ಇಂದು ದೇಶಾದ್ಯಂತ ಐದನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 6 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 49 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಇದರಲ್ಲಿ ಮಹಾರಾಷ್ಟ್ರದ 13 ಕ್ಷೇತ್ರಗಳಿಗೂ ಇಂದೇ ಮತದಾನ ನಡೆಯುತ್ತಿದೆ.
ಮಹಾರಾಷ್ಟ್ರದ ಇಂದು ಗಾಡ್ ಆಫ್ ಕ್ರಿಕೆಟ್ ಸಚಿನ್ ತೆಂಡುಲ್ಕರ್, ಸುನಿಲ್ ಗವಾಸ್ಕರ್ ಅಜಿಂಕೆ ರಹಾನೆ ಸೇರಿದಂತೆ ಹಲವು ಕ್ರಿಕೇಟಿಗರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.
ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರು ತಮ್ಮ ಪುತ್ರ ಅರ್ಜುನ್ ತೆಂಡುಲ್ಕರ್ ಜತೆ ಮುಂಬೈನ ಮತಗಟ್ಟೆಯೊಂದರಲ್ಲಿ ಮತದಾನ ಮಾಡಿದರು.
ದಕ್ಷಿಣ ಮುಂಬೈನ ವರ್ಲಿ ಯಲ್ಲಿ ಮಾಜಿ ಕ್ರಿಕೇಟಿಗ ಸುನೀಲ್ ಗವಾಸ್ಕರ್ ಮತದಾನ ಮಾಡಿದರು. ಬಳಿಕ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಸೂಚಿಸಿದರು.
ಅಜಿಂಕೆ ರಹಾನೆ ತಮ್ಮ ಪತ್ನಿಯೊಂದಿಗೆ ಬಂದು ಮತದಾನ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಸೂರ್ಯಕುಮಾರ್ ಯಾದವ್ ಕೂಡಾ ಮತದಾನ ಮಾಡಿ ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದ್ದಾರೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…