ಕ್ರೀಡೆ

2023ರ ವಿಶ್ವಕಪ್‌ನಲ್ಲೂ ಚೋಕರ್ಸ್‌ ಹಣೆಪಟ್ಟಿ ಕಳಚಿಕೊಳ್ಳುವಲ್ಲಿ ಸೋತ ತಂಡಗಳು

ನಾಳೆ ( ನವೆಂಬರ್‌ 19 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಈ ಬಾರಿಯ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯ ನಡೆಯಲಿದ್ದು, ಈ ಬಾರಿ ಯಾವ ತಂಡ ಚಾಂಪಿಯನ್‌ ಆಗಲಿದೆ ಎಂಬ ಕಾತುರತೆ ಹೆಚ್ಚಾಗಿದೆ.

ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿದ್ದ ಒಟ್ಟು 10 ತಂಡಗಳ ಪೈಕಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದವು. ಈ ಪೈಕಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿದ ಭಾರತ ಫೈನಲ್‌ ತಲುಪಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಕಾಂಗರೂಗಳೂ ಸಹ ಫೈನಲ್‌ ತಲುಪಿದೆ.

ಹೀಗೆ ಸೆಮಿಫೈನಲ್‌ ಹಂತದವರೆಗೂ ಬಂದು ಟೂರ್ನಿಯಿಂದ ಹೊರಬಿದ್ದಿರುವ ಈ ಎರಡೂ ತಂಡಗಳೂ ಸಹ ಈ ಬಾರಿಯೂ ಚೋಕರ್ಸ್‌ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳುವಲ್ಲಿ ವಿಫಲವಾಗಿವೆ. ಹಾಗಿದ್ದರೆ ಇಲ್ಲಿಯವರೆಗೂ ಒಮ್ಮೆಯೂ ವಿಶ್ವಕಪ್‌ ಟ್ರೋಫಿಯನ್ನು ಗೆಲ್ಲದೇ ಕಣಕ್ಕಿಳಿದು ಈ ಬಾರಿಯೂ ಸಹ ಚೋಕರ್ಸ್‌ ಆಗಿಯೇ ಮನೆಗೆ ತೆರಳಿದ ತಂಡಗಳು ಯಾವುವು ಎಂಬ ಮಾಹಿತಿ ಈ ಕೆಳಕಂಡಂತಿದೆ..

ನ್ಯೂಜಿಲೆಂಡ್:‌ 1975ರಿಂದಲೂ ವಿಶ್ವಕಪ್‌ ಆಡುತ್ತಾ ಬಂದಿರುವ ನ್ಯೂಜಿಲೆಂಡ್‌ ಇಲ್ಲಿಯವರೆಗೂ ಒಮ್ಮೆಯೂ ಸಹ ಟ್ರೋಫಿ ಎತ್ತಿಹಿಡಿಯಲು ಆಗಿಲ್ಲ. 2015ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ ಪಂದ್ಯದಲ್ಲಿ ಸೋತು ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದ ನ್ಯೂಜಿಲೆಂಡ್‌ 2019ರಲ್ಲಿ ಇಂಗ್ಲೆಂಡ್‌ ವಿರುದ್ಧ ಸೋತಿತ್ತು. ಹೀಗೆ ಕಳೆದ ಎರಡು ಬಾರಿ ಸತತವಾಗಿ ರನ್ನರ್‌ ಅಪ್‌ ಆಗಿದ್ದ ನ್ಯೂಜಿಲೆಂಡ್‌ ಈ ಬಾರಿ ಸೆಮಿಫೈನಲ್‌ನಲ್ಲಿ ಹೊರಬಿದ್ದು ಚೋಕರ್‌ ಆಗಿಯೇ ಉಳಿದುಕೊಂಡಿದೆ.

ದಕ್ಷಿಣ ಆಫ್ರಿಕಾ: ವಿಶ್ವಕಪ್‌ನಲ್ಲಿ ಚೋಕರ್ಸ್‌ ಎಂಬ ಹಣೆಪಟ್ಟಿಯನ್ನು ಅಧಿಕೃತವಾಗಿ ಹೊತ್ತುಕೊಂಡಿರುವ ತಂಡವೆಂದರೆ ಅದು ದಕ್ಷಿಣ ಆಫ್ರಿಕಾ. ಎಷ್ಟೇ ಬಲಿಷ್ಟ ತಂಡದೊಂದಿಗೆ ಟೂರ್ನಿಗಳಲ್ಲಿ ಭಾಗವಹಿಸಿದ್ದರೂ ಸಹ ಈ ತಂಡಕ್ಕೆ ಟ್ರೋಫಿ ಎತ್ತಿ ಹಿಡಿಯುವುದಿರಲಿ ಒಮ್ಮೆಯೂ ಸಹ ಫೈನಲ್‌ ಅನ್ನೂ ಸಹ ಪ್ರವೇಶಿಸಲಾಗಿಲ್ಲ. ವಿಶ್ವಕಪ್‌ನಲ್ಲಿ ಈ ತಂಡದ ಅತಿದೊಡ್ಡ ಸಾಧನೆ ಎಂದರೆ ಸೆಮಿಫೈನಲ್‌ ಪ್ರವೇಶಿಸಿರುವುದು ಮಾತ್ರ. 1992, 1999, 2007, 2015 ಹಾಗೂ 2023 ಹೀಗೆ ಐದು ಬಾರಿ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಪ್ರವೇಶಿಸಿ ಫೈನಲ್‌ ಪ್ರವೇಶಿಸಲಾಗದೇ ಹೊರಬಿದ್ದಿದೆ.

ಬಾಂಗ್ಲಾದೇಶ: ಚೋಕರ್ಸ್‌ ಲಿಸ್ಟ್‌ನಲ್ಲಿರುವ ದೇಶಗಳಲ್ಲಿ ಬಾಂಗ್ಲಾದೇಶವೂ ಸಹ ಒಂದು. ನ್ಯೂಜಿಲೆಂಡ್‌ ಫೈನಲ್‌ ಹಾಗೂ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ವರೆಗೂ ಬಂದು ಎಡವಿದ್ದರೆ, ಬಾಂಗ್ಲಾದೇಶ ಒಮ್ಮೆಯೂ ಸೆಮಿಫೈನಲ್‌ಗೂ ಸಹ ಅರ್ಹತೆ ಪಡೆದುಕೊಳ್ಳಲಾಗದೇ ಹಿನ್ನಡೆ ಅನುಭವಿಸಿದೆ. ಈ ಕೆಟ್ಟ ಇತಿಹಾಸ ಈ ವರ್ಷವೂ ಸಹ ಮುಂದುವರಿದಿದೆ.

andolana

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

7 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago