ಕ್ರೀಡೆ

ಗೋವಾದಲ್ಲಿ ರಂಗೇರಲಿದೆ ಲೆಜೆಂಡ್ಸ್‌ ಪ್ರೋ T20 ಲೀಗ್‌ : ಆಸಿಸ್‌ ಕ್ರಿಕೆಟಿಗ ವಾಟ್ಸನ್‌ ಹೇಳಿದ್ದೇನು?

ಬೆಂಗಳೂರು : ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವಾಟ್ಸನ್ ಲೆಜೆಂಡ್ಸ್ ಪ್ರೋ T20 ಲೀಗ್‌ನಲ್ಲಿ ಮತ್ತೆ ಸ್ಪರ್ಧಿಸಲು ಸಿದ್ಧರಾಗಿದ್ದು, ಈ ಕುರಿತು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನ ಸಂಭ್ರಮವನ್ನು ಹಿಡಿದಿಟ್ಟುಕೊಂಡಿರುವ ಈ ಲೀಗ್‌ ಕಡಲತೀರದ ಮಧುರ ವಾತಾವರಣದಲ್ಲಿ ನಡೆಯುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಉತ್ಸಾಹವನ್ನು ನೀಡಲಿದೆ ಎಂದು ಅವರು ಹೇಳಿದ್ದಾರೆ.

ಲೆಜೆಂಡ್ಸ್ ಪ್ರೋ T20 ಲೀಗ್‌ ಬಗ್ಗೆ ಮಾತನಾಡಿದ ವಾಟ್ಸನ್, “ಸ್ಪರ್ಧಾತ್ಮಕ ಮನೋಭಾವ ಇನ್ನೂ ನನ್ನೊಳಗೆ ಜೀವಂತವಾಗಿದೆ. ಚೆನ್ನಾಗಿ ಆಡುವ ಆಸೆ ಮತ್ತು ಹುಮ್ಮಸ್ಸು ಇಂದಿಗೂ ಇದೆ. ಈ ಲೀಗ್‌ನಲ್ಲಿ ಅದನ್ನೆಲ್ಲಾ ಆನಂದಿಸುತ್ತಿದ್ದೇನೆ” ಎಂದರು.

ಇದನ್ನು ಓದಿ: ಜನ ಮೆಚ್ಚುಗೆ ಪಡೆದ ಹಗ್ಗ-ಜಗ್ಗಾಟ : ಸಂಸದ ಯದುವೀರ್‌ ಅವರ ʼಫಿಟ್ ಯುವ ಫಾರ್ ವಿಕಸಿತ ಭಾರತʼ ಯೋಜನೆಯಡಿ ಆಯೋಜನೆ

ವಾಟ್ಸನ್, ಲೀಗ್‌ನಲ್ಲಿ ಪರಿಚಿತ ಕ್ರಿಕೆಟರ್ಗಳ ಜೊತೆ ಮತ್ತೆ ಮೈದಾನ ಹಂಚಿಕೊಳ್ಳುತ್ತಿರುವುದಕ್ಕೆ ವಿಶೇಷ ಸಂತಸ ವ್ಯಕ್ತಪಡಿಸಿದರು. ಹರ್ಭಜನ್ ಸಿಂಗ್, ಶಿಖರ್ ಧವನ್ ಮತ್ತು ಡೇಲ್ ಸ್ಟೇನ್ ಮೊದಲಾದ ಆಟಗಾರರ ಜೊತೆ ಆಡಲಿರುವುದರ ಕುರಿತು ಅವರು ಹೇಳಿದರು, ನಾವು ವರ್ಷಗಳ ಕಾಲ ಪರಸ್ಪರ ಎದುರಾಳಿಗಳಾಗಿದ್ದೇವೆ, ಒಂದೇ ಡ್ರೆಸ್ಸಿಂಗ್ ರೂಮಲ್ಲಿ ಸಮಯ ಕಳೆದಿದ್ದೇವೆ ಮತ್ತು ಜಗತ್ತಿನಾದ್ಯಂತ ಒಟ್ಟಿಗೆ ಪ್ರಯಾಣಿಸಿದ್ದೇವೆ. ಈಗ ಕಪ್‌ಗಳ ಒತ್ತಡವಿಲ್ಲದೆ ಆಟವನ್ನು ಆನಂದಿಸುವ ಅವಕಾಶ ಸಿಕ್ಕಿದೆ ಎಂದರು.

ಲೀಗ್ ನಡೆಯಲಿರುವ ಗೋವಾದ ಕುರಿತು ಮಾತನಾಡಿದ ವಾಟ್ಸನ್, “ಭಾರತದಲ್ಲಿ ನಾನು ಅನೇಕ ಸ್ಥಳಗಳಲ್ಲಿ ಆಡಿದ್ದೇನೆ, ಆದರೆ ಗೋವಾಕ್ಕೆ ತನ್ನದೇ ಆದ ವೈಬ್ ಇದೆ. ಆಸ್ಟ್ರೇಲಿಯಾದಲ್ಲಿ ನಾನು ಚಿಕ್ಕವನಿದ್ದಾಗ ಸ್ನೇಹಿತರೊಂದಿಗೆ ಕಡಲತೀರದಲ್ಲಿ ಆಡಿದ ಕ್ರಿಕೆಟ್ ದಿನಗಳನ್ನು ಇದು ನೆನಪಿಸುತ್ತದೆ. ಈ ಲೀಗ್ ನಿಜಕ್ಕೂ ಲೆಜೆಂಡ್ಸ್‌ಗಾಗಿ ಐಪಿಎಲ್‌ನಂತೆ ಅನಿಸುತ್ತದೆ. ನಮ್ಮನ್ನು ಇಷ್ಟು ವರ್ಷಗಳಿಂದ ಬೆಂಬಲಿಸುತ್ತಿರುವ ಅಭಿಮಾನಿಗಳು ಇನ್ನೂ ಅದೇ ಜೋಶ್‌ನಲ್ಲಿ ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು.

ಲೆಜೆಂಡ್ಸ್ ಪ್ರೋ T20 ಲೀಗ್‌ಗೆ ಅಭಿಮಾನಿಗಳಿಂದ ಈಗಾಗಲೇ ಅದ್ಭುತ ಪ್ರತಿಕ್ರಿಯೆ ದೊರಕಿದ್ದು, ಈ ಸೀಸನ್ ಇನ್ನಷ್ಟು ರೋಚಕ ಪೈಪೋಟಿ ಮತ್ತು ಮನರಂಜನೆ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

6 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

10 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago