ಕ್ರೀಡೆ

19 ಎಸೆತಗಳಲ್ಲಿ 9 ಸಿಕ್ಸರ್;‌ 342 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿ ತಂಡ ಗೆಲ್ಲಿಸಿದ ಇರ್ಫಾನ್‌ ಪಠಾಣ್‌

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಫೈನಲ್‌ ತಲುಪಿದ್ದ ಕಾರಣ ಭಾರತದ ಕ್ರಿಕೆಟ್‌ ಪ್ರೇಮಿಗಳ ಚಿತ್ತವೆಲ್ಲಾ ಫೈನಲ್‌ ಪಂದ್ಯದತ್ತ ನೆಟ್ಟಿತ್ತು. ಅತ್ತ ಈ ಪಂದ್ಯ ನಡೆಯುವುದಕ್ಕೂ ಮುನ್ನಾ ದಿನ ನಡೆದ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಇರ್ಫಾನ್‌ ಪಠಾಣ್‌ ಸಂಚಲನ ಸೃಷ್ಟಿಸಿದ್ದಾರೆ. ವಿಶ್ವಕಪ್‌ ಗುಂಗಿನಲ್ಲಿ ಬ್ಯುಸಿ ಇದ್ದ ಕ್ರೀಡಾ ಪ್ರಿಯರು ಇದೀಗ ಸಾಮಾಜಿಕ ಜಾಲತಾಣದಲ್ಲಿ ಇರ್ಫಾನ್‌ ಪಠಾಣ್‌ ಆಟದ ಕುರಿತು ಬರೆದುಕೊಳ್ಳಲಾರಂಭಿಸಿದ್ದಾರೆ.

ಹೌದು, ನವೆಂಬರ್‌ 8ರಂದು ರಾಂಚಿಯಲ್ಲಿ ನಡೆದ ಇಂಡಿಯಾ ಕ್ಯಾಪಿಟಲ್ಸ್‌ ಹಾಗೂ ಭಿಲ್ವಾರಾ ಕಿಂಗ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ಭಿಲ್ವಾರಾ ಕಿಂಗ್ಸ್‌ ಪರ ಕಣಕ್ಕಿಳಿದಿದ್ದ ನಾಯಕ ಇರ್ಫಾನ್‌ ಪಠಾಣ್‌ 19 ಎಸೆತಗಳಲ್ಲಿ ಸಿಡಿಲಬ್ಬರದ 9 ಸಿಕ್ಸರ್‌ ಹಾಗೂ 1 ಬೌಂಡರಿ ಸಹಿತ ಅಜೇಯ 65 ರನ್‌ ಸಿಡಿಸಿ 342 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್‌ ಬೀಸಿ ಎದುರಾಳಿ ಇಂಡಿಯಾ ಕ್ಯಾಪಿಟಲ್ಸ್‌ ನೀಡಿದ್ದ 229 ರನ್‌ಗಳ ಬೃಹತ್‌ ಗುರಿಯನ್ನು ಬೆನ್ನತ್ತುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಗೌತಮ್‌ ಗಂಭೀರ್‌ ನಾಯಕತ್ವದ ಇಂಡಿಯಾ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 228 ರನ್‌ ಬಾರಿಸಿ ಭಿಲ್ವಾರಾ ಕಿಂಗ್ಸ್‌ ತಂಡಕ್ಕೆ ಗೆಲ್ಲಲು 229 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಭಿಲ್ವಾರಾ ಕಿಂಗ್ಸ್‌ ಸೋಲೊಮನ್‌ ಮೈರ್‌ ಹಾಗೂ ಇರ್ಫಾನ್‌ ಪಠಾಣ್‌ ಅಬ್ಬರದ ಬ್ಯಾಟಿಂಗ್‌ ಸಹಾಯದಿಂದ 19.2 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 229 ರನ್‌ ಕಲೆಹಾಕಿ 3 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

andolana

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

10 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

10 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

10 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

11 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

11 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

11 hours ago