ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.
ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್ ಬಾರಿಸಿದರು.
ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿತು.
148 ರನ್ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್ಗಳ ಕೊಡುಗೆ ನೀಡಿದರು.
ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್.
ಸರಣಿ ಶ್ರೇಷ್ಠ : ವನಿಂದು ಹಸರಂಗ
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…