ಕ್ರೀಡೆ

2023ರ ವಿಶ್ವಕಪ್‌ನಲ್ಲೂ ಚೋಕರ್ಸ್‌ ಹಣೆಪಟ್ಟಿ ಕಳಚಿಕೊಳ್ಳುವಲ್ಲಿ ಸೋತ ತಂಡಗಳು

ನಾಳೆ ( ನವೆಂಬರ್‌ 19 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಈ ಬಾರಿಯ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ನಡೆಯಲಿದ್ದು, ಈ ಬಾರಿ ಯಾವ ತಂಡ ಚಾಂಪಿಯನ್‌ ಆಗಲಿದೆ ಎಂಬ ಕಾತುರತೆ ಹೆಚ್ಚಾಗಿದೆ.

ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಒಟ್ಟು 10 ತಂಡಗಳ ಪೈಕಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದವು. ಈ ಪೈಕಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿದ ಭಾರತ ಫೈನಲ್‌ ತಲುಪಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಕಾಂಗರೂಗಳೂ ಸಹ ಫೈನಲ್‌ ತಲುಪಿದೆ.

ಹೀಗೆ ಸೆಮಿಫೈನಲ್‌ ಹಂತದವರೆಗೂ ಬಂದು ಟೂರ್ನಿಯಿಂದ ಹೊರಬಿದ್ದಿರುವ ಈ ಎರಡೂ ತಂಡಗಳೂ ಸಹ ಈ ಬಾರಿಯೂ ಚೋಕರ್ಸ್‌ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳುವಲ್ಲಿ ವಿಫಲವಾಗಿವೆ. ಹಾಗಿದ್ದರೆ ಇಲ್ಲಿಯವರೆಗೂ ಒಮ್ಮೆಯೂ ವಿಶ್ವಕಪ್‌ ಟ್ರೋಫಿಯನ್ನು ಗೆಲ್ಲದೇ ಕಣಕ್ಕಿಳಿದು ಈ ಬಾರಿಯೂ ಸಹ ಚೋಕರ್ಸ್‌ ಆಗಿಯೇ ಮನೆಗೆ ತೆರಳಿದ ತಂಡಗಳು ಯಾವುವು ಎಂಬ ಮಾಹಿತಿ ಈ ಕೆಳಕಂಡಂತಿದೆ..

ನ್ಯೂಜಿಲೆಂಡ್:‌ 1975ರಿಂದಲೂ ವಿಶ್ವಕಪ್‌ ಆಡುತ್ತಾ ಬಂದಿರುವ ನ್ಯೂಜಿಲೆಂಡ್‌ ಇಲ್ಲಿಯವರೆಗೂ ಒಮ್ಮೆಯೂ ಸಹ ಟ್ರೋಫಿ ಎತ್ತಿಹಿಡಿಯಲು ಆಗಿಲ್ಲ. 2015ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ ಪಂದ್ಯದಲ್ಲಿ ಸೋತು ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದ ನ್ಯೂಜಿಲೆಂಡ್‌ 2019ರಲ್ಲಿ ಇಂಗ್ಲೆಂಡ್‌ ವಿರುದ್ಧ ಸೋತಿತ್ತು. ಹೀಗೆ ಕಳೆದ ಎರಡು ಬಾರಿ ಸತತವಾಗಿ ರನ್ನರ್‌ ಅಪ್‌ ಆಗಿದ್ದ ನ್ಯೂಜಿಲೆಂಡ್‌ ಈ ಬಾರಿ ಸೆಮಿಫೈನಲ್‌ನಲ್ಲಿ ಹೊರಬಿದ್ದು ಚೋಕರ್‌ ಆಗಿಯೇ ಉಳಿದುಕೊಂಡಿದೆ.

ದಕ್ಷಿಣ ಆಫ್ರಿಕಾ: ವಿಶ್ವಕಪ್‌ನಲ್ಲಿ ಚೋಕರ್ಸ್‌ ಎಂಬ ಹಣೆಪಟ್ಟಿಯನ್ನು ಅಧಿಕೃತವಾಗಿ ಹೊತ್ತುಕೊಂಡಿರುವ ತಂಡವೆಂದರೆ ಅದು ದಕ್ಷಿಣ ಆಫ್ರಿಕಾ. ಎಷ್ಟೇ ಬಲಿಷ್ಟ ತಂಡದೊಂದಿಗೆ ಟೂರ್ನಿಗಳಲ್ಲಿ ಭಾಗವಹಿಸಿದ್ದರೂ ಸಹ ಈ ತಂಡಕ್ಕೆ ಟ್ರೋಫಿ ಎತ್ತಿ ಹಿಡಿಯುವುದಿರಲಿ ಒಮ್ಮೆಯೂ ಸಹ ಫೈನಲ್‌ ಅನ್ನೂ ಸಹ ಪ್ರವೇಶಿಸಲಾಗಿಲ್ಲ. ವಿಶ್ವಕಪ್‌ನಲ್ಲಿ ಈ ತಂಡದ ಅತಿದೊಡ್ಡ ಸಾಧನೆ ಎಂದರೆ ಸೆಮಿಫೈನಲ್‌ ಪ್ರವೇಶಿಸಿರುವುದು ಮಾತ್ರ. 1992, 1999, 2007, 2015 ಹಾಗೂ 2023 ಹೀಗೆ ಐದು ಬಾರಿ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಪ್ರವೇಶಿಸಿ ಫೈನಲ್‌ ಪ್ರವೇಶಿಸಲಾಗದೇ ಹೊರಬಿದ್ದಿದೆ.

ಬಾಂಗ್ಲಾದೇಶ: ಚೋಕರ್ಸ್‌ ಲಿಸ್ಟ್‌ನಲ್ಲಿರುವ ದೇಶಗಳಲ್ಲಿ ಬಾಂಗ್ಲಾದೇಶವೂ ಸಹ ಒಂದು. ನ್ಯೂಜಿಲೆಂಡ್‌ ಫೈನಲ್‌ ಹಾಗೂ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ವರೆಗೂ ಬಂದು ಎಡವಿದ್ದರೆ, ಬಾಂಗ್ಲಾದೇಶ ಒಮ್ಮೆಯೂ ಸೆಮಿಫೈನಲ್‌ಗೂ ಸಹ ಅರ್ಹತೆ ಪಡೆದುಕೊಳ್ಳಲಾಗದೇ ಹಿನ್ನಡೆ ಅನುಭವಿಸಿದೆ. ಈ ಕೆಟ್ಟ ಇತಿಹಾಸ ಈ ವರ್ಷವೂ ಸಹ ಮುಂದುವರಿದಿದೆ.

andolana

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

53 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

11 hours ago