ಕ್ರೀಡೆ

ಭಾರತದ ಆಟಗಾರರು ಮೂರ್ಖ ಹೇಳಿಕೆ ನೀಡುವ ಬದಲು ಆತ್ಮಾವಲೋಕನ ಮಾಡಿಕೊಳ್ಳಲಿ: ವೆಂಕಟೇಶ್ ಪ್ರಸಾದ್ ಟೀಕೆ

ನವದೆಹಲಿ : ಭಾರತವು ಇದೀಗ ಸ್ವಲ್ಪ ಸಮಯದಿಂದ ಸೀಮಿತ ಓವರ್ ಗಳ ಪಂದ್ಯದಲ್ಲಿ ಸಾಮಾನ್ಯ ತಂಡವಾಗಿದೆ. ಕೆಲವು ತಿಂಗಳ ಹಿಂದೆ ಟ್ವೆಂಟಿ-20 ವಿಶ್ವಕಪ್ ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ ತಂಡದಿಂದ ಭಾರತವು ಇದೀಗ ಸೋತಿದೆ. ನಾವು ಏಕದಿನ ಸರಣಿಯಲ್ಲೂ ಬಾಂಗ್ಲಾದೇಶ ವಿರುದ್ಧ ಸೋತಿದ್ದೇವೆ. ಮೂರ್ಖ ಹೇಳಿಕೆಗಳನ್ನು ನೀಡುವ ಬದಲು ಅವರು ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ ” ಎಂದು ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ವಿಂಡೀಸ್ ವಿರುದ್ಧ ಟ್ವೆಂಟಿ-20 ಸರಣಿಯಲ್ಲಿ 0-2 ಹಿನ್ನಡೆಯಲ್ಲಿದ್ದ ಭಾರತವು 4ನೇ ಟಿ-20 ಜಯಿಸಿದ ನಂತರ ಸರಣಿಯನ್ನು 2-2ರಿಂದ ಸಮಬಲಗೊಳಿಸಿತು. 5ನೇ ಪಂದ್ಯವನ್ನು ಸೋತು ಸರಣಿಯನ್ನು 3-2 ಅಂತರದಿಂದ ಕಳೆದುಕೊಂಡಿತು. 50 ಓವರ್ ವಿಶ್ವಕಪ್ ಮಾತ್ರವಲ್ಲ ಕಳೆದ ಬಾರಿ ಟಿ-20 ವಿಶ್ವಕಪ್ ಗೂ ಅರ್ಹತೆ ಪಡೆಯಲು ವಿಂಡೀಸ್ ವಿಫಲವಾಗಿದೆ. ಈ ತಂಡದ ವಿರುದ್ಧ ಭಾರತದ ಪ್ರದರ್ಶನ ನೋವುಂಟು ಮಾಡುತ್ತಿದೆ ಎಂದು ಪ್ರಸಾದ್ ಟ್ವೀಟಿಸಿದರು.

ಇತ್ತೀಚೆಗೆ ಹಾರ್ದಿಕ್ ಪಾಂಡ್ಯ ಬಳಗವನ್ನು ಟೀಕಿಸುತ್ತಿರುವ ಪ್ರಸಾದ್ ಇದೀಗ ಸರಣಿ ಸೋತಿರುವುದಕ್ಕೆ ಮತ್ತೆ ಟೀಕಿಸಿದರು.

“ಭಾರತವು ತಮ್ಮ ಕೌಶಲ್ಯವನ್ನು ಸುಧಾರಿಸಿಕೊಳ್ಳಬೇಕಾಗಿದೆ. ಆಟಗಾರರ ಗೆಲ್ಲಬೇಕೆಂಬ ಹಸಿವು ಮತ್ತು ತೀವ್ರತೆಯ ಕೊರತೆ ಇದೆ ಆಗಾಗ್ಗೆ ನಾಯಕನು ಸುಳಿವಿಲ್ಲದಂತೆ ಕಾಣುತ್ತಾನೆ. ಬೌಲರ್ ಗಳು ಬ್ಯಾಟ್ ಮಾಡಲು ಸಾಧ್ಯವಿಲ್ಲ, ಬ್ಯಾಟ್ಸ್ಮನ್ ಗಳು ಬೌಲಿಂಗ್ ಮಾಡಲು ಸಾಧ್ಯವಿಲ್ಲ ಎಂದರು.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

3 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

7 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

8 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

8 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

13 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

13 hours ago