ಕ್ರೀಡೆ

36ನೇ ವಸಂತಕ್ಕೆ ಕಾಲಿಟ್ಟ ಲಿಯೋನೆಲ್ ಮೆಸ್ಸಿ; ಕಾಲ್ಚೆಂಡಿನ ಚತುರನ ಟಾಪ್ 10 ದಾಖಲೆಗಳಿವು

ಅರ್ಜೆಂಟೀನಾದ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ ಇಂದು ತಮ್ಮ 36 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕತಾರ್ ವಿಶ್ವಕಪ್​ನಲ್ಲಿ ಫ್ರಾನ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 2 ಗೋಲು ಬಾರಿಸಿದ್ದ ಮೆಸ್ಸಿ ಅರ್ಜೆಂಟೀನಾ ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ್ದರು. ಫುಟ್ಬಾಲ್ ಜಗತ್ತಿನ ಸಾಮ್ರಾಟನಾಗಿ ಮೆರೆಯುತ್ತಿರುವ ಮೆಸ್ಸಿ ಲೆಕ್ಕವಿಲ್ಲದಷ್ಟು ದಾಖಲೆ ಬರೆದಿದ್ದಾರೆ. ಅವುಗಳಲ್ಲಿ ಟಾಪ್ 10 ದಾಖಲೆಗಳ ವಿವರ ಇಲ್ಲಿದೆ.

ಮೆಸ್ಸಿ ಪ್ರತಿಷ್ಠಿತ ಬ್ಯಾಲನ್ ಡಿ’ಓರ್ ಪ್ರಶಸ್ತಿಯನ್ನು (ವರ್ಷದ ಆಟಗಾರ) ದಾಖಲೆಯ 7 ಬಾರಿ ಗೆದ್ದಿದ್ದಾರೆ.

ಬಾರ್ಸಿಲೋನಾ ಪರವಾಗಿ 672 ಗೋಲುಗಳು ಬಾರಿಸಿರುವ ಮೆಸ್ಸಿ ಒಂದೇ ಕ್ಲಬ್‌ ಪರ ಅತಿ ಹೆಚ್ಚು ಗೋಲುಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ. 474 ಗೋಲುಗಳು- ಲಾ ಲಿಗಾದಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ದಾಖಲೆಯನ್ನು ಮೆಸ್ಸಿ ಹೊಂದಿದ್ದಾರೆ.

ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ದಾಖಲೆಯನ್ನೂ ಮೆಸ್ಸಿ ಹೊಂದಿದ್ದಾರೆ. ಲಿಯೋನೆಲ್ ಮೆಸ್ಸಿ ಇದುವರೆಗೆ ವಿಶ್ವಕಪ್ ವೇದಿಕೆಯಲ್ಲಿ ಒಟ್ಟು 26 ಪಂದ್ಯಗಳನ್ನು ಆಡಿದ್ದಾರೆ. ವಿಶ್ವಕಪ್‌ನಲ್ಲಿ 11 ಬಾರಿ ಪಂದ್ಯ ಶ್ರೇಷ್ಠರಾಗಿದ್ದಾರೆ. ಅದರಲ್ಲಿ ಅವರು ಕತಾರ್ ವಿಶ್ವಕಪ್‌ನಲ್ಲಿ ಐದು ಬಾರಿ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

ತಮ್ಮ ವೃತ್ತಿಜೀವನದಲ್ಲಿ 807 ಗೋಲು ಬಾರಿಸಿರುವ ಮೆಸ್ಸಿ ಅತಿ ಹೆಚ್ಚು ಗೋಲು ಬಾರಿಸಿದವರ ಪಟ್ಟಿಯಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಅವರ (838 ಗೋಲುಗಳು) ನಂತರದ ಸ್ಥಾನದಲ್ಲಿದ್ದಾರೆ.

ಹಾಗೆಯೇ ಲಾ ಲಿಗಾದಲ್ಲಿ ಅತಿ ಹೆಚ್ಚು (192) ಅಸಿಸ್ಟ್ ಮಾಡಿದ ದಾಖಲೆಯನ್ನು ಮೆಸ್ಸಿ ಹೊಂದಿದ್ದಾರೆ. ಮೆಸ್ಸಿ ಲಾ ಲಿಗಾ (36) ಮತ್ತು ಕೋಪಾ ಅಮೇರಿಕಾ (17) ನಲ್ಲಿ ಅತಿ ಹೆಚ್ಚು ಹ್ಯಾಟ್ರಿಕ್‌ಗಳ ದಾಖಲೆಯನ್ನು ಹೊಂದಿದ್ದಾರೆ.

ಮೆಸ್ಸಿ ಬಾರ್ಸಿಲೋನಾ ಕ್ಲಬ್ ಪರ ದಾಖಲೆಯ 34 ಟ್ರೋಫಿಗಳನ್ನು ಗೆದ್ದಿದ್ದಾರೆ. ಫಿಫಾ ಗೋಲ್ಡನ್ ಬಾಲ್ (ಟೂರ್ನಮೆಂಟ್ ಆಟಗಾರ) ಪ್ರಶಸ್ತಿಯನ್ನು ಎರಡು ಬಾರಿ ಗೆದ್ದ ಏಕೈಕ ಆಟಗಾರ ಮೆಸ್ಸಿ ಆಗಿದ್ದಾರೆ.

 

andolanait

Recent Posts

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

1 hour ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

1 hour ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

1 hour ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

2 hours ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

3 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

4 hours ago