ಕ್ರೀಡೆ

2024ರ ಟಿ20 ವಿಶ್ವಕಪ್​ವರೆ​ಗೂ ಹಿಟ್‌ಮ್ಯಾನ್‌ ನಾಯಕನಾಗಿ ಮುಂದುವರಿಯಲಿ: ಗಂಗೂಲಿ

ಕೊಲ್ಕತ್ತಾ : ಭಾರತ ತಂಡ ನಾಯಕ ರೋಹಿತ್‌ ಶರ್ಮಾ 2024ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ವರೆಗೂ ಅವರೇ ನಾಯಕರಾಗಿ ಮುಂದುವರೆಯಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಭಾರತ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮನ್ನಡೆಸಿದ ರೋಹಿತ್‌ ಶರ್ಮಾ ಅವರ ಆಟದ ವೈಖರಿಗೆ ಪ್ರಭಾವಿತರಾಗಿರುವ ಮಾಜಿ ಕ್ಯಾಪ್ಟನ್‌ ಸೌರವ್‌ ಗಂಗೂಲಿ ಅವರು ವಿಶ್ವಕಪ್‌ ನಲ್ಲಿ ರೋಹಿತ್‌ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ್ದಾರೆ. ರೋಹಿತ್‌ ಅವರು ಎಲ್ಲಾ ಮಾದರಿಯಲ್ಲೂ ತಂಡಕ್ಕೆ ಲಭ್ಯರಾದ ಬಳಿಕ ತಂಡವನ್ನು ಅವರೇ ಮುನ್ನಡೆಸಬೇಕು. ಅವರು 2024 ರ ಟಿ20 ವಿಶ್ವಕಪ್‌ ವರೆಗೆ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನಾನು ಭಾವಿಸುತ್ತೇನೆಂದು ಸೌರವ್‌ ಗಂಗೂಲಿ ಹೇಳಿದ್ದಾರೆ.

ಇದೇ ವೇಳೆ ಬಿಸಿಸಿಐ ರಾಹುಲ್‌ ದ್ರಾವಿಡ್‌ ಅವರನ್ನು ಮುಖ್ಯ ಕೋಚ್‌ ಆಗಿ ಅವಧಿ ವಿಸ್ತರಣೆ ಬಗ್ಗೆ ಮಾತನಾಡಿ, ಬಿಸಿಸಿಐ ರಾಹುಲ್‌ ದ್ರಾವಿಡ್‌ ಅವರ ಮೇಲೆ ತೋರಿಸಿರುವ ವಿಶ್ವಾಸ ಆಶ್ಚರ್ಯವೇನಲ್ಲ. ಆದರೆ, ರಾಹುಲ್‌ ಭಾರತ ತಂಡದ ಮುಖ್ಯ ಕೋಚ್‌ ಆಗಲು ಒಪ್ಪುತ್ತಾರೋ ಇಲ್ಲವೋ ಎಂಬುದು ನನ್ನನ್ನು ಸದಾ ಕಾಡುತ್ತಿತ್ತು ಎಂದು ತಿಳಿಸಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್‌ ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ ರೋಹಿತ್‌ ಶರ್ಮಾ ಆಡಿದ 10 ಪಂದ್ಯಗಳಲ್ಲಿಯೂ ಜಯ ಸಾಧಿಸಿದ್ದರು. ಫೈನಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್‌ಅಪ್‌ ಆದರು. ಟೂರ್ನಿಯುದ್ದಕ್ಕೂ ಡೇರ್‌ ಅಂಡ್‌ ಡ್ಯಾಶಿಂಗ್‌ ಆಟದ ಮೂಲಕ ಎಲ್ಲರ ಮನೆ ಮಾತಾಗಿದ್ದರು.

ಸದ್ಯ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡ ಪ್ರವಾಸ ಕೈಗೊಳ್ಳಲಿದ್ದು, ಟೆಸ್ಟ್‌, ಓಡಿಐ ಮತ್ತು ಟಿ20 ಮಾದರಿಗೆ ತಂಡ ಪ್ರಕಟಿಸಿದೆ. ಇದರಲ್ಲಿ ರೋಹಿತ್‌ ಶರ್ಮಾ ನಾಯಕರಾಗಿ ಟೆಸ್ಟ್‌ ನಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ. ಏಕದಿನ ಮಾದರಿಗೆ ರಾಹುಲ್‌ ನಾಯಕರಾರೇ ಟಿ20 ನಾಯಕನ ಪಟ್ಟ ಸೂರ್ಯಕುಮಾರ್‌ ಯಾದವ್‌ ಪಾಲಾಗಿದೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago