ಕ್ರೀಡೆ

2024ರ ಟಿ20 ವಿಶ್ವಕಪ್​ವರೆ​ಗೂ ಹಿಟ್‌ಮ್ಯಾನ್‌ ನಾಯಕನಾಗಿ ಮುಂದುವರಿಯಲಿ: ಗಂಗೂಲಿ

ಕೊಲ್ಕತ್ತಾ : ಭಾರತ ತಂಡ ನಾಯಕ ರೋಹಿತ್‌ ಶರ್ಮಾ 2024ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ವರೆಗೂ ಅವರೇ ನಾಯಕರಾಗಿ ಮುಂದುವರೆಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮನ್ನಡೆಸಿದ ರೋಹಿತ್‌ ಶರ್ಮಾ ಅವರ ಆಟದ ವೈಖರಿಗೆ ಪ್ರಭಾವಿತರಾಗಿರುವ ಮಾಜಿ ಕ್ಯಾಪ್ಟನ್‌ ಸೌರವ್‌ ಗಂಗೂಲಿ ಅವರು ವಿಶ್ವಕಪ್‌ ನಲ್ಲಿ ರೋಹಿತ್‌ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಾರೆ. ರೋಹಿತ್‌ ಅವರು ಎಲ್ಲಾ ಮಾದರಿಯಲ್ಲೂ ತಂಡಕ್ಕೆ ಲಭ್ಯರಾದ ಬಳಿಕ ತಂಡವನ್ನು ಅವರೇ ಮುನ್ನಡೆಸಬೇಕು. ಅವರು 2024 ರ ಟಿ20 ವಿಶ್ವಕಪ್‌ ವರೆಗೆ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನಾನು ಭಾವಿಸುತ್ತೇನೆಂದು ಸೌರವ್‌ ಗಂಗೂಲಿ ಹೇಳಿದ್ದಾರೆ.

ಇದೇ ವೇಳೆ ಬಿಸಿಸಿಐ ರಾಹುಲ್‌ ದ್ರಾವಿಡ್‌ ಅವರನ್ನು ಮುಖ್ಯ ಕೋಚ್‌ ಆಗಿ ಅವಧಿ ವಿಸ್ತರಣೆ ಬಗ್ಗೆ ಮಾತನಾಡಿ, ಬಿಸಿಸಿಐ ರಾಹುಲ್‌ ದ್ರಾವಿಡ್‌ ಅವರ ಮೇಲೆ ತೋರಿಸಿರುವ ವಿಶ್ವಾಸ ಆಶ್ಚರ್ಯವೇನಲ್ಲ. ಆದರೆ, ರಾಹುಲ್‌ ಭಾರತ ತಂಡದ ಮುಖ್ಯ ಕೋಚ್‌ ಆಗಲು ಒಪ್ಪುತ್ತಾರೋ ಇಲ್ಲವೋ ಎಂಬುದು ನನ್ನನ್ನು ಸದಾ ಕಾಡುತ್ತಿತ್ತು ಎಂದು ತಿಳಿಸಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್‌ ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ರೋಹಿತ್‌ ಶರ್ಮಾ ಆಡಿದ 10 ಪಂದ್ಯಗಳಲ್ಲಿಯೂ ಜಯ ಸಾಧಿಸಿದ್ದರು. ಫೈನಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್‌ಅಪ್‌ ಆದರು. ಟೂರ್ನಿಯುದ್ದಕ್ಕೂ ಡೇರ್‌ ಅಂಡ್‌ ಡ್ಯಾಶಿಂಗ್‌ ಆಟದ ಮೂಲಕ ಎಲ್ಲರ ಮನೆ ಮಾತಾಗಿದ್ದರು.

ಸದ್ಯ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡ ಪ್ರವಾಸ ಕೈಗೊಳ್ಳಲಿದ್ದು, ಟೆಸ್ಟ್‌, ಓಡಿಐ ಮತ್ತು ಟಿ20 ಮಾದರಿಗೆ ತಂಡ ಪ್ರಕಟಿಸಿದೆ. ಇದರಲ್ಲಿ ರೋಹಿತ್‌ ಶರ್ಮಾ ನಾಯಕರಾಗಿ ಟೆಸ್ಟ್‌ ನಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ. ಏಕದಿನ ಮಾದರಿಗೆ ರಾಹುಲ್‌ ನಾಯಕರಾರೇ ಟಿ20 ನಾಯಕನ ಪಟ್ಟ ಸೂರ್ಯಕುಮಾರ್‌ ಯಾದವ್‌ ಪಾಲಾಗಿದೆ.

andolanait

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

10 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

10 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

12 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

14 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

14 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

15 hours ago