ಮುಂಬೈ : ಲೆಜೆಂಡ್ಸ್ ಲೀಗ್ ಕ್ರಿಕೆಟ್-೨೦೨೩ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್ ತಂಡವು ೧೨ ರನ್ ಅಂತರದ ಜಯ ದಾಖಲಿಸಿತು. ಇದರ ಜೊತೆ ಈ ಲೆಜೆಂಡ್ಸ್ ಟೂರ್ನಿಯಲ್ಲಿ ಮಾಜಿ ಆಟಗಾರರ ನಡುವೆ ಜಟಾಪಟಿ ನಡೆದಿದ್ದು, ಇದು ಮತ್ತೊಂದು ಮಜಲು ಪಡೆದುಕೊಂಡಿದೆ.
ಹಿರಿಯ ಆಟಗಾರರಾದ ಗೌತಮ್ ಗಂಭೀರ್ ಹಾಗೂ ವೇಗಿ ಶ್ರೀಶಾಂತ್ ನಡುವೆ ಮೈದಾನದಲ್ಲಿಯೇ ಗಲಾಟೆ ನಡೆದಿದ್ದು, ಪಿಚ್ನಲ್ಲಿನ ಗೌತಮ್ ಗಂಭೀರ್ ನಡೆ ಬಗ್ಗೆ ಶ್ರೀಶಾಂತ್ ಪತ್ರಿಕಾಗೋಷ್ಠಿಯಲ್ಲಿಯೇ ನೇರವಾಗಿ ಆರೋಪಗಳ ಸುರಿಮಳೆಗೈದಿದ್ದಾರೆ.
ಸೂರತ್ನ ಲಾಲಭಾಯ್ ಕಾಂಟ್ರಾಕ್ಟರ್ ಸ್ಟೇಡಿಯಂನಲ್ಲಿ ನಡೆದ ಲೆಜೆಂಡ್ಸ್ ಲೀಗ್ನ ಎಲಿಮಿನೇಟರ್ ಪಂದ್ಯದಲ್ಲಿ ಈ ಘಟನೆ ನಡೆದಿದೆ. ಈ ಪಂದ್ಯದಲ್ಲಿ ಗೌತಮ್ ಗಂಭೀರ್ ಮತ್ತು ಎಸ್.ಶ್ರೀಶಾಂತ್ ಮೈದಾನದಲ್ಲೇ ಜಗಳವಾಡಿಕೊಂಡಿದ್ದು, ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ವೇಗಿ ಶ್ರೀಶಾಂತ್ ಕ್ಯಾಪಿಟಲ್ಸ್ ತಂಡದ ನಾಯಕ ಗಂಭೀರ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.
ಗಂಭೀರ್ ಬ್ಯಾಟಿಂಗ್ ಮಾಡುವಾಗ, ಅವರು ಶ್ರೀಶಾಂತ್ ಅವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದರು, ನಂತರ ಅಂಪೈರ್ ಗಳು ಮತ್ತು ಸಹ ಆಟಗಾರರು ಮಧ್ಯಪ್ರವೇಶಿಸಿ ಜಗಳ ತಡೆದರು. ಎಲಿಮಿನೇಟರ್ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಗಿ ಶ್ರೀಶಾಂತ್, ಯಾವುದೇ ಕಾರಣವಿಲ್ಲದೆ ಗಂಭೀರ್ ತನ್ನನ್ನು ಕೆಣಕಿದ್ದರು. ಸಹ ಆಟಗಾರರನ್ನು ಗೌರವಿಸಿದ ಗಂಭೀರ್ ನಡೆಯಿಂದ ನನಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.
“ಯಾವುದೇ ಕಾರಣವಿಲ್ಲದೆ ಯಾವಾಗಲೂ ತನ್ನ ಎಲ್ಲಾ ಸಹ ಆಟಗಾರರೊಂದಿಗೆ ಜಗಳವಾಡುವ ಮಿಸ್ಟರ್ ಫೈಟರ್ ನೊಂದಿಗೆ ಏನಾಯಿತು ಎಂಬುದರ ಕುರಿತು ತಿಳಿಸಲು ನಾನು ಬಯಸುತ್ತೇನೆ. ಅವರು ವೀರೂ ಭಾಯ್ ಮತ್ತು ಬಹಳಷ್ಟು ಜನರನ್ನು ಒಳಗೊಂಡಂತೆ ತಮ್ಮದೇ ಆದ ಹಿರಿಯ ಆಟಗಾರರನ್ನು ಸಹ ಗೌರವಿಸುವುದಿಲ್ಲ, ಅಂತಹದೇ ಘಟನೆಯೊಂದು ಇವತ್ತು ಸಂಭವಿಸಿದೆ.
ಯಾವುದೇ ಪ್ರಚೋದನೆಯಿಲ್ಲದೆ ಗಂಭೀರ್ ನನ್ನನ್ನು ರೇಗಿಸುತ್ತಿದ್ದರು, ಅದು ತುಂಬಾ ಅಸಭ್ಯವಾಗಿತ್ತು. ಇದರಲ್ಲಿ ನನ್ನದೇನು ತಪ್ಪಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಆದರೆ, ಅವರು ಪಂದ್ಯದ ವೇಳೆಯಲ್ಲಿ ಬಳಸಿದ ಪದಗಳು ಮತ್ತು ಕ್ರಿಕೆಟ್ ಮೈದಾನದಲ್ಲಿ ಅವರು ಹೇಳಿದ ಮಾತುಗಳು ಸ್ವೀಕಾರಾರ್ಹವಲ್ಲ ಎಂದು ಶ್ರೀಶಾಂತ್ ಮಾಜಿ ಟೀಂ ಇಂಡಿಯಾ ಆಟಗಾರ ಗಂಭೀರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…