ಕ್ರೀಡೆ

ಎಲ್‌ಪಿಎಲ್‌ 2023: ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ಸ್

ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.

ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್​ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್​ ಬಾರಿಸಿದರು.

ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್​ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್​ ಕಲೆಹಾಕಿತು.

148 ರನ್​ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್​ಗಳ ಕೊಡುಗೆ ನೀಡಿದರು.

ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್​ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್‌.

ಸರಣಿ ಶ್ರೇಷ್ಠ : ವನಿಂದು ಹಸರಂಗ

andolanait

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

11 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

12 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

13 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

13 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

13 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

15 hours ago