ಕ್ರೀಡೆ

2024ರ ಟಿ20 ವಿಶ್ವಕಪ್​ವರೆ​ಗೂ ಹಿಟ್‌ಮ್ಯಾನ್‌ ನಾಯಕನಾಗಿ ಮುಂದುವರಿಯಲಿ: ಗಂಗೂಲಿ

ಕೊಲ್ಕತ್ತಾ : ಭಾರತ ತಂಡ ನಾಯಕ ರೋಹಿತ್‌ ಶರ್ಮಾ 2024ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ವರೆಗೂ ಅವರೇ ನಾಯಕರಾಗಿ ಮುಂದುವರೆಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮನ್ನಡೆಸಿದ ರೋಹಿತ್‌ ಶರ್ಮಾ ಅವರ ಆಟದ ವೈಖರಿಗೆ ಪ್ರಭಾವಿತರಾಗಿರುವ ಮಾಜಿ ಕ್ಯಾಪ್ಟನ್‌ ಸೌರವ್‌ ಗಂಗೂಲಿ ಅವರು ವಿಶ್ವಕಪ್‌ ನಲ್ಲಿ ರೋಹಿತ್‌ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಾರೆ. ರೋಹಿತ್‌ ಅವರು ಎಲ್ಲಾ ಮಾದರಿಯಲ್ಲೂ ತಂಡಕ್ಕೆ ಲಭ್ಯರಾದ ಬಳಿಕ ತಂಡವನ್ನು ಅವರೇ ಮುನ್ನಡೆಸಬೇಕು. ಅವರು 2024 ರ ಟಿ20 ವಿಶ್ವಕಪ್‌ ವರೆಗೆ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನಾನು ಭಾವಿಸುತ್ತೇನೆಂದು ಸೌರವ್‌ ಗಂಗೂಲಿ ಹೇಳಿದ್ದಾರೆ.

ಇದೇ ವೇಳೆ ಬಿಸಿಸಿಐ ರಾಹುಲ್‌ ದ್ರಾವಿಡ್‌ ಅವರನ್ನು ಮುಖ್ಯ ಕೋಚ್‌ ಆಗಿ ಅವಧಿ ವಿಸ್ತರಣೆ ಬಗ್ಗೆ ಮಾತನಾಡಿ, ಬಿಸಿಸಿಐ ರಾಹುಲ್‌ ದ್ರಾವಿಡ್‌ ಅವರ ಮೇಲೆ ತೋರಿಸಿರುವ ವಿಶ್ವಾಸ ಆಶ್ಚರ್ಯವೇನಲ್ಲ. ಆದರೆ, ರಾಹುಲ್‌ ಭಾರತ ತಂಡದ ಮುಖ್ಯ ಕೋಚ್‌ ಆಗಲು ಒಪ್ಪುತ್ತಾರೋ ಇಲ್ಲವೋ ಎಂಬುದು ನನ್ನನ್ನು ಸದಾ ಕಾಡುತ್ತಿತ್ತು ಎಂದು ತಿಳಿಸಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್‌ ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ರೋಹಿತ್‌ ಶರ್ಮಾ ಆಡಿದ 10 ಪಂದ್ಯಗಳಲ್ಲಿಯೂ ಜಯ ಸಾಧಿಸಿದ್ದರು. ಫೈನಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್‌ಅಪ್‌ ಆದರು. ಟೂರ್ನಿಯುದ್ದಕ್ಕೂ ಡೇರ್‌ ಅಂಡ್‌ ಡ್ಯಾಶಿಂಗ್‌ ಆಟದ ಮೂಲಕ ಎಲ್ಲರ ಮನೆ ಮಾತಾಗಿದ್ದರು.

ಸದ್ಯ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡ ಪ್ರವಾಸ ಕೈಗೊಳ್ಳಲಿದ್ದು, ಟೆಸ್ಟ್‌, ಓಡಿಐ ಮತ್ತು ಟಿ20 ಮಾದರಿಗೆ ತಂಡ ಪ್ರಕಟಿಸಿದೆ. ಇದರಲ್ಲಿ ರೋಹಿತ್‌ ಶರ್ಮಾ ನಾಯಕರಾಗಿ ಟೆಸ್ಟ್‌ ನಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ. ಏಕದಿನ ಮಾದರಿಗೆ ರಾಹುಲ್‌ ನಾಯಕರಾರೇ ಟಿ20 ನಾಯಕನ ಪಟ್ಟ ಸೂರ್ಯಕುಮಾರ್‌ ಯಾದವ್‌ ಪಾಲಾಗಿದೆ.

andolanait

Recent Posts

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

4 mins ago

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

1 hour ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

1 hour ago

ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರಿಂದ ಪಾದಯಾತ್ರೆ: ಪೊಲೀಸರಿಂದ ಬ್ಯಾರಿಕೇಡ್‌ ಹಾಕಿ ಜಾಗೃತಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…

2 hours ago

ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…

2 hours ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…

2 hours ago