ಬೆಂಗಳೂರು : ಕರ್ನಾಟಕ ರಾಜ್ಯದ ಕ್ರಿಕೆಟ್ ಲೋಕದಲ್ಲಿ ಪುಟ್ಟ ಪ್ರತಿಭೆಯೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.
ನಿತೀಶ್ ಆರ್ಯ ಎಂಬ ಪುಟ್ಟ ಬಾಲಕ ತನ್ನ ಅದ್ಭುತ ಬ್ಯಾಟಿಂಗ್ ನಿಂದ ಮೋಡಿ ಮಾಡಿದ್ದಾನೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸಿರುವ 2023-24 ನೇ ಆವೃತ್ತಿಯ ವಿವಿಧ ಪಂದ್ಯಗಳಲ್ಲಿ 1400 ರನ್ ಗಳಿಸುವ ಮೂಲಕ ಕ್ರಿಕೆಟ್ ಪ್ರಿಯರ ಮನ ಗೆದ್ದಿದ್ದಾರೆ.
ಬೆಂಗಳೂರು ಮೂಲದ ನಿತೀಶ್ ಗೆ ಈಗ 13ರ ಹರೆಯ. ಸಧ್ಯ ಈತ ಕರ್ನಾಟಕ ಕ್ರಿಕೆಟ್ ವಲಯದ ಸೆನ್ಸೆಷನಲ್ ಆಟಗಾರನಾಗಿದ್ದಾರೆ.
ನಿತೀಶ್ ಆರ್ಯ ಪ್ರಸ್ತುತ ರಾಜಾಜಿ ನಗರ ಕ್ರಿಕೆಟರ್ಸ್ ಹಾಗೂ ತಾನೂ ಓದುತ್ತಿರುವ ಬಸವೇಶ್ವರ ನಗರದ ಮ್ಯಾಕ್ಸ್ ಮುಲ್ಲರ್ ಹೈಸ್ಕೂಲ್ ಪರವಾಗಿ ಆಟ ಆಡುತ್ತಿದ್ದಾರೆ.
ಪ್ರಸ್ತುತ ಏಳನೇ ತರಗತಿಯಲ್ಲಿ ಓಡುತ್ತಿರುವ ನಿತೀನ್ ಆರ್ಯ 3 ವರ್ಷದ ಪುಟ್ಟ ಮಗುವಾಗಿದ್ದಾಗಲೇ ಕ್ರಿಕೆಟ್ ಆಡಲು ಆರಂಭಿಸಿದ್ದರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ 16 ವರ್ಷದೊಳಗಿನ KSCA ಕಪ್ ನಲ್ಲಿ ತನ್ನ ಅತ್ಯದ್ಭುತ ಬ್ಯಾಟಿಂಗ್ ಮೂಲಕ ಮೂರು ಶತಕ ಹಾಗೂ ಮೂರು ಅರ್ಧ ಶತಕಗಳೊಂದಿಗೆ 565 ರನ್ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.
ಅದಷ್ಟೇ ಅಲ್ಲದೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸುತ್ತಿರುವ 14 ವರ್ಷದೊಳಗಿನ ಪಂದ್ಯಾವಳಿಯಲ್ಲಿಯೂ ಸಹ ನಿತೀನ್ ಸತತವಾಗಿ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳ ಮನ ಗೆದ್ದಿದ್ದಾರೆ.
ವಿರಾಟ್ ಕೊಹ್ಲಿ ಅವರ ಬಹ ದೊಡ್ಡ ಅಭಿಮಾನಿಯಾಗಿರು ಈ ಪುಟ್ಟ ಪೋರ ಟೀಂ ಇಂಡಿಯಾದ ಆಟಗಾರನಾಗಿ ಮೂರು ಫಾರ್ಮ್ಯಾಟ್ ನಲ್ಲಿ ಮಿಂಚಬೇಕೆಂಬ ಇಂಗಿತವನ್ನು ಹೊಂದಿದ್ದಾರೆ. ನಿತೀಶ್ ಕೇವಲ ಕ್ರಿಕೆಟ್ ನಲ್ಲಿ ಮಾತ್ರವಲ್ಲದೇಓದಿನಲ್ಲಿಯೂ ಕೂಡ ಉತ್ತಮ ಅಂಕ ಗಳಿಸಿದ್ದಾರೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…