ಕ್ರೀಡೆ

Legends League cricket: ಮಿಸ್ಟರ್‌ ಫೈಟರ್‌ ನಡೆ ಸ್ವೀಕಾರಾರ್ಹವಲ್ಲ; ಶ್ರೀಶಾಂತ್ ವಾಗ್ದಾಳಿ

ಮುಂಬೈ : ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌-೨೦೨೩ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ಜೈಂಟ್ಸ್‌ ನಡುವಿನ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್‌ ತಂಡವು ೧೨ ರನ್ ಅಂತರದ ಜಯ ದಾಖಲಿಸಿತು. ಇದರ ಜೊತೆ ಈ ಲೆಜೆಂಡ್ಸ್‌ ಟೂರ್ನಿಯಲ್ಲಿ ಮಾಜಿ ಆಟಗಾರರ ನಡುವೆ ಜಟಾಪಟಿ ನಡೆದಿದ್ದು, ಇದು ಮತ್ತೊಂದು ಮಜಲು ಪಡೆದುಕೊಂಡಿದೆ.

ಹಿರಿಯ ಆಟಗಾರರಾದ ಗೌತಮ್‌ ಗಂಭೀರ್‌ ಹಾಗೂ ವೇಗಿ ಶ್ರೀಶಾಂತ್‌ ನಡುವೆ ಮೈದಾನದಲ್ಲಿಯೇ ಗಲಾಟೆ ನಡೆದಿದ್ದು, ಪಿಚ್‌ನಲ್ಲಿನ ಗೌತಮ್‌ ಗಂಭೀರ್‌ ನಡೆ ಬಗ್ಗೆ ಶ್ರೀಶಾಂತ್‌ ಪತ್ರಿಕಾಗೋಷ್ಠಿಯಲ್ಲಿಯೇ ನೇರವಾಗಿ ಆರೋಪಗಳ ಸುರಿಮಳೆಗೈದಿದ್ದಾರೆ.

ಸೂರತ್‌ನ ಲಾಲಭಾಯ್ ಕಾಂಟ್ರಾಕ್ಟರ್ ಸ್ಟೇಡಿಯಂನಲ್ಲಿ ನಡೆದ ಲೆಜೆಂಡ್ಸ್‌ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ಈ ಘಟನೆ ನಡೆದಿದೆ. ಈ ಪಂದ್ಯದಲ್ಲಿ ಗೌತಮ್ ಗಂಭೀರ್ ಮತ್ತು ಎಸ್.ಶ್ರೀಶಾಂತ್ ಮೈದಾನದಲ್ಲೇ ಜಗಳವಾಡಿಕೊಂಡಿದ್ದು, ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ವೇಗಿ ಶ್ರೀಶಾಂತ್ ಕ್ಯಾಪಿಟಲ್ಸ್ ತಂಡದ ನಾಯಕ ಗಂಭೀರ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.

ಗಂಭೀರ್ ಬ್ಯಾಟಿಂಗ್ ಮಾಡುವಾಗ, ಅವರು ಶ್ರೀಶಾಂತ್ ಅವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದರು, ನಂತರ ಅಂಪೈರ್‌ ಗಳು ಮತ್ತು ಸಹ ಆಟಗಾರರು ಮಧ್ಯಪ್ರವೇಶಿಸಿ ಜಗಳ ತಡೆದರು. ಎಲಿಮಿನೇಟರ್‌ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಗಿ ಶ್ರೀಶಾಂತ್, ಯಾವುದೇ ಕಾರಣವಿಲ್ಲದೆ ಗಂಭೀರ್ ತನ್ನನ್ನು ಕೆಣಕಿದ್ದರು. ಸಹ ಆಟಗಾರರನ್ನು ಗೌರವಿಸಿದ ಗಂಭೀರ್ ನಡೆಯಿಂದ ನನಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.

“ಯಾವುದೇ ಕಾರಣವಿಲ್ಲದೆ ಯಾವಾಗಲೂ ತನ್ನ ಎಲ್ಲಾ ಸಹ ಆಟಗಾರರೊಂದಿಗೆ ಜಗಳವಾಡುವ ಮಿಸ್ಟರ್ ಫೈಟರ್‌ ನೊಂದಿಗೆ ಏನಾಯಿತು ಎಂಬುದರ ಕುರಿತು ತಿಳಿಸಲು ನಾನು ಬಯಸುತ್ತೇನೆ. ಅವರು ವೀರೂ ಭಾಯ್ ಮತ್ತು ಬಹಳಷ್ಟು ಜನರನ್ನು ಒಳಗೊಂಡಂತೆ ತಮ್ಮದೇ ಆದ ಹಿರಿಯ ಆಟಗಾರರನ್ನು ಸಹ ಗೌರವಿಸುವುದಿಲ್ಲ, ಅಂತಹದೇ ಘಟನೆಯೊಂದು ಇವತ್ತು ಸಂಭವಿಸಿದೆ.

ಯಾವುದೇ ಪ್ರಚೋದನೆಯಿಲ್ಲದೆ ಗಂಭೀರ್‌ ನನ್ನನ್ನು ರೇಗಿಸುತ್ತಿದ್ದರು, ಅದು ತುಂಬಾ ಅಸಭ್ಯವಾಗಿತ್ತು. ಇದರಲ್ಲಿ ನನ್ನದೇನು ತಪ್ಪಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಆದರೆ, ಅವರು ಪಂದ್ಯದ ವೇಳೆಯಲ್ಲಿ ಬಳಸಿದ ಪದಗಳು ಮತ್ತು ಕ್ರಿಕೆಟ್ ಮೈದಾನದಲ್ಲಿ ಅವರು ಹೇಳಿದ ಮಾತುಗಳು ಸ್ವೀಕಾರಾರ್ಹವಲ್ಲ ಎಂದು ಶ್ರೀಶಾಂತ್ ಮಾಜಿ ಟೀಂ ಇಂಡಿಯಾ ಆಟಗಾರ ಗಂಭೀರ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago