ಕ್ರೀಡೆ

2023ರ ವಿಶ್ವಕಪ್‌ನಲ್ಲೂ ಚೋಕರ್ಸ್‌ ಹಣೆಪಟ್ಟಿ ಕಳಚಿಕೊಳ್ಳುವಲ್ಲಿ ಸೋತ ತಂಡಗಳು

ನಾಳೆ ( ನವೆಂಬರ್‌ 19 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಈ ಬಾರಿಯ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ನಡೆಯಲಿದ್ದು, ಈ ಬಾರಿ ಯಾವ ತಂಡ ಚಾಂಪಿಯನ್‌ ಆಗಲಿದೆ ಎಂಬ ಕಾತುರತೆ ಹೆಚ್ಚಾಗಿದೆ.

ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಒಟ್ಟು 10 ತಂಡಗಳ ಪೈಕಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದವು. ಈ ಪೈಕಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿದ ಭಾರತ ಫೈನಲ್‌ ತಲುಪಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಕಾಂಗರೂಗಳೂ ಸಹ ಫೈನಲ್‌ ತಲುಪಿದೆ.

ಹೀಗೆ ಸೆಮಿಫೈನಲ್‌ ಹಂತದವರೆಗೂ ಬಂದು ಟೂರ್ನಿಯಿಂದ ಹೊರಬಿದ್ದಿರುವ ಈ ಎರಡೂ ತಂಡಗಳೂ ಸಹ ಈ ಬಾರಿಯೂ ಚೋಕರ್ಸ್‌ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳುವಲ್ಲಿ ವಿಫಲವಾಗಿವೆ. ಹಾಗಿದ್ದರೆ ಇಲ್ಲಿಯವರೆಗೂ ಒಮ್ಮೆಯೂ ವಿಶ್ವಕಪ್‌ ಟ್ರೋಫಿಯನ್ನು ಗೆಲ್ಲದೇ ಕಣಕ್ಕಿಳಿದು ಈ ಬಾರಿಯೂ ಸಹ ಚೋಕರ್ಸ್‌ ಆಗಿಯೇ ಮನೆಗೆ ತೆರಳಿದ ತಂಡಗಳು ಯಾವುವು ಎಂಬ ಮಾಹಿತಿ ಈ ಕೆಳಕಂಡಂತಿದೆ..

ನ್ಯೂಜಿಲೆಂಡ್:‌ 1975ರಿಂದಲೂ ವಿಶ್ವಕಪ್‌ ಆಡುತ್ತಾ ಬಂದಿರುವ ನ್ಯೂಜಿಲೆಂಡ್‌ ಇಲ್ಲಿಯವರೆಗೂ ಒಮ್ಮೆಯೂ ಸಹ ಟ್ರೋಫಿ ಎತ್ತಿಹಿಡಿಯಲು ಆಗಿಲ್ಲ. 2015ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ ಪಂದ್ಯದಲ್ಲಿ ಸೋತು ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದ ನ್ಯೂಜಿಲೆಂಡ್‌ 2019ರಲ್ಲಿ ಇಂಗ್ಲೆಂಡ್‌ ವಿರುದ್ಧ ಸೋತಿತ್ತು. ಹೀಗೆ ಕಳೆದ ಎರಡು ಬಾರಿ ಸತತವಾಗಿ ರನ್ನರ್‌ ಅಪ್‌ ಆಗಿದ್ದ ನ್ಯೂಜಿಲೆಂಡ್‌ ಈ ಬಾರಿ ಸೆಮಿಫೈನಲ್‌ನಲ್ಲಿ ಹೊರಬಿದ್ದು ಚೋಕರ್‌ ಆಗಿಯೇ ಉಳಿದುಕೊಂಡಿದೆ.

ದಕ್ಷಿಣ ಆಫ್ರಿಕಾ: ವಿಶ್ವಕಪ್‌ನಲ್ಲಿ ಚೋಕರ್ಸ್‌ ಎಂಬ ಹಣೆಪಟ್ಟಿಯನ್ನು ಅಧಿಕೃತವಾಗಿ ಹೊತ್ತುಕೊಂಡಿರುವ ತಂಡವೆಂದರೆ ಅದು ದಕ್ಷಿಣ ಆಫ್ರಿಕಾ. ಎಷ್ಟೇ ಬಲಿಷ್ಟ ತಂಡದೊಂದಿಗೆ ಟೂರ್ನಿಗಳಲ್ಲಿ ಭಾಗವಹಿಸಿದ್ದರೂ ಸಹ ಈ ತಂಡಕ್ಕೆ ಟ್ರೋಫಿ ಎತ್ತಿ ಹಿಡಿಯುವುದಿರಲಿ ಒಮ್ಮೆಯೂ ಸಹ ಫೈನಲ್‌ ಅನ್ನೂ ಸಹ ಪ್ರವೇಶಿಸಲಾಗಿಲ್ಲ. ವಿಶ್ವಕಪ್‌ನಲ್ಲಿ ಈ ತಂಡದ ಅತಿದೊಡ್ಡ ಸಾಧನೆ ಎಂದರೆ ಸೆಮಿಫೈನಲ್‌ ಪ್ರವೇಶಿಸಿರುವುದು ಮಾತ್ರ. 1992, 1999, 2007, 2015 ಹಾಗೂ 2023 ಹೀಗೆ ಐದು ಬಾರಿ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಪ್ರವೇಶಿಸಿ ಫೈನಲ್‌ ಪ್ರವೇಶಿಸಲಾಗದೇ ಹೊರಬಿದ್ದಿದೆ.

ಬಾಂಗ್ಲಾದೇಶ: ಚೋಕರ್ಸ್‌ ಲಿಸ್ಟ್‌ನಲ್ಲಿರುವ ದೇಶಗಳಲ್ಲಿ ಬಾಂಗ್ಲಾದೇಶವೂ ಸಹ ಒಂದು. ನ್ಯೂಜಿಲೆಂಡ್‌ ಫೈನಲ್‌ ಹಾಗೂ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ವರೆಗೂ ಬಂದು ಎಡವಿದ್ದರೆ, ಬಾಂಗ್ಲಾದೇಶ ಒಮ್ಮೆಯೂ ಸೆಮಿಫೈನಲ್‌ಗೂ ಸಹ ಅರ್ಹತೆ ಪಡೆದುಕೊಳ್ಳಲಾಗದೇ ಹಿನ್ನಡೆ ಅನುಭವಿಸಿದೆ. ಈ ಕೆಟ್ಟ ಇತಿಹಾಸ ಈ ವರ್ಷವೂ ಸಹ ಮುಂದುವರಿದಿದೆ.

andolana

Recent Posts

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…

12 mins ago

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

44 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

2 hours ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

3 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

3 hours ago