್ವಾರಾ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ನಾಯಕ ಇರ್ಫಾನ್‌ ಪಠಾಣ್‌ 19 ಎಸೆತಗಳಲ್ಲಿ ಸಿಡಿಲಬ್ಬರದ 9 ಸಿಕ್ಸರ್‌ ಹಾಗೂ 1 ಬೌಂಡರಿ ಸಹಿತ ಅಜೇಯ 65 ರನ್‌ ಸಿಡಿಸಿ 342 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿ ಎದುರಾಳಿ ಇಂಡಿಯಾ ಕ್ಯಾಪಿಟಲ್ಸ್‌ ನೀಡಿದ್ದ 229 ರನ್‌ಗಳ ಬೃಹತ್‌ ಗುರಿಯನ್ನು ಬೆನ್ನತ್ತುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಗೌತಮ್‌ ಗಂಭೀರ್‌ ನಾಯಕತ್ವದ ಇಂಡಿಯಾ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 228 ರನ್‌ ಬಾರಿಸಿ ಭಿಲ್ವಾರಾ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 229 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಿಲ್ವಾರಾ ಕಿಂಗ್ಸ್‌ ಸೋಲೊಮನ್‌ ಮೈರ್‌ ಹಾಗೂ ಇರ್ಫಾನ್‌ ಪಠಾಣ್‌ ಅಬ್ಬರದ ಬ್ಯಾಟಿಂಗ್‌ ಸಹಾಯದಿಂದ 19.2 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 229 ರನ್‌ ಕಲೆಹಾಕಿ 3 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

andolana

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

32 mins ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

51 mins ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

4 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

5 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

5 hours ago