ಕ್ರೀಡೆ

ಎಲ್‌ಪಿಎಲ್‌ 2023: ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ಸ್

ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.

ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್​ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್​ ಬಾರಿಸಿದರು.

ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್​ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್​ ಕಲೆಹಾಕಿತು.

148 ರನ್​ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್​ಗಳ ಕೊಡುಗೆ ನೀಡಿದರು.

ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್​ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್‌.

ಸರಣಿ ಶ್ರೇಷ್ಠ : ವನಿಂದು ಹಸರಂಗ

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

8 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

8 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

8 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

8 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

10 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

11 hours ago