ಕ್ರೀಡೆ

KSCA ಟೂರ್ನಿಯ ಸೆನ್ಸೆಷನಲ್‌ ಆಟಗಾರನಾದ ಪುಟ್ಟ ಪೋರ

ಬೆಂಗಳೂರು : ಕರ್ನಾಟಕ ರಾಜ್ಯದ ಕ್ರಿಕೆಟ್‌ ಲೋಕದಲ್ಲಿ ಪುಟ್ಟ ಪ್ರತಿಭೆಯೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.

ನಿತೀಶ್‌ ಆರ್ಯ ಎಂಬ ಪುಟ್ಟ ಬಾಲಕ ತನ್ನ ಅದ್ಭುತ ಬ್ಯಾಟಿಂಗ್‌ ನಿಂದ ಮೋಡಿ ಮಾಡಿದ್ದಾನೆ. ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ನಡೆಸಿರುವ 2023-24 ನೇ ಆವೃತ್ತಿಯ ವಿವಿಧ ಪಂದ್ಯಗಳಲ್ಲಿ 1400 ರನ್‌ ಗಳಿಸುವ ಮೂಲಕ ಕ್ರಿಕೆಟ್‌ ಪ್ರಿಯರ ಮನ ಗೆದ್ದಿದ್ದಾರೆ.

ಬೆಂಗಳೂರು ಮೂಲದ ನಿತೀಶ್‌ ಗೆ ಈಗ 13ರ ಹರೆಯ. ಸಧ್ಯ ಈತ ಕರ್ನಾಟಕ ಕ್ರಿಕೆಟ್‌ ವಲಯದ ಸೆನ್ಸೆಷನಲ್‌ ಆಟಗಾರನಾಗಿದ್ದಾರೆ.

ನಿತೀಶ್‌ ಆರ್ಯ ಪ್ರಸ್ತುತ ರಾಜಾಜಿ ನಗರ ಕ್ರಿಕೆಟರ್ಸ್‌ ಹಾಗೂ ತಾನೂ ಓದುತ್ತಿರುವ ಬಸವೇಶ್ವರ ನಗರದ ಮ್ಯಾಕ್ಸ್‌ ಮುಲ್ಲರ್‌ ಹೈಸ್ಕೂಲ್‌ ಪರವಾಗಿ ಆಟ ಆಡುತ್ತಿದ್ದಾರೆ.

ಪ್ರಸ್ತುತ ಏಳನೇ ತರಗತಿಯಲ್ಲಿ ಓಡುತ್ತಿರುವ ನಿತೀನ್‌ ಆರ್ಯ 3 ವರ್ಷದ ಪುಟ್ಟ ಮಗುವಾಗಿದ್ದಾಗಲೇ ಕ್ರಿಕೆಟ್‌ ಆಡಲು ಆರಂಭಿಸಿದ್ದರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಯೋಜಿಸಿರುವ 16 ವರ್ಷದೊಳಗಿನ KSCA ಕಪ್‌ ನಲ್ಲಿ ತನ್ನ ಅತ್ಯದ್ಭುತ ಬ್ಯಾಟಿಂಗ್‌ ಮೂಲಕ ಮೂರು ಶತಕ ಹಾಗೂ ಮೂರು ಅರ್ಧ ಶತಕಗಳೊಂದಿಗೆ 565 ರನ್‌ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ಅದಷ್ಟೇ ಅಲ್ಲದೆ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ನಡೆಸುತ್ತಿರುವ 14 ವರ್ಷದೊಳಗಿನ ಪಂದ್ಯಾವಳಿಯಲ್ಲಿಯೂ ಸಹ ನಿತೀನ್‌ ಸತತವಾಗಿ ಉತ್ತಮ ಬ್ಯಾಟಿಂಗ್‌ ಮಾಡುವ ಮೂಲಕ ಕ್ರಿಕೆಟ್‌ ಪ್ರೇಮಿಗಳ ಮನ ಗೆದ್ದಿದ್ದಾರೆ.

ವಿರಾಟ್‌ ಕೊಹ್ಲಿ ಅವರ ಬಹ ದೊಡ್ಡ ಅಭಿಮಾನಿಯಾಗಿರು ಈ ಪುಟ್ಟ ಪೋರ ಟೀಂ ಇಂಡಿಯಾದ ಆಟಗಾರನಾಗಿ ಮೂರು ಫಾರ್ಮ್ಯಾಟ್‌ ನಲ್ಲಿ ಮಿಂಚಬೇಕೆಂಬ ಇಂಗಿತವನ್ನು ಹೊಂದಿದ್ದಾರೆ. ನಿತೀಶ್‌ ಕೇವಲ ಕ್ರಿಕೆಟ್‌ ನಲ್ಲಿ ಮಾತ್ರವಲ್ಲದೇಓದಿನಲ್ಲಿಯೂ ಕೂಡ ಉತ್ತಮ ಅಂಕ ಗಳಿಸಿದ್ದಾರೆ.

lokesh

Recent Posts

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

24 mins ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

37 mins ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

1 hour ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

2 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

2 hours ago

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

3 hours ago