ನವದೆಹಲಿ : ಭಾರತವು ಇದೀಗ ಸ್ವಲ್ಪ ಸಮಯದಿಂದ ಸೀಮಿತ ಓವರ್ ಗಳ ಪಂದ್ಯದಲ್ಲಿ ಸಾಮಾನ್ಯ ತಂಡವಾಗಿದೆ. ಕೆಲವು ತಿಂಗಳ ಹಿಂದೆ ಟ್ವೆಂಟಿ-20 ವಿಶ್ವಕಪ್ ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ ತಂಡದಿಂದ ಭಾರತವು ಇದೀಗ ಸೋತಿದೆ. ನಾವು ಏಕದಿನ ಸರಣಿಯಲ್ಲೂ ಬಾಂಗ್ಲಾದೇಶ ವಿರುದ್ಧ ಸೋತಿದ್ದೇವೆ. ಮೂರ್ಖ ಹೇಳಿಕೆಗಳನ್ನು ನೀಡುವ ಬದಲು ಅವರು ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ ” ಎಂದು ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ವಿಂಡೀಸ್ ವಿರುದ್ಧ ಟ್ವೆಂಟಿ-20 ಸರಣಿಯಲ್ಲಿ 0-2 ಹಿನ್ನಡೆಯಲ್ಲಿದ್ದ ಭಾರತವು 4ನೇ ಟಿ-20 ಜಯಿಸಿದ ನಂತರ ಸರಣಿಯನ್ನು 2-2ರಿಂದ ಸಮಬಲಗೊಳಿಸಿತು. 5ನೇ ಪಂದ್ಯವನ್ನು ಸೋತು ಸರಣಿಯನ್ನು 3-2 ಅಂತರದಿಂದ ಕಳೆದುಕೊಂಡಿತು. 50 ಓವರ್ ವಿಶ್ವಕಪ್ ಮಾತ್ರವಲ್ಲ ಕಳೆದ ಬಾರಿ ಟಿ-20 ವಿಶ್ವಕಪ್ ಗೂ ಅರ್ಹತೆ ಪಡೆಯಲು ವಿಂಡೀಸ್ ವಿಫಲವಾಗಿದೆ. ಈ ತಂಡದ ವಿರುದ್ಧ ಭಾರತದ ಪ್ರದರ್ಶನ ನೋವುಂಟು ಮಾಡುತ್ತಿದೆ ಎಂದು ಪ್ರಸಾದ್ ಟ್ವೀಟಿಸಿದರು.
ಇತ್ತೀಚೆಗೆ ಹಾರ್ದಿಕ್ ಪಾಂಡ್ಯ ಬಳಗವನ್ನು ಟೀಕಿಸುತ್ತಿರುವ ಪ್ರಸಾದ್ ಇದೀಗ ಸರಣಿ ಸೋತಿರುವುದಕ್ಕೆ ಮತ್ತೆ ಟೀಕಿಸಿದರು.
“ಭಾರತವು ತಮ್ಮ ಕೌಶಲ್ಯವನ್ನು ಸುಧಾರಿಸಿಕೊಳ್ಳಬೇಕಾಗಿದೆ. ಆಟಗಾರರ ಗೆಲ್ಲಬೇಕೆಂಬ ಹಸಿವು ಮತ್ತು ತೀವ್ರತೆಯ ಕೊರತೆ ಇದೆ ಆಗಾಗ್ಗೆ ನಾಯಕನು ಸುಳಿವಿಲ್ಲದಂತೆ ಕಾಣುತ್ತಾನೆ. ಬೌಲರ್ ಗಳು ಬ್ಯಾಟ್ ಮಾಡಲು ಸಾಧ್ಯವಿಲ್ಲ, ಬ್ಯಾಟ್ಸ್ಮನ್ ಗಳು ಬೌಲಿಂಗ್ ಮಾಡಲು ಸಾಧ್ಯವಿಲ್ಲ ಎಂದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…