ಕ್ರೀಡೆ

KSCA ಟೂರ್ನಿಯ ಸೆನ್ಸೆಷನಲ್‌ ಆಟಗಾರನಾದ ಪುಟ್ಟ ಪೋರ

ಬೆಂಗಳೂರು : ಕರ್ನಾಟಕ ರಾಜ್ಯದ ಕ್ರಿಕೆಟ್‌ ಲೋಕದಲ್ಲಿ ಪುಟ್ಟ ಪ್ರತಿಭೆಯೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.

ನಿತೀಶ್‌ ಆರ್ಯ ಎಂಬ ಪುಟ್ಟ ಬಾಲಕ ತನ್ನ ಅದ್ಭುತ ಬ್ಯಾಟಿಂಗ್‌ ನಿಂದ ಮೋಡಿ ಮಾಡಿದ್ದಾನೆ. ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ನಡೆಸಿರುವ 2023-24 ನೇ ಆವೃತ್ತಿಯ ವಿವಿಧ ಪಂದ್ಯಗಳಲ್ಲಿ 1400 ರನ್‌ ಗಳಿಸುವ ಮೂಲಕ ಕ್ರಿಕೆಟ್‌ ಪ್ರಿಯರ ಮನ ಗೆದ್ದಿದ್ದಾರೆ.

ಬೆಂಗಳೂರು ಮೂಲದ ನಿತೀಶ್‌ ಗೆ ಈಗ 13ರ ಹರೆಯ. ಸಧ್ಯ ಈತ ಕರ್ನಾಟಕ ಕ್ರಿಕೆಟ್‌ ವಲಯದ ಸೆನ್ಸೆಷನಲ್‌ ಆಟಗಾರನಾಗಿದ್ದಾರೆ.

ನಿತೀಶ್‌ ಆರ್ಯ ಪ್ರಸ್ತುತ ರಾಜಾಜಿ ನಗರ ಕ್ರಿಕೆಟರ್ಸ್‌ ಹಾಗೂ ತಾನೂ ಓದುತ್ತಿರುವ ಬಸವೇಶ್ವರ ನಗರದ ಮ್ಯಾಕ್ಸ್‌ ಮುಲ್ಲರ್‌ ಹೈಸ್ಕೂಲ್‌ ಪರವಾಗಿ ಆಟ ಆಡುತ್ತಿದ್ದಾರೆ.

ಪ್ರಸ್ತುತ ಏಳನೇ ತರಗತಿಯಲ್ಲಿ ಓಡುತ್ತಿರುವ ನಿತೀನ್‌ ಆರ್ಯ 3 ವರ್ಷದ ಪುಟ್ಟ ಮಗುವಾಗಿದ್ದಾಗಲೇ ಕ್ರಿಕೆಟ್‌ ಆಡಲು ಆರಂಭಿಸಿದ್ದರು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಯೋಜಿಸಿರುವ 16 ವರ್ಷದೊಳಗಿನ KSCA ಕಪ್‌ ನಲ್ಲಿ ತನ್ನ ಅತ್ಯದ್ಭುತ ಬ್ಯಾಟಿಂಗ್‌ ಮೂಲಕ ಮೂರು ಶತಕ ಹಾಗೂ ಮೂರು ಅರ್ಧ ಶತಕಗಳೊಂದಿಗೆ 565 ರನ್‌ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ಅದಷ್ಟೇ ಅಲ್ಲದೆ, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ನಡೆಸುತ್ತಿರುವ 14 ವರ್ಷದೊಳಗಿನ ಪಂದ್ಯಾವಳಿಯಲ್ಲಿಯೂ ಸಹ ನಿತೀನ್‌ ಸತತವಾಗಿ ಉತ್ತಮ ಬ್ಯಾಟಿಂಗ್‌ ಮಾಡುವ ಮೂಲಕ ಕ್ರಿಕೆಟ್‌ ಪ್ರೇಮಿಗಳ ಮನ ಗೆದ್ದಿದ್ದಾರೆ.

ವಿರಾಟ್‌ ಕೊಹ್ಲಿ ಅವರ ಬಹ ದೊಡ್ಡ ಅಭಿಮಾನಿಯಾಗಿರು ಈ ಪುಟ್ಟ ಪೋರ ಟೀಂ ಇಂಡಿಯಾದ ಆಟಗಾರನಾಗಿ ಮೂರು ಫಾರ್ಮ್ಯಾಟ್‌ ನಲ್ಲಿ ಮಿಂಚಬೇಕೆಂಬ ಇಂಗಿತವನ್ನು ಹೊಂದಿದ್ದಾರೆ. ನಿತೀಶ್‌ ಕೇವಲ ಕ್ರಿಕೆಟ್‌ ನಲ್ಲಿ ಮಾತ್ರವಲ್ಲದೇಓದಿನಲ್ಲಿಯೂ ಕೂಡ ಉತ್ತಮ ಅಂಕ ಗಳಿಸಿದ್ದಾರೆ.

lokesh

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 hour ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

2 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

7 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

23 hours ago