ಕ್ರೀಡೆ

ಗೋವಾದಲ್ಲಿ ರಂಗೇರಲಿದೆ ಲೆಜೆಂಡ್ಸ್‌ ಪ್ರೋ T20 ಲೀಗ್‌ : ಆಸಿಸ್‌ ಕ್ರಿಕೆಟಿಗ ವಾಟ್ಸನ್‌ ಹೇಳಿದ್ದೇನು?

ಬೆಂಗಳೂರು : ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವಾಟ್ಸನ್ ಲೆಜೆಂಡ್ಸ್ ಪ್ರೋ T20 ಲೀಗ್‌ನಲ್ಲಿ ಮತ್ತೆ ಸ್ಪರ್ಧಿಸಲು ಸಿದ್ಧರಾಗಿದ್ದು, ಈ ಕುರಿತು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನ ಸಂಭ್ರಮವನ್ನು ಹಿಡಿದಿಟ್ಟುಕೊಂಡಿರುವ ಈ ಲೀಗ್‌ ಕಡಲತೀರದ ಮಧುರ ವಾತಾವರಣದಲ್ಲಿ ನಡೆಯುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಉತ್ಸಾಹವನ್ನು ನೀಡಲಿದೆ ಎಂದು ಅವರು ಹೇಳಿದ್ದಾರೆ.

ಲೆಜೆಂಡ್ಸ್ ಪ್ರೋ T20 ಲೀಗ್‌ ಬಗ್ಗೆ ಮಾತನಾಡಿದ ವಾಟ್ಸನ್, “ಸ್ಪರ್ಧಾತ್ಮಕ ಮನೋಭಾವ ಇನ್ನೂ ನನ್ನೊಳಗೆ ಜೀವಂತವಾಗಿದೆ. ಚೆನ್ನಾಗಿ ಆಡುವ ಆಸೆ ಮತ್ತು ಹುಮ್ಮಸ್ಸು ಇಂದಿಗೂ ಇದೆ. ಈ ಲೀಗ್‌ನಲ್ಲಿ ಅದನ್ನೆಲ್ಲಾ ಆನಂದಿಸುತ್ತಿದ್ದೇನೆ” ಎಂದರು.

ಇದನ್ನು ಓದಿ: ಜನ ಮೆಚ್ಚುಗೆ ಪಡೆದ ಹಗ್ಗ-ಜಗ್ಗಾಟ : ಸಂಸದ ಯದುವೀರ್‌ ಅವರ ʼಫಿಟ್ ಯುವ ಫಾರ್ ವಿಕಸಿತ ಭಾರತʼ ಯೋಜನೆಯಡಿ ಆಯೋಜನೆ

ವಾಟ್ಸನ್, ಲೀಗ್‌ನಲ್ಲಿ ಪರಿಚಿತ ಕ್ರಿಕೆಟರ್ಗಳ ಜೊತೆ ಮತ್ತೆ ಮೈದಾನ ಹಂಚಿಕೊಳ್ಳುತ್ತಿರುವುದಕ್ಕೆ ವಿಶೇಷ ಸಂತಸ ವ್ಯಕ್ತಪಡಿಸಿದರು. ಹರ್ಭಜನ್ ಸಿಂಗ್, ಶಿಖರ್ ಧವನ್ ಮತ್ತು ಡೇಲ್ ಸ್ಟೇನ್ ಮೊದಲಾದ ಆಟಗಾರರ ಜೊತೆ ಆಡಲಿರುವುದರ ಕುರಿತು ಅವರು ಹೇಳಿದರು, ನಾವು ವರ್ಷಗಳ ಕಾಲ ಪರಸ್ಪರ ಎದುರಾಳಿಗಳಾಗಿದ್ದೇವೆ, ಒಂದೇ ಡ್ರೆಸ್ಸಿಂಗ್ ರೂಮಲ್ಲಿ ಸಮಯ ಕಳೆದಿದ್ದೇವೆ ಮತ್ತು ಜಗತ್ತಿನಾದ್ಯಂತ ಒಟ್ಟಿಗೆ ಪ್ರಯಾಣಿಸಿದ್ದೇವೆ. ಈಗ ಕಪ್‌ಗಳ ಒತ್ತಡವಿಲ್ಲದೆ ಆಟವನ್ನು ಆನಂದಿಸುವ ಅವಕಾಶ ಸಿಕ್ಕಿದೆ ಎಂದರು.

ಲೀಗ್ ನಡೆಯಲಿರುವ ಗೋವಾದ ಕುರಿತು ಮಾತನಾಡಿದ ವಾಟ್ಸನ್, “ಭಾರತದಲ್ಲಿ ನಾನು ಅನೇಕ ಸ್ಥಳಗಳಲ್ಲಿ ಆಡಿದ್ದೇನೆ, ಆದರೆ ಗೋವಾಕ್ಕೆ ತನ್ನದೇ ಆದ ವೈಬ್ ಇದೆ. ಆಸ್ಟ್ರೇಲಿಯಾದಲ್ಲಿ ನಾನು ಚಿಕ್ಕವನಿದ್ದಾಗ ಸ್ನೇಹಿತರೊಂದಿಗೆ ಕಡಲತೀರದಲ್ಲಿ ಆಡಿದ ಕ್ರಿಕೆಟ್ ದಿನಗಳನ್ನು ಇದು ನೆನಪಿಸುತ್ತದೆ. ಈ ಲೀಗ್ ನಿಜಕ್ಕೂ ಲೆಜೆಂಡ್ಸ್‌ಗಾಗಿ ಐಪಿಎಲ್‌ನಂತೆ ಅನಿಸುತ್ತದೆ. ನಮ್ಮನ್ನು ಇಷ್ಟು ವರ್ಷಗಳಿಂದ ಬೆಂಬಲಿಸುತ್ತಿರುವ ಅಭಿಮಾನಿಗಳು ಇನ್ನೂ ಅದೇ ಜೋಶ್‌ನಲ್ಲಿ ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು.

ಲೆಜೆಂಡ್ಸ್ ಪ್ರೋ T20 ಲೀಗ್‌ಗೆ ಅಭಿಮಾನಿಗಳಿಂದ ಈಗಾಗಲೇ ಅದ್ಭುತ ಪ್ರತಿಕ್ರಿಯೆ ದೊರಕಿದ್ದು, ಈ ಸೀಸನ್ ಇನ್ನಷ್ಟು ರೋಚಕ ಪೈಪೋಟಿ ಮತ್ತು ಮನರಂಜನೆ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

25 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

29 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

2 hours ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

2 hours ago