ಬೆಂಗಳೂರು : ಆಸ್ಟ್ರೇಲಿಯಾದ ಶ್ರೇಷ್ಠ ಕ್ರಿಕೆಟಿಗ ಶೇನ್ ವಾಟ್ಸನ್ ಲೆಜೆಂಡ್ಸ್ ಪ್ರೋ T20 ಲೀಗ್ನಲ್ಲಿ ಮತ್ತೆ ಸ್ಪರ್ಧಿಸಲು ಸಿದ್ಧರಾಗಿದ್ದು, ಈ ಕುರಿತು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್ನ ಸಂಭ್ರಮವನ್ನು ಹಿಡಿದಿಟ್ಟುಕೊಂಡಿರುವ ಈ ಲೀಗ್ ಕಡಲತೀರದ ಮಧುರ ವಾತಾವರಣದಲ್ಲಿ ನಡೆಯುವುದರಿಂದ ಅಭಿಮಾನಿಗಳಿಗೆ ಮತ್ತಷ್ಟು ಉತ್ಸಾಹವನ್ನು ನೀಡಲಿದೆ ಎಂದು ಅವರು ಹೇಳಿದ್ದಾರೆ.
ಲೆಜೆಂಡ್ಸ್ ಪ್ರೋ T20 ಲೀಗ್ ಬಗ್ಗೆ ಮಾತನಾಡಿದ ವಾಟ್ಸನ್, “ಸ್ಪರ್ಧಾತ್ಮಕ ಮನೋಭಾವ ಇನ್ನೂ ನನ್ನೊಳಗೆ ಜೀವಂತವಾಗಿದೆ. ಚೆನ್ನಾಗಿ ಆಡುವ ಆಸೆ ಮತ್ತು ಹುಮ್ಮಸ್ಸು ಇಂದಿಗೂ ಇದೆ. ಈ ಲೀಗ್ನಲ್ಲಿ ಅದನ್ನೆಲ್ಲಾ ಆನಂದಿಸುತ್ತಿದ್ದೇನೆ” ಎಂದರು.
ಇದನ್ನು ಓದಿ: ಜನ ಮೆಚ್ಚುಗೆ ಪಡೆದ ಹಗ್ಗ-ಜಗ್ಗಾಟ : ಸಂಸದ ಯದುವೀರ್ ಅವರ ʼಫಿಟ್ ಯುವ ಫಾರ್ ವಿಕಸಿತ ಭಾರತʼ ಯೋಜನೆಯಡಿ ಆಯೋಜನೆ
ವಾಟ್ಸನ್, ಲೀಗ್ನಲ್ಲಿ ಪರಿಚಿತ ಕ್ರಿಕೆಟರ್ಗಳ ಜೊತೆ ಮತ್ತೆ ಮೈದಾನ ಹಂಚಿಕೊಳ್ಳುತ್ತಿರುವುದಕ್ಕೆ ವಿಶೇಷ ಸಂತಸ ವ್ಯಕ್ತಪಡಿಸಿದರು. ಹರ್ಭಜನ್ ಸಿಂಗ್, ಶಿಖರ್ ಧವನ್ ಮತ್ತು ಡೇಲ್ ಸ್ಟೇನ್ ಮೊದಲಾದ ಆಟಗಾರರ ಜೊತೆ ಆಡಲಿರುವುದರ ಕುರಿತು ಅವರು ಹೇಳಿದರು, ನಾವು ವರ್ಷಗಳ ಕಾಲ ಪರಸ್ಪರ ಎದುರಾಳಿಗಳಾಗಿದ್ದೇವೆ, ಒಂದೇ ಡ್ರೆಸ್ಸಿಂಗ್ ರೂಮಲ್ಲಿ ಸಮಯ ಕಳೆದಿದ್ದೇವೆ ಮತ್ತು ಜಗತ್ತಿನಾದ್ಯಂತ ಒಟ್ಟಿಗೆ ಪ್ರಯಾಣಿಸಿದ್ದೇವೆ. ಈಗ ಕಪ್ಗಳ ಒತ್ತಡವಿಲ್ಲದೆ ಆಟವನ್ನು ಆನಂದಿಸುವ ಅವಕಾಶ ಸಿಕ್ಕಿದೆ ಎಂದರು.
ಲೀಗ್ ನಡೆಯಲಿರುವ ಗೋವಾದ ಕುರಿತು ಮಾತನಾಡಿದ ವಾಟ್ಸನ್, “ಭಾರತದಲ್ಲಿ ನಾನು ಅನೇಕ ಸ್ಥಳಗಳಲ್ಲಿ ಆಡಿದ್ದೇನೆ, ಆದರೆ ಗೋವಾಕ್ಕೆ ತನ್ನದೇ ಆದ ವೈಬ್ ಇದೆ. ಆಸ್ಟ್ರೇಲಿಯಾದಲ್ಲಿ ನಾನು ಚಿಕ್ಕವನಿದ್ದಾಗ ಸ್ನೇಹಿತರೊಂದಿಗೆ ಕಡಲತೀರದಲ್ಲಿ ಆಡಿದ ಕ್ರಿಕೆಟ್ ದಿನಗಳನ್ನು ಇದು ನೆನಪಿಸುತ್ತದೆ. ಈ ಲೀಗ್ ನಿಜಕ್ಕೂ ಲೆಜೆಂಡ್ಸ್ಗಾಗಿ ಐಪಿಎಲ್ನಂತೆ ಅನಿಸುತ್ತದೆ. ನಮ್ಮನ್ನು ಇಷ್ಟು ವರ್ಷಗಳಿಂದ ಬೆಂಬಲಿಸುತ್ತಿರುವ ಅಭಿಮಾನಿಗಳು ಇನ್ನೂ ಅದೇ ಜೋಶ್ನಲ್ಲಿ ನಮ್ಮೊಂದಿಗೆ ಇದ್ದಾರೆ ಎಂದು ಹೇಳಿದರು.
ಲೆಜೆಂಡ್ಸ್ ಪ್ರೋ T20 ಲೀಗ್ಗೆ ಅಭಿಮಾನಿಗಳಿಂದ ಈಗಾಗಲೇ ಅದ್ಭುತ ಪ್ರತಿಕ್ರಿಯೆ ದೊರಕಿದ್ದು, ಈ ಸೀಸನ್ ಇನ್ನಷ್ಟು ರೋಚಕ ಪೈಪೋಟಿ ಮತ್ತು ಮನರಂಜನೆ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…