ಕ್ರೀಡೆ

Legends League cricket: ಮಿಸ್ಟರ್‌ ಫೈಟರ್‌ ನಡೆ ಸ್ವೀಕಾರಾರ್ಹವಲ್ಲ; ಶ್ರೀಶಾಂತ್ ವಾಗ್ದಾಳಿ

ಮುಂಬೈ : ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌-೨೦೨೩ ಟೂರ್ನಿಯ ಎಲಿಮಿನೇಟರ್‌ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ಜೈಂಟ್ಸ್‌ ನಡುವಿನ ಪಂದ್ಯದಲ್ಲಿ ಇಂಡಿಯಾ ಕ್ಯಾಪಿಟಲ್ಸ್‌ ತಂಡವು ೧೨ ರನ್ ಅಂತರದ ಜಯ ದಾಖಲಿಸಿತು. ಇದರ ಜೊತೆ ಈ ಲೆಜೆಂಡ್ಸ್‌ ಟೂರ್ನಿಯಲ್ಲಿ ಮಾಜಿ ಆಟಗಾರರ ನಡುವೆ ಜಟಾಪಟಿ ನಡೆದಿದ್ದು, ಇದು ಮತ್ತೊಂದು ಮಜಲು ಪಡೆದುಕೊಂಡಿದೆ.

ಹಿರಿಯ ಆಟಗಾರರಾದ ಗೌತಮ್‌ ಗಂಭೀರ್‌ ಹಾಗೂ ವೇಗಿ ಶ್ರೀಶಾಂತ್‌ ನಡುವೆ ಮೈದಾನದಲ್ಲಿಯೇ ಗಲಾಟೆ ನಡೆದಿದ್ದು, ಪಿಚ್‌ನಲ್ಲಿನ ಗೌತಮ್‌ ಗಂಭೀರ್‌ ನಡೆ ಬಗ್ಗೆ ಶ್ರೀಶಾಂತ್‌ ಪತ್ರಿಕಾಗೋಷ್ಠಿಯಲ್ಲಿಯೇ ನೇರವಾಗಿ ಆರೋಪಗಳ ಸುರಿಮಳೆಗೈದಿದ್ದಾರೆ.

ಸೂರತ್‌ನ ಲಾಲಭಾಯ್ ಕಾಂಟ್ರಾಕ್ಟರ್ ಸ್ಟೇಡಿಯಂನಲ್ಲಿ ನಡೆದ ಲೆಜೆಂಡ್ಸ್‌ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ಈ ಘಟನೆ ನಡೆದಿದೆ. ಈ ಪಂದ್ಯದಲ್ಲಿ ಗೌತಮ್ ಗಂಭೀರ್ ಮತ್ತು ಎಸ್.ಶ್ರೀಶಾಂತ್ ಮೈದಾನದಲ್ಲೇ ಜಗಳವಾಡಿಕೊಂಡಿದ್ದು, ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ವೇಗಿ ಶ್ರೀಶಾಂತ್ ಕ್ಯಾಪಿಟಲ್ಸ್ ತಂಡದ ನಾಯಕ ಗಂಭೀರ್ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ.

ಗಂಭೀರ್ ಬ್ಯಾಟಿಂಗ್ ಮಾಡುವಾಗ, ಅವರು ಶ್ರೀಶಾಂತ್ ಅವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದರು, ನಂತರ ಅಂಪೈರ್‌ ಗಳು ಮತ್ತು ಸಹ ಆಟಗಾರರು ಮಧ್ಯಪ್ರವೇಶಿಸಿ ಜಗಳ ತಡೆದರು. ಎಲಿಮಿನೇಟರ್‌ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಗಿ ಶ್ರೀಶಾಂತ್, ಯಾವುದೇ ಕಾರಣವಿಲ್ಲದೆ ಗಂಭೀರ್ ತನ್ನನ್ನು ಕೆಣಕಿದ್ದರು. ಸಹ ಆಟಗಾರರನ್ನು ಗೌರವಿಸಿದ ಗಂಭೀರ್ ನಡೆಯಿಂದ ನನಗೆ ಬೇಸರವಾಗಿದೆ ಎಂದು ಹೇಳಿದ್ದಾರೆ.

“ಯಾವುದೇ ಕಾರಣವಿಲ್ಲದೆ ಯಾವಾಗಲೂ ತನ್ನ ಎಲ್ಲಾ ಸಹ ಆಟಗಾರರೊಂದಿಗೆ ಜಗಳವಾಡುವ ಮಿಸ್ಟರ್ ಫೈಟರ್‌ ನೊಂದಿಗೆ ಏನಾಯಿತು ಎಂಬುದರ ಕುರಿತು ತಿಳಿಸಲು ನಾನು ಬಯಸುತ್ತೇನೆ. ಅವರು ವೀರೂ ಭಾಯ್ ಮತ್ತು ಬಹಳಷ್ಟು ಜನರನ್ನು ಒಳಗೊಂಡಂತೆ ತಮ್ಮದೇ ಆದ ಹಿರಿಯ ಆಟಗಾರರನ್ನು ಸಹ ಗೌರವಿಸುವುದಿಲ್ಲ, ಅಂತಹದೇ ಘಟನೆಯೊಂದು ಇವತ್ತು ಸಂಭವಿಸಿದೆ.

ಯಾವುದೇ ಪ್ರಚೋದನೆಯಿಲ್ಲದೆ ಗಂಭೀರ್‌ ನನ್ನನ್ನು ರೇಗಿಸುತ್ತಿದ್ದರು, ಅದು ತುಂಬಾ ಅಸಭ್ಯವಾಗಿತ್ತು. ಇದರಲ್ಲಿ ನನ್ನದೇನು ತಪ್ಪಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಆದರೆ, ಅವರು ಪಂದ್ಯದ ವೇಳೆಯಲ್ಲಿ ಬಳಸಿದ ಪದಗಳು ಮತ್ತು ಕ್ರಿಕೆಟ್ ಮೈದಾನದಲ್ಲಿ ಅವರು ಹೇಳಿದ ಮಾತುಗಳು ಸ್ವೀಕಾರಾರ್ಹವಲ್ಲ ಎಂದು ಶ್ರೀಶಾಂತ್ ಮಾಜಿ ಟೀಂ ಇಂಡಿಯಾ ಆಟಗಾರ ಗಂಭೀರ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

19 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago