ಬೆಂಗಳೂರು : ಕರ್ನಾಟಕ ರಾಜ್ಯದ ಕ್ರಿಕೆಟ್ ಲೋಕದಲ್ಲಿ ಪುಟ್ಟ ಪ್ರತಿಭೆಯೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.
ನಿತೀಶ್ ಆರ್ಯ ಎಂಬ ಪುಟ್ಟ ಬಾಲಕ ತನ್ನ ಅದ್ಭುತ ಬ್ಯಾಟಿಂಗ್ ನಿಂದ ಮೋಡಿ ಮಾಡಿದ್ದಾನೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸಿರುವ 2023-24 ನೇ ಆವೃತ್ತಿಯ ವಿವಿಧ ಪಂದ್ಯಗಳಲ್ಲಿ 1400 ರನ್ ಗಳಿಸುವ ಮೂಲಕ ಕ್ರಿಕೆಟ್ ಪ್ರಿಯರ ಮನ ಗೆದ್ದಿದ್ದಾರೆ.
ಬೆಂಗಳೂರು ಮೂಲದ ನಿತೀಶ್ ಗೆ ಈಗ 13ರ ಹರೆಯ. ಸಧ್ಯ ಈತ ಕರ್ನಾಟಕ ಕ್ರಿಕೆಟ್ ವಲಯದ ಸೆನ್ಸೆಷನಲ್ ಆಟಗಾರನಾಗಿದ್ದಾರೆ.
ನಿತೀಶ್ ಆರ್ಯ ಪ್ರಸ್ತುತ ರಾಜಾಜಿ ನಗರ ಕ್ರಿಕೆಟರ್ಸ್ ಹಾಗೂ ತಾನೂ ಓದುತ್ತಿರುವ ಬಸವೇಶ್ವರ ನಗರದ ಮ್ಯಾಕ್ಸ್ ಮುಲ್ಲರ್ ಹೈಸ್ಕೂಲ್ ಪರವಾಗಿ ಆಟ ಆಡುತ್ತಿದ್ದಾರೆ.
ಪ್ರಸ್ತುತ ಏಳನೇ ತರಗತಿಯಲ್ಲಿ ಓಡುತ್ತಿರುವ ನಿತೀನ್ ಆರ್ಯ 3 ವರ್ಷದ ಪುಟ್ಟ ಮಗುವಾಗಿದ್ದಾಗಲೇ ಕ್ರಿಕೆಟ್ ಆಡಲು ಆರಂಭಿಸಿದ್ದರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ 16 ವರ್ಷದೊಳಗಿನ KSCA ಕಪ್ ನಲ್ಲಿ ತನ್ನ ಅತ್ಯದ್ಭುತ ಬ್ಯಾಟಿಂಗ್ ಮೂಲಕ ಮೂರು ಶತಕ ಹಾಗೂ ಮೂರು ಅರ್ಧ ಶತಕಗಳೊಂದಿಗೆ 565 ರನ್ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.
ಅದಷ್ಟೇ ಅಲ್ಲದೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸುತ್ತಿರುವ 14 ವರ್ಷದೊಳಗಿನ ಪಂದ್ಯಾವಳಿಯಲ್ಲಿಯೂ ಸಹ ನಿತೀನ್ ಸತತವಾಗಿ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳ ಮನ ಗೆದ್ದಿದ್ದಾರೆ.
ವಿರಾಟ್ ಕೊಹ್ಲಿ ಅವರ ಬಹ ದೊಡ್ಡ ಅಭಿಮಾನಿಯಾಗಿರು ಈ ಪುಟ್ಟ ಪೋರ ಟೀಂ ಇಂಡಿಯಾದ ಆಟಗಾರನಾಗಿ ಮೂರು ಫಾರ್ಮ್ಯಾಟ್ ನಲ್ಲಿ ಮಿಂಚಬೇಕೆಂಬ ಇಂಗಿತವನ್ನು ಹೊಂದಿದ್ದಾರೆ. ನಿತೀಶ್ ಕೇವಲ ಕ್ರಿಕೆಟ್ ನಲ್ಲಿ ಮಾತ್ರವಲ್ಲದೇಓದಿನಲ್ಲಿಯೂ ಕೂಡ ಉತ್ತಮ ಅಂಕ ಗಳಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…