ಕ್ರೀಡೆ

2023ರ ವಿಶ್ವಕಪ್‌ನಲ್ಲೂ ಚೋಕರ್ಸ್‌ ಹಣೆಪಟ್ಟಿ ಕಳಚಿಕೊಳ್ಳುವಲ್ಲಿ ಸೋತ ತಂಡಗಳು

ನಾಳೆ ( ನವೆಂಬರ್‌ 19 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಈ ಬಾರಿಯ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ನಡೆಯಲಿದ್ದು, ಈ ಬಾರಿ ಯಾವ ತಂಡ ಚಾಂಪಿಯನ್‌ ಆಗಲಿದೆ ಎಂಬ ಕಾತುರತೆ ಹೆಚ್ಚಾಗಿದೆ.

ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಒಟ್ಟು 10 ತಂಡಗಳ ಪೈಕಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದವು. ಈ ಪೈಕಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿದ ಭಾರತ ಫೈನಲ್‌ ತಲುಪಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಕಾಂಗರೂಗಳೂ ಸಹ ಫೈನಲ್‌ ತಲುಪಿದೆ.

ಹೀಗೆ ಸೆಮಿಫೈನಲ್‌ ಹಂತದವರೆಗೂ ಬಂದು ಟೂರ್ನಿಯಿಂದ ಹೊರಬಿದ್ದಿರುವ ಈ ಎರಡೂ ತಂಡಗಳೂ ಸಹ ಈ ಬಾರಿಯೂ ಚೋಕರ್ಸ್‌ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳುವಲ್ಲಿ ವಿಫಲವಾಗಿವೆ. ಹಾಗಿದ್ದರೆ ಇಲ್ಲಿಯವರೆಗೂ ಒಮ್ಮೆಯೂ ವಿಶ್ವಕಪ್‌ ಟ್ರೋಫಿಯನ್ನು ಗೆಲ್ಲದೇ ಕಣಕ್ಕಿಳಿದು ಈ ಬಾರಿಯೂ ಸಹ ಚೋಕರ್ಸ್‌ ಆಗಿಯೇ ಮನೆಗೆ ತೆರಳಿದ ತಂಡಗಳು ಯಾವುವು ಎಂಬ ಮಾಹಿತಿ ಈ ಕೆಳಕಂಡಂತಿದೆ..

ನ್ಯೂಜಿಲೆಂಡ್:‌ 1975ರಿಂದಲೂ ವಿಶ್ವಕಪ್‌ ಆಡುತ್ತಾ ಬಂದಿರುವ ನ್ಯೂಜಿಲೆಂಡ್‌ ಇಲ್ಲಿಯವರೆಗೂ ಒಮ್ಮೆಯೂ ಸಹ ಟ್ರೋಫಿ ಎತ್ತಿಹಿಡಿಯಲು ಆಗಿಲ್ಲ. 2015ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ ಪಂದ್ಯದಲ್ಲಿ ಸೋತು ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದ ನ್ಯೂಜಿಲೆಂಡ್‌ 2019ರಲ್ಲಿ ಇಂಗ್ಲೆಂಡ್‌ ವಿರುದ್ಧ ಸೋತಿತ್ತು. ಹೀಗೆ ಕಳೆದ ಎರಡು ಬಾರಿ ಸತತವಾಗಿ ರನ್ನರ್‌ ಅಪ್‌ ಆಗಿದ್ದ ನ್ಯೂಜಿಲೆಂಡ್‌ ಈ ಬಾರಿ ಸೆಮಿಫೈನಲ್‌ನಲ್ಲಿ ಹೊರಬಿದ್ದು ಚೋಕರ್‌ ಆಗಿಯೇ ಉಳಿದುಕೊಂಡಿದೆ.

ದಕ್ಷಿಣ ಆಫ್ರಿಕಾ: ವಿಶ್ವಕಪ್‌ನಲ್ಲಿ ಚೋಕರ್ಸ್‌ ಎಂಬ ಹಣೆಪಟ್ಟಿಯನ್ನು ಅಧಿಕೃತವಾಗಿ ಹೊತ್ತುಕೊಂಡಿರುವ ತಂಡವೆಂದರೆ ಅದು ದಕ್ಷಿಣ ಆಫ್ರಿಕಾ. ಎಷ್ಟೇ ಬಲಿಷ್ಟ ತಂಡದೊಂದಿಗೆ ಟೂರ್ನಿಗಳಲ್ಲಿ ಭಾಗವಹಿಸಿದ್ದರೂ ಸಹ ಈ ತಂಡಕ್ಕೆ ಟ್ರೋಫಿ ಎತ್ತಿ ಹಿಡಿಯುವುದಿರಲಿ ಒಮ್ಮೆಯೂ ಸಹ ಫೈನಲ್‌ ಅನ್ನೂ ಸಹ ಪ್ರವೇಶಿಸಲಾಗಿಲ್ಲ. ವಿಶ್ವಕಪ್‌ನಲ್ಲಿ ಈ ತಂಡದ ಅತಿದೊಡ್ಡ ಸಾಧನೆ ಎಂದರೆ ಸೆಮಿಫೈನಲ್‌ ಪ್ರವೇಶಿಸಿರುವುದು ಮಾತ್ರ. 1992, 1999, 2007, 2015 ಹಾಗೂ 2023 ಹೀಗೆ ಐದು ಬಾರಿ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಪ್ರವೇಶಿಸಿ ಫೈನಲ್‌ ಪ್ರವೇಶಿಸಲಾಗದೇ ಹೊರಬಿದ್ದಿದೆ.

ಬಾಂಗ್ಲಾದೇಶ: ಚೋಕರ್ಸ್‌ ಲಿಸ್ಟ್‌ನಲ್ಲಿರುವ ದೇಶಗಳಲ್ಲಿ ಬಾಂಗ್ಲಾದೇಶವೂ ಸಹ ಒಂದು. ನ್ಯೂಜಿಲೆಂಡ್‌ ಫೈನಲ್‌ ಹಾಗೂ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ವರೆಗೂ ಬಂದು ಎಡವಿದ್ದರೆ, ಬಾಂಗ್ಲಾದೇಶ ಒಮ್ಮೆಯೂ ಸೆಮಿಫೈನಲ್‌ಗೂ ಸಹ ಅರ್ಹತೆ ಪಡೆದುಕೊಳ್ಳಲಾಗದೇ ಹಿನ್ನಡೆ ಅನುಭವಿಸಿದೆ. ಈ ಕೆಟ್ಟ ಇತಿಹಾಸ ಈ ವರ್ಷವೂ ಸಹ ಮುಂದುವರಿದಿದೆ.

andolana

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago