ಕ್ರೀಡೆ

ಕೆಟ್ಟ ದಾಖಲೆ: ಭಾರತ ಅತಿ ಕಡಿಮೆ ಟೆಸ್ಟ್‌ ರನ್‌ ಕಲೆಹಾಕಿದ ಇನ್ನಿಂಗ್ಸ್‌ಗಳ ಪಟ್ಟಿ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್‌ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ.

ಮಳೆ ಕಾರಣದಿಂದಾಗಿ ಒಂದು ದಿನ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಬ್ಯಾಟಿಂಗ್‌ ಮಾಡಿ ಕೇವಲ 46 ರನ್‌ಗಳಿಗೆ ಆಲ್‌ಔಟ್‌ ಆಗುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿತು. ತವರು ನೆಲದಲ್ಲಿ ಭಾರತ ಟೆಸ್ಟ್‌ ಇನ್ನಿಂಗ್ಸ್‌ವೊಂದರಲ್ಲಿ ಕಲೆಹಾಕಿದ ಕಡಿಮೆ ಮೊತ್ತ ಎಂಬ ಕೆಟ್ಟ ದಾಖಲೆಯನ್ನು ಬರೆಯಿತು. ಟೀಮ್‌ ಇಂಡಿಯಾ ವಿರುದ್ಧ ಬೌಲಿಂಗ್‌ನಲ್ಲಿ ಆಕ್ರಮಣಕಾರಿ ಆಟವನ್ನಾಡಿದ ನ್ಯೂಜಿಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದು ಎರಡನೇ ದಿನದಾಟದಂತ್ಯಕ್ಕೆ 50 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 180 ರನ್‌ ಕಲೆಹಾಕಿದೆ.

 

1. ಡಿಸೆಂಬರ್‌ 17, 2020
ಭಾರತ vs ಆಸ್ಟ್ರೇಲಿಯಾ
ರನ್‌: 36
ಸ್ಥಳ: ಅಡಿಲೇಡ್‌

2. ಜೂನ್‌ 20, 1974
ಭಾರತ vs ಇಂಗ್ಲೆಂಡ್‌
ರನ್: 42
ಸ್ಥಳ: ಲಾರ್ಡ್ಸ್‌

3. ಅಕ್ಟೋಬರ್‌ 17, 2024
ಭಾರತ vs ನ್ಯೂಜಿಲೆಂಡ್‌
ರನ್:‌ 46
ಸ್ಥಳ: ಚಿನ್ನಸ್ವಾಮಿ, ಬೆಂಗಳೂರು

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

2 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

2 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

2 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

2 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

2 hours ago