ಕ್ರೀಡೆ

ಗೋವಾದಲ್ಲಿ ರಂಗೇರಲಿದೆ ಲೆಜೆಂಡ್ಸ್‌ ಪ್ರೋ T20 ಲೀಗ್‌ : ಆಸಿಸ್‌ ಕ್ರಿಕೆಟಿಗ ವಾಟ್ಸನ್‌ ಹೇಳಿದ್ದೇನು?

ಬೆಂಗಳೂರು : ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವಾಟ್ಸನ್ ಲೆಜೆಂಡ್ಸ್ ಪ್ರೋ T20 ಲೀಗ್‌ನಲ್ಲಿ ಮತ್ತೆ ಸ್ಪರ್ಧಿಸಲು ಸಿದ್ಧರಾಗಿದ್ದು, ಈ ಕುರಿತು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನ ಸಂಭ್ರಮವನ್ನು ಹಿಡಿದಿಟ್ಟುಕೊಂಡಿರುವ ಈ ಲೀಗ್‌ ಕಡಲತೀರದ ಮಧುರ ವಾತಾವರಣದಲ್ಲಿ ನಡೆಯುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಉತ್ಸಾಹವನ್ನು ನೀಡಲಿದೆ ಎಂದು ಅವರು ಹೇಳಿದ್ದಾರೆ.

ಲೆಜೆಂಡ್ಸ್ ಪ್ರೋ T20 ಲೀಗ್‌ ಬಗ್ಗೆ ಮಾತನಾಡಿದ ವಾಟ್ಸನ್, “ಸ್ಪರ್ಧಾತ್ಮಕ ಮನೋಭಾವ ಇನ್ನೂ ನನ್ನೊಳಗೆ ಜೀವಂತವಾಗಿದೆ. ಚೆನ್ನಾಗಿ ಆಡುವ ಆಸೆ ಮತ್ತು ಹುಮ್ಮಸ್ಸು ಇಂದಿಗೂ ಇದೆ. ಈ ಲೀಗ್‌ನಲ್ಲಿ ಅದನ್ನೆಲ್ಲಾ ಆನಂದಿಸುತ್ತಿದ್ದೇನೆ” ಎಂದರು.

ಇದನ್ನು ಓದಿ: ಜನ ಮೆಚ್ಚುಗೆ ಪಡೆದ ಹಗ್ಗ-ಜಗ್ಗಾಟ : ಸಂಸದ ಯದುವೀರ್‌ ಅವರ ʼಫಿಟ್ ಯುವ ಫಾರ್ ವಿಕಸಿತ ಭಾರತʼ ಯೋಜನೆಯಡಿ ಆಯೋಜನೆ

ವಾಟ್ಸನ್, ಲೀಗ್‌ನಲ್ಲಿ ಪರಿಚಿತ ಕ್ರಿಕೆಟರ್ಗಳ ಜೊತೆ ಮತ್ತೆ ಮೈದಾನ ಹಂಚಿಕೊಳ್ಳುತ್ತಿರುವುದಕ್ಕೆ ವಿಶೇಷ ಸಂತಸ ವ್ಯಕ್ತಪಡಿಸಿದರು. ಹರ್ಭಜನ್ ಸಿಂಗ್, ಶಿಖರ್ ಧವನ್ ಮತ್ತು ಡೇಲ್ ಸ್ಟೇನ್ ಮೊದಲಾದ ಆಟಗಾರರ ಜೊತೆ ಆಡಲಿರುವುದರ ಕುರಿತು ಅವರು ಹೇಳಿದರು, ನಾವು ವರ್ಷಗಳ ಕಾಲ ಪರಸ್ಪರ ಎದುರಾಳಿಗಳಾಗಿದ್ದೇವೆ, ಒಂದೇ ಡ್ರೆಸ್ಸಿಂಗ್ ರೂಮಲ್ಲಿ ಸಮಯ ಕಳೆದಿದ್ದೇವೆ ಮತ್ತು ಜಗತ್ತಿನಾದ್ಯಂತ ಒಟ್ಟಿಗೆ ಪ್ರಯಾಣಿಸಿದ್ದೇವೆ. ಈಗ ಕಪ್‌ಗಳ ಒತ್ತಡವಿಲ್ಲದೆ ಆಟವನ್ನು ಆನಂದಿಸುವ ಅವಕಾಶ ಸಿಕ್ಕಿದೆ ಎಂದರು.

ಲೀಗ್ ನಡೆಯಲಿರುವ ಗೋವಾದ ಕುರಿತು ಮಾತನಾಡಿದ ವಾಟ್ಸನ್, “ಭಾರತದಲ್ಲಿ ನಾನು ಅನೇಕ ಸ್ಥಳಗಳಲ್ಲಿ ಆಡಿದ್ದೇನೆ, ಆದರೆ ಗೋವಾಕ್ಕೆ ತನ್ನದೇ ಆದ ವೈಬ್ ಇದೆ. ಆಸ್ಟ್ರೇಲಿಯಾದಲ್ಲಿ ನಾನು ಚಿಕ್ಕವನಿದ್ದಾಗ ಸ್ನೇಹಿತರೊಂದಿಗೆ ಕಡಲತೀರದಲ್ಲಿ ಆಡಿದ ಕ್ರಿಕೆಟ್ ದಿನಗಳನ್ನು ಇದು ನೆನಪಿಸುತ್ತದೆ. ಈ ಲೀಗ್ ನಿಜಕ್ಕೂ ಲೆಜೆಂಡ್ಸ್‌ಗಾಗಿ ಐಪಿಎಲ್‌ನಂತೆ ಅನಿಸುತ್ತದೆ. ನಮ್ಮನ್ನು ಇಷ್ಟು ವರ್ಷಗಳಿಂದ ಬೆಂಬಲಿಸುತ್ತಿರುವ ಅಭಿಮಾನಿಗಳು ಇನ್ನೂ ಅದೇ ಜೋಶ್‌ನಲ್ಲಿ ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು.

ಲೆಜೆಂಡ್ಸ್ ಪ್ರೋ T20 ಲೀಗ್‌ಗೆ ಅಭಿಮಾನಿಗಳಿಂದ ಈಗಾಗಲೇ ಅದ್ಭುತ ಪ್ರತಿಕ್ರಿಯೆ ದೊರಕಿದ್ದು, ಈ ಸೀಸನ್ ಇನ್ನಷ್ಟು ರೋಚಕ ಪೈಪೋಟಿ ಮತ್ತು ಮನರಂಜನೆ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago