ನವದೆಹಲಿ : ಭಾರತವು ಇದೀಗ ಸ್ವಲ್ಪ ಸಮಯದಿಂದ ಸೀಮಿತ ಓವರ್ ಗಳ ಪಂದ್ಯದಲ್ಲಿ ಸಾಮಾನ್ಯ ತಂಡವಾಗಿದೆ. ಕೆಲವು ತಿಂಗಳ ಹಿಂದೆ ಟ್ವೆಂಟಿ-20 ವಿಶ್ವಕಪ್ ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ ತಂಡದಿಂದ ಭಾರತವು ಇದೀಗ ಸೋತಿದೆ. ನಾವು ಏಕದಿನ ಸರಣಿಯಲ್ಲೂ ಬಾಂಗ್ಲಾದೇಶ ವಿರುದ್ಧ ಸೋತಿದ್ದೇವೆ. ಮೂರ್ಖ ಹೇಳಿಕೆಗಳನ್ನು ನೀಡುವ ಬದಲು ಅವರು ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ ” ಎಂದು ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ವಿಂಡೀಸ್ ವಿರುದ್ಧ ಟ್ವೆಂಟಿ-20 ಸರಣಿಯಲ್ಲಿ 0-2 ಹಿನ್ನಡೆಯಲ್ಲಿದ್ದ ಭಾರತವು 4ನೇ ಟಿ-20 ಜಯಿಸಿದ ನಂತರ ಸರಣಿಯನ್ನು 2-2ರಿಂದ ಸಮಬಲಗೊಳಿಸಿತು. 5ನೇ ಪಂದ್ಯವನ್ನು ಸೋತು ಸರಣಿಯನ್ನು 3-2 ಅಂತರದಿಂದ ಕಳೆದುಕೊಂಡಿತು. 50 ಓವರ್ ವಿಶ್ವಕಪ್ ಮಾತ್ರವಲ್ಲ ಕಳೆದ ಬಾರಿ ಟಿ-20 ವಿಶ್ವಕಪ್ ಗೂ ಅರ್ಹತೆ ಪಡೆಯಲು ವಿಂಡೀಸ್ ವಿಫಲವಾಗಿದೆ. ಈ ತಂಡದ ವಿರುದ್ಧ ಭಾರತದ ಪ್ರದರ್ಶನ ನೋವುಂಟು ಮಾಡುತ್ತಿದೆ ಎಂದು ಪ್ರಸಾದ್ ಟ್ವೀಟಿಸಿದರು.
ಇತ್ತೀಚೆಗೆ ಹಾರ್ದಿಕ್ ಪಾಂಡ್ಯ ಬಳಗವನ್ನು ಟೀಕಿಸುತ್ತಿರುವ ಪ್ರಸಾದ್ ಇದೀಗ ಸರಣಿ ಸೋತಿರುವುದಕ್ಕೆ ಮತ್ತೆ ಟೀಕಿಸಿದರು.
“ಭಾರತವು ತಮ್ಮ ಕೌಶಲ್ಯವನ್ನು ಸುಧಾರಿಸಿಕೊಳ್ಳಬೇಕಾಗಿದೆ. ಆಟಗಾರರ ಗೆಲ್ಲಬೇಕೆಂಬ ಹಸಿವು ಮತ್ತು ತೀವ್ರತೆಯ ಕೊರತೆ ಇದೆ ಆಗಾಗ್ಗೆ ನಾಯಕನು ಸುಳಿವಿಲ್ಲದಂತೆ ಕಾಣುತ್ತಾನೆ. ಬೌಲರ್ ಗಳು ಬ್ಯಾಟ್ ಮಾಡಲು ಸಾಧ್ಯವಿಲ್ಲ, ಬ್ಯಾಟ್ಸ್ಮನ್ ಗಳು ಬೌಲಿಂಗ್ ಮಾಡಲು ಸಾಧ್ಯವಿಲ್ಲ ಎಂದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…