ಕ್ರೀಡೆ

ಗೋವಾದಲ್ಲಿ ರಂಗೇರಲಿದೆ ಲೆಜೆಂಡ್ಸ್‌ ಪ್ರೋ T20 ಲೀಗ್‌ : ಆಸಿಸ್‌ ಕ್ರಿಕೆಟಿಗ ವಾಟ್ಸನ್‌ ಹೇಳಿದ್ದೇನು?

ಬೆಂಗಳೂರು : ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವಾಟ್ಸನ್ ಲೆಜೆಂಡ್ಸ್ ಪ್ರೋ T20 ಲೀಗ್‌ನಲ್ಲಿ ಮತ್ತೆ ಸ್ಪರ್ಧಿಸಲು ಸಿದ್ಧರಾಗಿದ್ದು, ಈ ಕುರಿತು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನ ಸಂಭ್ರಮವನ್ನು ಹಿಡಿದಿಟ್ಟುಕೊಂಡಿರುವ ಈ ಲೀಗ್‌ ಕಡಲತೀರದ ಮಧುರ ವಾತಾವರಣದಲ್ಲಿ ನಡೆಯುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಉತ್ಸಾಹವನ್ನು ನೀಡಲಿದೆ ಎಂದು ಅವರು ಹೇಳಿದ್ದಾರೆ.

ಲೆಜೆಂಡ್ಸ್ ಪ್ರೋ T20 ಲೀಗ್‌ ಬಗ್ಗೆ ಮಾತನಾಡಿದ ವಾಟ್ಸನ್, “ಸ್ಪರ್ಧಾತ್ಮಕ ಮನೋಭಾವ ಇನ್ನೂ ನನ್ನೊಳಗೆ ಜೀವಂತವಾಗಿದೆ. ಚೆನ್ನಾಗಿ ಆಡುವ ಆಸೆ ಮತ್ತು ಹುಮ್ಮಸ್ಸು ಇಂದಿಗೂ ಇದೆ. ಈ ಲೀಗ್‌ನಲ್ಲಿ ಅದನ್ನೆಲ್ಲಾ ಆನಂದಿಸುತ್ತಿದ್ದೇನೆ” ಎಂದರು.

ಇದನ್ನು ಓದಿ: ಜನ ಮೆಚ್ಚುಗೆ ಪಡೆದ ಹಗ್ಗ-ಜಗ್ಗಾಟ : ಸಂಸದ ಯದುವೀರ್‌ ಅವರ ʼಫಿಟ್ ಯುವ ಫಾರ್ ವಿಕಸಿತ ಭಾರತʼ ಯೋಜನೆಯಡಿ ಆಯೋಜನೆ

ವಾಟ್ಸನ್, ಲೀಗ್‌ನಲ್ಲಿ ಪರಿಚಿತ ಕ್ರಿಕೆಟರ್ಗಳ ಜೊತೆ ಮತ್ತೆ ಮೈದಾನ ಹಂಚಿಕೊಳ್ಳುತ್ತಿರುವುದಕ್ಕೆ ವಿಶೇಷ ಸಂತಸ ವ್ಯಕ್ತಪಡಿಸಿದರು. ಹರ್ಭಜನ್ ಸಿಂಗ್, ಶಿಖರ್ ಧವನ್ ಮತ್ತು ಡೇಲ್ ಸ್ಟೇನ್ ಮೊದಲಾದ ಆಟಗಾರರ ಜೊತೆ ಆಡಲಿರುವುದರ ಕುರಿತು ಅವರು ಹೇಳಿದರು, ನಾವು ವರ್ಷಗಳ ಕಾಲ ಪರಸ್ಪರ ಎದುರಾಳಿಗಳಾಗಿದ್ದೇವೆ, ಒಂದೇ ಡ್ರೆಸ್ಸಿಂಗ್ ರೂಮಲ್ಲಿ ಸಮಯ ಕಳೆದಿದ್ದೇವೆ ಮತ್ತು ಜಗತ್ತಿನಾದ್ಯಂತ ಒಟ್ಟಿಗೆ ಪ್ರಯಾಣಿಸಿದ್ದೇವೆ. ಈಗ ಕಪ್‌ಗಳ ಒತ್ತಡವಿಲ್ಲದೆ ಆಟವನ್ನು ಆನಂದಿಸುವ ಅವಕಾಶ ಸಿಕ್ಕಿದೆ ಎಂದರು.

ಲೀಗ್ ನಡೆಯಲಿರುವ ಗೋವಾದ ಕುರಿತು ಮಾತನಾಡಿದ ವಾಟ್ಸನ್, “ಭಾರತದಲ್ಲಿ ನಾನು ಅನೇಕ ಸ್ಥಳಗಳಲ್ಲಿ ಆಡಿದ್ದೇನೆ, ಆದರೆ ಗೋವಾಕ್ಕೆ ತನ್ನದೇ ಆದ ವೈಬ್ ಇದೆ. ಆಸ್ಟ್ರೇಲಿಯಾದಲ್ಲಿ ನಾನು ಚಿಕ್ಕವನಿದ್ದಾಗ ಸ್ನೇಹಿತರೊಂದಿಗೆ ಕಡಲತೀರದಲ್ಲಿ ಆಡಿದ ಕ್ರಿಕೆಟ್ ದಿನಗಳನ್ನು ಇದು ನೆನಪಿಸುತ್ತದೆ. ಈ ಲೀಗ್ ನಿಜಕ್ಕೂ ಲೆಜೆಂಡ್ಸ್‌ಗಾಗಿ ಐಪಿಎಲ್‌ನಂತೆ ಅನಿಸುತ್ತದೆ. ನಮ್ಮನ್ನು ಇಷ್ಟು ವರ್ಷಗಳಿಂದ ಬೆಂಬಲಿಸುತ್ತಿರುವ ಅಭಿಮಾನಿಗಳು ಇನ್ನೂ ಅದೇ ಜೋಶ್‌ನಲ್ಲಿ ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು.

ಲೆಜೆಂಡ್ಸ್ ಪ್ರೋ T20 ಲೀಗ್‌ಗೆ ಅಭಿಮಾನಿಗಳಿಂದ ಈಗಾಗಲೇ ಅದ್ಭುತ ಪ್ರತಿಕ್ರಿಯೆ ದೊರಕಿದ್ದು, ಈ ಸೀಸನ್ ಇನ್ನಷ್ಟು ರೋಚಕ ಪೈಪೋಟಿ ಮತ್ತು ಮನರಂಜನೆ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago